AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿ ಮದುವೆಯಾದವರನ್ನು ಕಾಡುತ್ತಿದೆ ಜಾತಿ ಭೂತ; ಹುಡುಗಿ ಮನೆಯವರ ಕಿರುಕುಳಕ್ಕೆ ದಂಪತಿ ಕಂಗಾಲು

ಪ್ರೀತಿಸಿ ಮದುವೆಯಾಗಿ ಮನೆಯಿಂದ ಓಡಿಬಂದ ಜೋಡಿಗೆ ಇದೀಗ ಜಾತಿಯೇ ಭೂತದಂತೆ ಅಡ್ಡಬರುತ್ತಿದೆ. ಅದರಲ್ಲೂ ಹುಡುಗಿ ಮನೆಯವರೇ ಅಡ್ಡಿಪಡಿಸುತ್ತಿರುವುದು ನುಂಗಲಾರದ ತುತ್ತಾಗಿ ಪರಿಣಮಿಸಿದೆ. ತಮ್ಮನ್ನು ರಕ್ಷಣೆ ಮಾಡುವಂತೆ ಪೊಲೀಸ್​ ಠಾಣೆಯ ಮೆಟ್ಟಿಲು ಏರಿದರೂ ಪ್ರಯೋಜನ ಆಗುತ್ತಿಲ್ಲ.

ಪ್ರೀತಿಸಿ ಮದುವೆಯಾದವರನ್ನು ಕಾಡುತ್ತಿದೆ ಜಾತಿ ಭೂತ; ಹುಡುಗಿ ಮನೆಯವರ ಕಿರುಕುಳಕ್ಕೆ ದಂಪತಿ ಕಂಗಾಲು
Follow us
Lakshmi Hegde
| Updated By: ಪೃಥ್ವಿಶಂಕರ

Updated on:Jan 02, 2021 | 11:36 AM

ಬೀದರ್​: ಪ್ರೀತಿಸಿ ಮದುವೆಯಾಗಿ ಮನೆಯಿಂದ ಓಡಿಬಂದ ಜೋಡಿಗೆ ಇದೀಗ ಜಾತಿಯೇ ಭೂತದಂತೆ ಅಡ್ಡಬರುತ್ತಿದೆ. ಅದರಲ್ಲೂ ಹುಡುಗಿ ಮನೆಯವರೇ ಅಡ್ಡಿಪಡಿಸುತ್ತಿರುವುದು ನುಂಗಲಾರದ ತುತ್ತಾಗಿ ಪರಿಣಮಿಸಿದೆ. ತಮ್ಮನ್ನು ರಕ್ಷಣೆ ಮಾಡುವಂತೆ ಪೊಲೀಸ್​ ಠಾಣೆಯ ಮೆಟ್ಟಿಲು ಏರಿದರೂ ಪ್ರಯೋಜನ ಆಗುತ್ತಿಲ್ಲ.

ಏಳು ವರ್ಷಗಳಿಂದ ಪ್ರೀತಿಸುತ್ತಿದ್ದ ಹುಮನಾಬಾದ್ ಪಟ್ಟಣದ ಮರಾಠಾ ಗಲ್ಲಿಯ ನಿವಾಸಿಗಳಾದ ಸುಧಾರಾಣಿ ಮತ್ತು ಸೂರ್ಯಕಾಂತ್​ 2019ರ ನವೆಂಬರ್​ 13ರಂದು ರಿಜಿಸ್ಟರ್ ಮದುವೆಯಾಗಿದ್ದಾರೆ. ಆದರೆ ಜಾತಿ ಬೇರೆ ಎನ್ನುವ ಕಾರಣಕ್ಕೆ ಹುಡುಗಿಯ ಮನೆಯವರು ಮದುವೆಯನ್ನು ಒಪ್ಪುತ್ತಿಲ್ಲ. ಈ ಮಧ್ಯೆ ಹುಡುಗನಿಗೆ ನಿರಂತರವಾಗಿ ಬೆದರಿಕೆ ಕರೆಗಳನ್ನು ಮಾಡಲಾಗುತ್ತಿದ್ದು, ಆತನ ಕುಟುಂಬದವರಿಗೂ ಹುಡುಗಿ ಕಡೆಯವರು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎನ್ನಲಾಗಿದೆ. ನಮಗೆ ರಕ್ಷಣೆ ಕೊಡಿ ಎಂದು ಜೋಡಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಆದರೆ ಪೊಲೀಸರೂ ಇವರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಅಲವತ್ತುಕೊಳ್ಳುತ್ತಿದ್ದಾರೆ.

ಒಂದೇ ಬಡಾವಣೆ ನಿವಾಸಿಗಳು ಒಂದೇ ಬಡಾವಣೆಯಲ್ಲಿ ವಾಸವಾಗಿದ್ದ ಸುಧಾರಾಣಿ ಮತ್ತು ಸೂರ್ಯಕಾಂತ್ ನಡುವಿನ ಪರಿಚಯ ಪ್ರೀತಿಗೆ ತಿರುಗಿತ್ತು. ತಮ್ಮ ಪ್ರೇಮವನ್ನು ಬಿಟ್ಟುಕೊಡಲು ತಯಾರಿಲ್ಲದ ಇವರು, ವರ್ಷದ ಹಿಂದೆ ಮನೆಯವರ ವಿರೋಧದ ನಡುವೆಯೂ ಮದುವೆಯಾಗಿದ್ದಾರೆ. ಆದರೆ ಹುಡುಗಿಯ ಮನೆಯಲ್ಲಿ ಈ ವಿವಾಹವನ್ನು ಒಪ್ಪುತ್ತಿಲ್ಲ. ಆತನನ್ನು ಬಿಟ್ಟು ಬಾ ಎಂದು ಕಿರುಕುಳ ನೀಡುತ್ತಿದ್ದಾರೆ. ಇನ್ನು ಹುಡುಗನ ಕುಟುಂಬದವರು ಹುಡುಗಿಯ ಮನೆಯವರ ಕಿರುಕುಳಕ್ಕೆ ಹೆದರಿ ಮರಾಠಾ ಕಾಲನಿ ಬಿಟ್ಟು ವಿದ್ಯಾನಗರ ಕಾಲನಿಗೆ ಹೋಗಿ ವಾಸವಾಗಿದ್ದಾರೆ. ಆದರೂ ದಂಪತಿಗಾಗಲಿ, ಹುಡುಗನ ಮನೆಯವರಿಗಾಗಲಿ ಕಿರುಕುಳ ತಪ್ಪುತ್ತಿಲ್ಲ.

ಪ್ರೀತಿಸಿ ಮದುವೆಯಾಗಿದ್ದ ಜೋಡಿ ಹೈದರಾಬಾದ್​ಗೆ ತೆರಳಿದ್ದರು. ಈಗ ಒಂದು ತಿಂಗಳ ಹಿಂದಷ್ಟೇ ಅಲ್ಲಿಂದ ವಾಪಸ್​ ಬಂದಿದ್ದಾರೆ. ಆದರೆ ಹುಡುಗಿಯ ಅಣ್ಣ, ಚಿಕ್ಕಪ್ಪ ನಿರಂತರವಾಗಿ ಧಮಕಿ ಹಾಕುತ್ತಿದ್ದಾರೆ. ಪ್ರೇಮಿಗಳು ಪೊಲೀಸರ ಸಹಾಯಕ್ಕಾಗಿ ಕಾಯುತ್ತಿದ್ದಾರೆ.

ಕೊಟಗ್ಯಾಳ ಗ್ರಾಮದಲ್ಲಿ ಚಾಕುವಿನಿಂದ ಇರಿದು, ಬೆಂಕಿ ಹಚ್ಚಿ ಬಾಲಕನ ಬರ್ಬರ ಹತ್ಯೆ

Published On - 9:56 am, Sat, 2 January 21

ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ