AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಹಬ್ಬ ದಸರಾ: ಆನೆಗಳಿಗೆ 3ನೇ ಹಂತದ ಫಿರಂಗಿ ತಾಲೀಮು

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಶುರುವಾಗಲು ಇನ್ನೇನು ಕೆಲವೇ ದಿನಗಳಷ್ಟೇ ಬಾಕಿ ಇದೆ. ಹೀಗಾಗಿ ದಸರಾದ ಜಂಬೂಸವಾರಿಯಲ್ಲಿ ಭಾಗಿಯಾಗುವ ಆನೆಗಳಿಗೆ ಮತ್ತು ಕುದುರೆಗಳಿಗೆ ಇಂದು 3ನೇ ಹಂತದ ಫಿರಂಗಿ ತಾಲೀಮು ನಡೆಸಲಾಗಿದೆ. ಮೈಸೂರಿನ ಅಂಬಾ ವಿಲಾಸ ಅರಮನೆಯ ಕೋಟೆ ಮಾರಮ್ಮ ದೇವಸ್ಥಾನದ ಬಳಿ ಶಸಸ್ತ್ರ ಮೀಸಲು ಪಡೆ ಸಿಬ್ಬಂದಿಯಿಂದ  ಫಿರಂಗಿ ತಾಲೀಮು ನಡೆಸಲಾಗಿದೆ. 7 ಫಿರಂಗಿ ಗಾಡಿಗಳ ಮೂಲಕ 3 ಸುತ್ತುಗಳಲ್ಲಿ ಒಟ್ಟು 21 ಕುಶಾಲತೋಪು ಸಿಡಿಸಿ ಪೂರ್ವಾಭ್ಯಾಸ ನಡೆಸಲಾಗಿದೆ. ಈ ಮೂಲಕ ಆನೆಗಳಿಗೆ ಮತ್ತು ಕುದುರೆಗಳಿಗೆ […]

ನಾಡಹಬ್ಬ ದಸರಾ: ಆನೆಗಳಿಗೆ 3ನೇ ಹಂತದ ಫಿರಂಗಿ ತಾಲೀಮು
ಸಾಧು ಶ್ರೀನಾಥ್​
|

Updated on:Sep 27, 2019 | 3:55 PM

Share

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಶುರುವಾಗಲು ಇನ್ನೇನು ಕೆಲವೇ ದಿನಗಳಷ್ಟೇ ಬಾಕಿ ಇದೆ. ಹೀಗಾಗಿ ದಸರಾದ ಜಂಬೂಸವಾರಿಯಲ್ಲಿ ಭಾಗಿಯಾಗುವ ಆನೆಗಳಿಗೆ ಮತ್ತು ಕುದುರೆಗಳಿಗೆ ಇಂದು 3ನೇ ಹಂತದ ಫಿರಂಗಿ ತಾಲೀಮು ನಡೆಸಲಾಗಿದೆ.

ಮೈಸೂರಿನ ಅಂಬಾ ವಿಲಾಸ ಅರಮನೆಯ ಕೋಟೆ ಮಾರಮ್ಮ ದೇವಸ್ಥಾನದ ಬಳಿ ಶಸಸ್ತ್ರ ಮೀಸಲು ಪಡೆ ಸಿಬ್ಬಂದಿಯಿಂದ  ಫಿರಂಗಿ ತಾಲೀಮು ನಡೆಸಲಾಗಿದೆ. 7 ಫಿರಂಗಿ ಗಾಡಿಗಳ ಮೂಲಕ 3 ಸುತ್ತುಗಳಲ್ಲಿ ಒಟ್ಟು 21 ಕುಶಾಲತೋಪು ಸಿಡಿಸಿ ಪೂರ್ವಾಭ್ಯಾಸ ನಡೆಸಲಾಗಿದೆ. ಈ ಮೂಲಕ ಆನೆಗಳಿಗೆ ಮತ್ತು ಕುದುರೆಗಳಿಗೆ ಭಾರಿ ಶಬ್ಧವನ್ನು ಪರಿಚಯಿಸಿದ್ದಾರೆ.

ಈಗಾಗಲೇ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ 12 ಆನೆಗಳು ಮತ್ತು 25 ಕುದುರೆಗಳಿಗೆ ಎರಡು ಬಾರಿ ಫಿರಂಗಿಗಳ ಶಬ್ಧ ಪರಿಚಯಿಸಿದ್ದಾರೆ. ಇದೀಗ 3ನೇ ಬಾರಿ ನಗರ ಪೊಲೀಸ್​ ಆಯುಕ್ತ ಟಿ.ಬಾಲಕೃಷ್ಣ ನೇತೃತ್ವದಲ್ಲಿ ನಗರ ಸಶಸ್ತ್ರ ಮೀಸಲು ಪಡೆಯ 30 ಸಿಬ್ಬಂದಿಯಿಂದ ಫಿರಂಗಿ ತಾಲೀಮು ನಡೆದಿದೆ. ಬೆದರುವ ಲಕ್ಷಣಗಳಿರುವ 6 ಆನೆಗಳ ಕಾಲುಗಳನ್ನ ಸರಪಣಿಯಿಂದ ಕಟ್ಟಿ ಮುಂಜಾಗ್ರತೆ ವಹಿಸಿದ್ದಾರೆ.

Published On - 3:45 pm, Fri, 27 September 19

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ