AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತ ಪೀಠದಲ್ಲಿ ಪೂಜಾ ವಿಧಾನ ವಿರೋಧಿಸಿ ಸೈಯದ್ ಗೌಸ್ ಮೊಹಿಯುದ್ದೀನ್ ಶಾ ಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ

ಸೈಯದ್ ಗೌಸ್ ಮೊಹಿಯುದ್ದೀನ್ ಶಾ ಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ವಜಾಗೊಂಡಿದ್ದು ವಿಭಾಗೀಯ ಪೀಠ ಏಕಸದಸ್ಯ ಪೀಠದ ಆದೇಶ ಎತ್ತಿಹಿಡಿದಿದೆ.

ದತ್ತ ಪೀಠದಲ್ಲಿ ಪೂಜಾ ವಿಧಾನ ವಿರೋಧಿಸಿ ಸೈಯದ್ ಗೌಸ್ ಮೊಹಿಯುದ್ದೀನ್ ಶಾ ಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ
ದತ್ತ ಪೀಠ(ಸಂಗ್ರಹ ಚಿತ್ರ)
TV9 Web
| Edited By: |

Updated on:Mar 06, 2023 | 12:19 PM

Share

ಬೆಂಗಳೂರು: ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ (Dattatreya Bababudan Swamy Dargah Dispute) ದಲ್ಲಿ ಪೂಜಾ ವಿಧಾನ ವಿಚಾರಕ್ಕೆ ಸಂಬಂಧಿಸಿ ಸೈಯದ್ ಗೌಸ್ ಮೊಹಿಯುದ್ದೀನ್ ಶಾ ಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ವಜಾಗೊಂಡಿದ್ದು ವಿಭಾಗೀಯ ಪೀಠ ಏಕಸದಸ್ಯ ಪೀಠದ ಆದೇಶ ಎತ್ತಿಹಿಡಿದಿದೆ.

ಪೂಜೆಗೆ ಅರ್ಚಕರನ್ನು ನೇಮಿಸಲು 2018ರಲ್ಲಿ ಸರ್ಕಾರ ನಿರಾಕರಿಸಿತ್ತು. ಮುಜಾವರ್​​​ಗಳಿಂದಲೇ ಧಾರ್ಮಿಕ ಆಚರಣೆಗೆ ತೀರ್ಮಾನಿಸಿತ್ತು. ಬಳಿಕ ಹೈಕೋರ್ಟ್ 2018ರಲ್ಲಿ ಸರ್ಕಾರ ಕೈಗೊಂಡಿದ್ದ ನಿರ್ಧಾರ ರದ್ದುಪಡಿಸಿ ಪೂಜಾ ವಿಧಾನದ ಕುರಿತು ಹೊಸದಾಗಿ ತೀರ್ಮಾನಿಸಲು ಆದೇಶಿಸಿತ್ತು. ಹೀಗಾಗಿ 2022ರಲ್ಲಿ ರಾಜ್ಯ ಸರ್ಕಾರ ಹೊಸದಾಗಿ ಆದೇಶ ಹೊರಡಿಸಿತು. ಎರಡೂ ಧರ್ಮದ ಸಂಪ್ರದಾಯಗಳ ಪ್ರಕಾರ ಮುಜಾವರ್ ಹಾಗೂ ಅರ್ಚಕರ ಪೂಜಾವಿಧಿಗೆ ಅವಕಾಶ ನೀಡಿತು. ಈ ನಿರ್ಧಾರಕ್ಕೆ ಸೈಯದ್ ಗೌಸ್ ಮೊಹಿಯುದ್ದೀನ್ ಶಾ ಖಾದ್ರಿ ವಿರೋಧ ವ್ಯಕ್ತಪಡಿಸಿದ್ದರು. ಸದ್ಯ ಮೊಹಿಯುದ್ದೀನ್ ಶಾ ಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ವಜಾಗೊಂಡಿದೆ. ಹಿಂದೂ ಸಂಘಟನೆ ಪರ ಜಗದೀಶ್ ಬಾಳಿಗಾ ವಾದಿಸಿದ್ದಾರೆ.

ಇದನ್ನೂ ಓದಿ: Datta Peetha: ಚಿಕ್ಕಮಗಳೂರಿನ ದತ್ತಪೀಠದಲ್ಲಿ ದತ್ತಪಾದುಕೆಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಮೋದ್ ಮುತಾಲಿಕ್

ಏನಿದು ವಿವಾದ?

ಬಾಬಾಬುಡನ್‌ ಗಿರಿ ಅಥವಾ ಶ್ರೀಗುರುದತ್ತಾತ್ರೇಯ ಯಾರಿಗೆ ಸೇರಿದ್ದು ಎಂಬ ಬಗ್ಗೆ ವಾದ ವಿವಾದಗಳು ನಡೆಯುತ್ತಲೇ ಇವೆ. ಶ್ರೀ ಗುರು ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಎನ್ನುವುದು ಮೂಲ ಸರ್ಕಾರಿ ದಾಖಲಾತಿಗಳಲ್ಲಿ ಇರುವ ಹೆಸರಿದೆ. ಆದರೆ ಈ ಸ್ಥಳವನ್ನು ಬಾಬಾ ಬುಡನ್‌ ಗಿರಿ ಎಂದೂ ಮತ್ತೆ ಕೆಲವರು ಇನಾಂ ದತ್ತಾತ್ರೇಯ ಪೀಠ ಎಂದೂ ಕರೆಯುತ್ತಾರೆ. ಕಳೆದ ನಾಲ್ಕೈದು ದಶಕಗಳಿಂದ ಹಿಂದೂ-ಮುಸ್ಲಿಮರ ಧಾರ್ಮಿಕ ಭಾವೈಕ್ಯತಾ ಕೇಂದ್ರದ ಮೂಲಕ ವಿವಾದಿತ ಕೇಂದ್ರವೂ ಆಗಿದ್ದ ಈ ಧಾರ್ಮಿಕ ಕೇಂದ್ರದ ನಮ್ಮದು ಎಂದು ಎರಡು ಧರ್ಮದವರು ನ್ಯಾಯಾಲಯದಲ್ಲಿ ವಾದ-ಪ್ರತಿವಾದ ಮಂಡಿಸುತ್ತಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:04 pm, Mon, 6 March 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?