AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಡಿಪೋ ಮ್ಯಾನೇಜರ್ ಕಿರುಕುಳ ಆರೋಪ, ಅಮಾನತಾಗಿದ್ದ ಡ್ರೈವರ್​ ಆತ್ಮಹತ್ಯೆಗೆ ಯತ್ನ

ಹಾವೇರಿ ಡಿಪೋ ಮ್ಯಾನೇಜರ್ ಕಿರುಕುಳ ಆರೋಪದ ಹಿನ್ನೆಯಲ್ಲಿ ಡ್ರೈವರ್ ಕಂ ಕಂಡಕ್ಟರ್ ಆಗಿದ್ದ ಮನೋಜಕುಮಾರ್​ (44) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ.

ಹಾವೇರಿ: ಡಿಪೋ ಮ್ಯಾನೇಜರ್ ಕಿರುಕುಳ ಆರೋಪ, ಅಮಾನತಾಗಿದ್ದ ಡ್ರೈವರ್​ ಆತ್ಮಹತ್ಯೆಗೆ ಯತ್ನ
ಮನೋಜಕುಮಾರ್​ (44)
shruti hegde
| Edited By: |

Updated on:Mar 16, 2021 | 2:24 PM

Share

ಹಾವೇರಿ: ಡಿಪೋ ಮ್ಯಾನೇಜರ್ ಕಿರುಕುಳ ಆರೋಪದ ಹಿನ್ನೆಯಲ್ಲಿ ಡ್ರೈವರ್ ಕಂ ಕಂಡಕ್ಟರ್ ಆಗಿದ್ದ ಮನೋಜಕುಮಾರ್​ (44) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ. ಘಟನೆ ಜಿಲ್ಲೆಯ ಬ್ಯಾಡಗಿ ವಾಯುವ್ಯ ಸಾರಿಗೆ ಸಂಸ್ಥೆಯ ಡಿಪೋದಲ್ಲಿ ನಡೆದಿದೆ.

ಅಸ್ವಸ್ಥಗೊಂಡ ಮನೋಜಕುಮಾರ್​ಗೆ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಡಿಪೋಗೆ ಬಂದಿದ್ದರೂ ಕರ್ತವ್ಯಕ್ಕೆ ತೆರಳದೆ ಕಾಲಹರಣ ಮಾಡುತ್ತಿದ್ದೀರಿ ಎಂದು ಕಾರಣ ನೀಡಿ ಮನೋಜಕುಮಾರ್​ನನ್ನು ಡಿಪೋ ಮ್ಯಾನೇಜರ್ ಐದು ದಿನಗಳ ಹಿಂದೆ ಅಮಾನತು ಮಾಡಿದ್ದರು.

ಈ ಹಿನ್ನೆಯಲ್ಲಿ, ಇವತ್ತು ಮ್ಯಾನೇಜರ್​ ಬಳಿ ಹೋಗಿ ಹೀಗ್ಯಾಕೆ ಮಾಡಿದ್ದೀರಿ? ನನ್ನ ಹೆಂಡತಿ‌ ಮಕ್ಕಳ ಗತಿ ಏನು? ಎಂದು ಪ್ರಶ್ನಿಸಲು ಕಂಡಕ್ಟರ್​ ಮನೋಜ​ಕುಮಾರ್​ ಹೋಗಿದ್ದಾಗಲೇ ಮನೋಜಕುಮಾರ್​ ವಿಷ ಸೇವಿಸಿದ್ದಾರೆ. ಡಿಪೋ‌ ಮ್ಯಾನೇಜರ್ ಕಿರುಕುಳದ ವಿರುದ್ಧ ಸಾರಿಗೆ ಇಲಾಖೆ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮನೋಜಕುಮಾರ್​ರನ್ನು ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಅಕ್ಕನ ಮನೆಗೆ ಕರೆದುಕೊಂಡು ಹೋಗದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ತಂಗಿ

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಪ್ರೇಮ ಕಲಹ: ಮಾವ ಬಿಜೆಪಿ ಸಂಸದ -ಅತ್ತೆ ಶಾಸಕಿ! ಸೊಸೆಯಿಂದ ಆತ್ಮಹತ್ಯೆಗೆ ಯತ್ನ

Published On - 2:24 pm, Tue, 16 March 21

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ