ಮೈಸೂರು ದಸರಾಗೆ ಉಪಚುನಾವಣೆಯ ನೀತಿ ಸಂಹಿತೆ ಅನ್ವಯಿಸಲ್ಲ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಉಪಚುನಾವಣೆಯ ನೀತಿಸಂಹಿತೆ ಅನ್ವಯಿಸುವುದಿಲ್ಲ. ದಸರಾಗೆ ವಿನಾಯಿತಿ ನೀಡಿ ರಾಜ್ಯ ಚುನಾವಣಾ ಆಯೋಗ ಅಧಿಕೃತ ಆದೇಶ ಹೊರಡಿಸಿದೆ. 2018ರ ಆದೇಶದಂತೆ ಉಪಚುನಾವಣೆ ನಡೆಯುವ ಹುಣಸೂರು ಕ್ಷೇತ್ರದಲ್ಲಿ ಮಾತ್ರ ನೀತಿಸಂಹಿತೆ ಜಾರಿಯಲ್ಲಿರಲಿದೆ. ಉಪಚುನಾವಣೆ ನಡೆಯುವ ಹುಣಸೂರು ಕ್ಷೇತ್ರ ಹೊರತುಪಡಿಸಿ, ಜಿಲ್ಲೆಯಲ್ಲಿ ನಡೆಯುವ ದಸರಾಗೆ ನೀತಿ ಸಂತಿಹಿ ಅನ್ವಯಿಸುವುದಿಲ್ಲ. ಅಲ್ಲದೆ, ಮೈಸೂರು ದಸರಾ ಕಾರ್ಯಕ್ರಮಗಳಲ್ಲಿ ಜನಪ್ರತಿನಿಧಿಗಳು ಭಾಗವಹಿಸಬಹುದು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಮಾಹಿತಿ ನೀಡಿದ್ದಾರೆ. ಹುಣಸೂರು ಕ್ಷೇತ್ರದ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಮೈಸೂರು […]

ಮೈಸೂರು ದಸರಾಗೆ ಉಪಚುನಾವಣೆಯ ನೀತಿ ಸಂಹಿತೆ ಅನ್ವಯಿಸಲ್ಲ
ಸಾಧು ಶ್ರೀನಾಥ್​

Updated on: Sep 22, 2019 | 5:48 PM

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಉಪಚುನಾವಣೆಯ ನೀತಿಸಂಹಿತೆ ಅನ್ವಯಿಸುವುದಿಲ್ಲ. ದಸರಾಗೆ ವಿನಾಯಿತಿ ನೀಡಿ ರಾಜ್ಯ ಚುನಾವಣಾ ಆಯೋಗ ಅಧಿಕೃತ ಆದೇಶ ಹೊರಡಿಸಿದೆ.

2018ರ ಆದೇಶದಂತೆ ಉಪಚುನಾವಣೆ ನಡೆಯುವ ಹುಣಸೂರು ಕ್ಷೇತ್ರದಲ್ಲಿ ಮಾತ್ರ ನೀತಿಸಂಹಿತೆ ಜಾರಿಯಲ್ಲಿರಲಿದೆ. ಉಪಚುನಾವಣೆ ನಡೆಯುವ ಹುಣಸೂರು ಕ್ಷೇತ್ರ ಹೊರತುಪಡಿಸಿ, ಜಿಲ್ಲೆಯಲ್ಲಿ ನಡೆಯುವ ದಸರಾಗೆ ನೀತಿ ಸಂತಿಹಿ ಅನ್ವಯಿಸುವುದಿಲ್ಲ. ಅಲ್ಲದೆ, ಮೈಸೂರು ದಸರಾ ಕಾರ್ಯಕ್ರಮಗಳಲ್ಲಿ ಜನಪ್ರತಿನಿಧಿಗಳು ಭಾಗವಹಿಸಬಹುದು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಮಾಹಿತಿ ನೀಡಿದ್ದಾರೆ.

ಹುಣಸೂರು ಕ್ಷೇತ್ರದ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಮೈಸೂರು ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ ಎಂಬ ಗೊಂದಲ ಉಂಟಾಗಿತ್ತು. ಇದರಿಂದ ದಸರಾ ಆಚರಣೆ ಮೇಲೆ‌ ಕರಿ ನೆರಳು ಆವರಿಸಿತ್ತು. ಈ ಕುರಿತು ರಾಜ್ಯ ಚುನಾವಣಾ ಆಯೋಗಕ್ಕೆ ಡಿಸಿ ಅಭಿರಾಮ್ ಪತ್ರ ಬರೆದಿದ್ದರು. ಇದೀಗ ದಸರಾಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗಿಯಾಗಬಹುದಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us