AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಡಿಪೋ ಮ್ಯಾನೇಜರ್ ಕಿರುಕುಳ ಆರೋಪ, ಅಮಾನತಾಗಿದ್ದ ಡ್ರೈವರ್​ ಆತ್ಮಹತ್ಯೆಗೆ ಯತ್ನ

ಹಾವೇರಿ ಡಿಪೋ ಮ್ಯಾನೇಜರ್ ಕಿರುಕುಳ ಆರೋಪದ ಹಿನ್ನೆಯಲ್ಲಿ ಡ್ರೈವರ್ ಕಂ ಕಂಡಕ್ಟರ್ ಆಗಿದ್ದ ಮನೋಜಕುಮಾರ್​ (44) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ.

ಹಾವೇರಿ: ಡಿಪೋ ಮ್ಯಾನೇಜರ್ ಕಿರುಕುಳ ಆರೋಪ, ಅಮಾನತಾಗಿದ್ದ ಡ್ರೈವರ್​ ಆತ್ಮಹತ್ಯೆಗೆ ಯತ್ನ
ಮನೋಜಕುಮಾರ್​ (44)
shruti hegde
| Edited By: ಸಾಧು ಶ್ರೀನಾಥ್​|

Updated on:Mar 16, 2021 | 2:24 PM

Share

ಹಾವೇರಿ: ಡಿಪೋ ಮ್ಯಾನೇಜರ್ ಕಿರುಕುಳ ಆರೋಪದ ಹಿನ್ನೆಯಲ್ಲಿ ಡ್ರೈವರ್ ಕಂ ಕಂಡಕ್ಟರ್ ಆಗಿದ್ದ ಮನೋಜಕುಮಾರ್​ (44) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ. ಘಟನೆ ಜಿಲ್ಲೆಯ ಬ್ಯಾಡಗಿ ವಾಯುವ್ಯ ಸಾರಿಗೆ ಸಂಸ್ಥೆಯ ಡಿಪೋದಲ್ಲಿ ನಡೆದಿದೆ.

ಅಸ್ವಸ್ಥಗೊಂಡ ಮನೋಜಕುಮಾರ್​ಗೆ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಡಿಪೋಗೆ ಬಂದಿದ್ದರೂ ಕರ್ತವ್ಯಕ್ಕೆ ತೆರಳದೆ ಕಾಲಹರಣ ಮಾಡುತ್ತಿದ್ದೀರಿ ಎಂದು ಕಾರಣ ನೀಡಿ ಮನೋಜಕುಮಾರ್​ನನ್ನು ಡಿಪೋ ಮ್ಯಾನೇಜರ್ ಐದು ದಿನಗಳ ಹಿಂದೆ ಅಮಾನತು ಮಾಡಿದ್ದರು.

ಈ ಹಿನ್ನೆಯಲ್ಲಿ, ಇವತ್ತು ಮ್ಯಾನೇಜರ್​ ಬಳಿ ಹೋಗಿ ಹೀಗ್ಯಾಕೆ ಮಾಡಿದ್ದೀರಿ? ನನ್ನ ಹೆಂಡತಿ‌ ಮಕ್ಕಳ ಗತಿ ಏನು? ಎಂದು ಪ್ರಶ್ನಿಸಲು ಕಂಡಕ್ಟರ್​ ಮನೋಜ​ಕುಮಾರ್​ ಹೋಗಿದ್ದಾಗಲೇ ಮನೋಜಕುಮಾರ್​ ವಿಷ ಸೇವಿಸಿದ್ದಾರೆ. ಡಿಪೋ‌ ಮ್ಯಾನೇಜರ್ ಕಿರುಕುಳದ ವಿರುದ್ಧ ಸಾರಿಗೆ ಇಲಾಖೆ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮನೋಜಕುಮಾರ್​ರನ್ನು ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಅಕ್ಕನ ಮನೆಗೆ ಕರೆದುಕೊಂಡು ಹೋಗದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ತಂಗಿ

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಪ್ರೇಮ ಕಲಹ: ಮಾವ ಬಿಜೆಪಿ ಸಂಸದ -ಅತ್ತೆ ಶಾಸಕಿ! ಸೊಸೆಯಿಂದ ಆತ್ಮಹತ್ಯೆಗೆ ಯತ್ನ

Published On - 2:24 pm, Tue, 16 March 21

Follow Us
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ