ಅಯೋಧ್ಯೆಯಿಂದ ಬೆಂಗಳೂರಿಗೆ ಬರಬೇಕಾದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ

|

Updated on: Oct 15, 2024 | 5:43 PM

ಉತ್ತರ ಪ್ರದೇಶದ ಅಯೋಧ್ಯೆಯಿಂದ ಬೆಂಗಳೂರಿಗೆ ಬರಬೇಕಾದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಹೀಗಾಗಿ ವಿಮಾನವನ್ನು ತಪಾಸಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬರುವುದು ತಡವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಯೋಧ್ಯೆಯಿಂದ ಬೆಂಗಳೂರಿಗೆ ಬರಬೇಕಾದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ
ಏರ್ ಇಂಡಿಯಾ
Follow us on

ಬೆಂಗಳೂರು, ಅಕ್ಟೋಬರ್ 15): ಉತ್ತರ ಪ್ರದೇಶದ ಅಯೋಧ್ಯೆಯಿಂದ ಬೆಂಗಳೂರಿಗೆ ಬರಬೇಕಾದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಇಂದು(ಮಂಗಳವಾರ) ಉತ್ತರ ಪ್ರದೇಶದ ಅಯೋಧ್ಯೆ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಮಂಗಳವಾರ ಉತ್ತರ ಪ್ರದೇಶದ ಅಯೋಧ್ಯೆ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡ ತಪಾಸಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಮಾನ ಬೆಂಗಳೂರಿಗೆ ಬರುವುದು ಕೊಂಚ ತಡವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ತಿಳಿಸಿದೆ.

ಇನ್ನು ಈ ಬಗ್ಗೆ ಅಯೋಧ್ಯೆ ವಿಮಾನ ನಿಲ್ದಾಣದ ನಿರ್ದೇಶಕ ವಿನೋದ್ ಕುಮಾರ್​ ಪ್ರತಿಕ್ರಿಯಿಸಿದ್ದು, ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಎಕ್ಸ್​ಪ್ರೆಸ್​ ವಿಮಾನವು ಉತ್ತರ ಪ್ರದೇಶದ ಅಯೋಧ್ಯೆ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮಾಹಿತಿ ನೀಡಿದ್ದಾರೆ.

ವಿಮಾನದಲ್ಲಿ 130 ಪ್ರಯಾಣಿಕರಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್​​ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ವಿಮಾನ ಸಂಸ್ಥೆಯ ಸಿಬ್ಬಂದಿ ಮತ್ತು ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವಿಮಾನ ಅಯೋಧ್ಯೆಯಿಂದ ಬೆಂಗಳೂರಿಗೆ ಬರುವುದು ತಡವಾಗಲಿದೆ.

Published On - 5:22 pm, Tue, 15 October 24