AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಹಣಕ್ಕಾಗಿ ಹೆತ್ತ ತಾಯಿಯನ್ನೇ ಹತ್ಯೆಗೈದಿದ್ದ ಮಕ್ಕಳಿಬ್ಬರ ಸೆರೆ

ಹಣಕ್ಕಾಗಿ ಹೆತ್ತ ತಾಯಿಯನ್ನೇ ಹತ್ಯೆಗೈದ ಘಟನೆ ಹಾಸನದಲ್ಲಿ ನಡೆದಿದೆ. ಆರೋಪಿ ಪುತ್ರರನ್ನು ಪೊಲೀಸರು ಬಂಧಿಸಿದ್ದಾರೆ.

ಹಾಸನ: ಹಣಕ್ಕಾಗಿ ಹೆತ್ತ ತಾಯಿಯನ್ನೇ ಹತ್ಯೆಗೈದಿದ್ದ ಮಕ್ಕಳಿಬ್ಬರ ಸೆರೆ
ತಂಗ್ಯಮ್ಮ(65)
shruti hegde
|

Updated on: Mar 19, 2021 | 12:38 PM

Share

ಹಾಸನ: ಸಕಲೇಶಪುರ ತಾಲ್ಲೂಕಿನ ಕರಡಿಗಾಲ ಗ್ರಾಮದಲ್ಲಿ ವೃದ್ಧೆಯ ‌ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕ್ಕಾಗಿ ಹೆತ್ತಮ್ಮನನ್ನೇ ಕೊಂದು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದ ಪುತ್ರರನ್ನು ಪೊಲೀಸರು ಬಂಧಿಸಿದ್ದಾರೆ.

ತಂಗ್ಯಮ್ಮ(65) ಕೊಲೆಯಾದ ಮಹಿಳೆಯಾಗಿದ್ದು, ಪುತ್ರರಾದ ರಾಜೇಗೌಡ(48) ಮತ್ತು ಸುಬ್ರಮಣಿ(45) ಆರೋಪಿಗಳು ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಗಿರವಿ ಇಟ್ಟಿದ್ದ ಒಡವೆ ಬಿಡಿಸಿ ತಮಗೆ ಕೊಡುವಂತೆ ಮಕ್ಕಳು ಪೀಡಿಸುತ್ತಿದ್ದರು. ಒಡವೆಯನ್ನ ಕೊಡಲು ಒಪ್ಪದಿದ್ದಕ್ಕೆ ತಾಯಿಯ ಕುತ್ತಿಗೆ ಹಿಸುಕಿ ಹೈತ್ಯೆಗೈದಿದ್ದಾರೆ. ಮಾರ್ಚ್ 17ರಂದು ಮಹಿಳೆ ಶವ ಅನುಮಾನಾಸ್ಪದ ರೀತಿಯಲ್ಲಿ ಮನೆಯಲ್ಲಿ ಪತ್ತೆಯಾಗಿತ್ತು. ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪುತ್ರರು ನಂಬಿಸಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದರು.

ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಾವಿನ ಕುರಿತಾಗಿ ಪೊಲೀಸರಿಗೆ ಕಿರಿಯ ಪುತ್ರ ಹೇಮಂತ್ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ತನಿಖೆಗೆ ಇಳಿದ ಸಕಲೇಶಪುರ ಗ್ರಾಮಾಂತರ ಪೊಲೀಸರಿಗೆ ಪುತ್ರರೇ ಕೊಲೆ ಮಾಡಿರುವುದು ತಿಳಿದು ಬಂದಿದೆ.

ಮಾರ್ಚ್ 16 ರ ಸಂಜೆ ತಾಯಿಯನ್ನ ಕೊಲೆ ಮಾಡಿದ್ದರು. ಮರುದಿನ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಕತೆ ಕಟ್ಟಿ ಅಂತ್ಯಕ್ರಿಯೆಗೆ ತಯಾರು ನಡೆಸಿದ್ದರು. ಇದೀಗ ನಿಜಾಂಶ ತಿಳಿದು ಬಂದಿದ್ದು ಮಾರ್ಚ್ 18ಕ್ಕೆ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಕೋರ್ಟ್​ನಿಂದ ಹಿಂದಿರುಗುವಾಗ ಅಡ್ಡಗಟ್ಟಿ ಮಾಲೂರು ರೌಡಿಯ ಕೊಲೆ

ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆಯ ಮೃತ ದೇಹ ಪತ್ತೆ: ಪತಿಯ ವಿರುದ್ಧ ಕುಟುಂಬಸ್ಥರಿಂದ ಕೊಲೆ ಆರೋಪ

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ