AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್ಡಿಪಿಐ ಸಮಾವೇಶ ಬಳಿ ಪೊಲೀಸ್​ರಿಗೆ ನಿಂದಿಸಿದ ಪ್ರಕರಣ; ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳು ಹಲ್ಲೆಗೆ ಯತ್ನ

ಎಸ್ಡಿಪಿಐ ಸಮಾವೇಶ ಬಳಿ ಪೊಲೀಸ್​ರಿಗೆ ನಿಂದಿಸಿದ ಪ್ರಕರಣದ ವಿಚಾರವಾಗಿ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸುವಾಗ ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

ಎಸ್ಡಿಪಿಐ ಸಮಾವೇಶ ಬಳಿ ಪೊಲೀಸ್​ರಿಗೆ ನಿಂದಿಸಿದ ಪ್ರಕರಣ; ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳು ಹಲ್ಲೆಗೆ ಯತ್ನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 31, 2022 | 6:11 PM

Share

ಬೆಂಗಳೂರು: ಎಸ್ಡಿಪಿಐ (SDPI) ಸಮಾವೇಶ ಬಳಿ ಪೊಲೀಸ್​ರಿಗೆ (Police) ನಿಂದಿಸಿದ ಪ್ರಕರಣದ ವಿಚಾರವಾಗಿ ಆರೋಪಿಗಳನ್ನು  ಬೆಂಗಳೂರಿನಲ್ಲಿ (Bengaluru) ಬಂಧಿಸುವಾಗ ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಹಲ್ಲೆಗೆ ಯತ್ನಿಸಿದ್ದ ಆರೋಪಿ‌ ನೌಷಾದ್ ಮೂವರನ್ನ ಮಡಿವಾಳ ಪೊಲೀಸರು ಬಂಧಿಸಿದ್ದಾರೆ.  ಮಂಗಳೂರು ಪೊಲೀಸರ ದೂರಿನ ಮೇರೆಗೆ ಪೋಲಿಸರು ಬಂಧಿಸಲು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಆರೋಪಿ‌ ನೌಷಾದ್  ಮಡಿವಾಳದ ರೂಮೊಂದರಲ್ಲಿ ಇದ್ದನು.  ಬಂಧನದ ವೇಳೆ ಪೊಲೀಸರನ್ನು ತಳ್ಳಿ ಎಸ್ಕೇಪ್ ಆಗಲು ಯತ್ನಸಿದ್ದಾನೆ. ಇದಕ್ಕೆ ಸಹಕರಿಸಿದ ರೂಮ್ ಮೇಟ್ಸ್ ಕೂಡಾ ಅರೆಸ್ಟ್ ಆಗಿದ್ದಾರೆ.

ಮೇ 27 ರಂದು ಕಣ್ಣೂರಿನ ಡಾ. ಶ್ಯಾಮ್ ಪ್ರಸಾದ್ ಶೆಟ್ಟಿ ಮೈದಾನದಲ್ಲಿ ನಡೆದ ಎಸ್ ಡಿಪಿಐ ಸಮಾವೇಶದ ವೇಳೆ ನಗರದ ಕೊಡೆಕ್ಕಲ್ ಚೆಕ್ ಪೋಸ್ಟ್ ಬಳಿ ಕೆಟಿಎಂ ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು, ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಇಬ್ಬರು, ಕಾರು ಚಾಲಕ ಹಾಗೂ ಇತರರು ಪೊಲೀಸರನ್ನು ಅವಹೇಳನಕಾರಿಯಾಗಿ ನಿಂದಿಸಿ ಘೋಷಣೆಗಳನ್ನು ಕೂಗಿರುವ ವೀಡಿಯೋ ವೈರಲ್‌ ಆಗಿತ್ತು. ನಿಂದಿಸಿದ ವ್ಯಕ್ತಿಗಳ ಪೈಕಿ ಓರ್ವ ಕೈಯಲ್ಲಿ ಎಸ್‌ಡಿಪಿಐ ಧ್ವಜ ಹಿಡಿದುಕೊಂಡಿದ್ದ.

ಇದನ್ನು ಓದಿ: ಕರ್ನಾಟಕಕ್ಕೂ ಎಂಟ್ರಿ ಕೊಟ್ಟ ಮುಂಗಾರು ಮಳೆ; ಈ ಮಾನ್ಸೂನ್ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ

ಕಾರ್ಯಕ್ರಮದ ಬಂದೋಬಸ್ತ್‌ನಲ್ಲಿದ್ದ ಪೊಲೀಸ್‌ ಸಿಬಂದಿಗಳಿಗೆ ಪಡೀಲ್‌ ಕಡೆಯಿಂದ ಬಂದ ಆರೋಪಿಗಳು ಬ್ಯಾರಿ ಭಾಷೆಯಲ್ಲಿ ನಿಂದಿಸುತ್ತಾ ವೇಗವಾಗಿ ವಾಹನ ಚಲಾಯಿಸಿಕೊಂಡು ಹೋಗಿದ್ದಾರೆ. ಅದರೊಂದಿಗೆ ಕರ್ತವ್ಯನಿರತರಾಗಿದ್ದ ಪಿ.ಸಿ. ಸಂಗನಗೌಡ ಅವರ ಮೇಲೆ ವಾಹನ ಹತ್ತಿಸಲು ಮುಂದಾಗಿದ್ದಾರೆ. ಅವರು ಪಕ್ಕಕ್ಕೆ ಹಾರಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಮಂಗಳೂರು ಪೂರ್ವ ಪೊಲೀಸ್ ಠಾಣೆ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಚಂದ್ರಶೇಖರ.ಬಿ ಅವರು ದೂರು ನೀಡಿದ್ದರು.ಕರ್ತವ್ಯನಿರತ ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ನಿಂದಿಸಿ ಪೊಲೀಸರ ಮಾನಸಿಕ ಸ್ಥೈರ್ಯ ಕುಸಿಯುವಂತೆ ಮಾಡಿದ ಕುರಿತು ಪ್ರಕರಣ ದಾಖಲಾಗಿದೆ.

ಇದನ್ನು ಓದಿ: ಇಂಡಿಯಾ ಬುಕ್ ಆಫ್ ರೆಕಾರ್ಡ್​ಗೆ ಸೇರಿದ ಶಾಲೆಯ ಮೆಟ್ಟಿಲನ್ನು ಹತ್ತದ ಬೆಂಗಳೂರಿನ ಬಾಲಕ

ಈ ಕೃತ್ಯ ಎಸಗಿದ ಆರೋಪಿಗಳು ಬೆಂಗಳೂರಿನಲ್ಲಿ ತೆಲೆಮರಿಸಿಕೊಂಡಿದ್ದರು. ಈ ಸಂಭಂದ ಮಂಗಳೂರು ಪೊಲೀಸರು ಬೆಂಗಳೂರಿನ ಪೊಲೀಸರಿಗೆ ತಿಳಿಸಿದ್ದರು. ಆರೋಪಿಗಳಿಗಾಗಿ ಬಲೆ ಬೀಸಿದ್ದ ಪೊಲೀಸರು ಆರೋಪಿಗಳನ್ನು ಇಂದು (ಮೇ 31) ರಂದು ಬಂಧಿಸಲು ಯತ್ನಿಸಿದಾಗ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಮುಂದಾಗಿದ್ದರು. ಆಗ ಅವರನ್ನು ಸೆದೆ ಬಡೆದ ಪೊಲೀಸರು ಆರೋಪಿಗಳನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ