AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತಪಟ್ಟ ವ್ಯಕ್ತಿ ಮತ್ತೆ ಜೀವಂತ! ರಾಮನಗರ ಜಿಲ್ಲೆಯಲ್ಲೊಂದು ಅಚ್ಚರಿ ಘಟನೆ

ರಾಮನಗರ ಜಿಲ್ಲೆಯಲ್ಲೊಂದು ವೈದ್ಯಕೀಯ ಲೋಕಕ್ಕೂ ಮೀರಿದ ಅಚ್ಚರಿಯ ಘಟನೆಯೊಂದು ನಡೆದಿದೆ. ಬೆಳಗ್ಗೆ 6.30ಕ್ಕೆ ಮೃತಪಟ್ಟಿದ್ದ ವ್ಯಕ್ತಿಗೆ ಮಧ್ಯಾಹ್ನ 12 ಗಂಟೆಗೆ ಮರುಜೀವ ಬಂದಿದೆ. ಬಳಿಕ ಮಧ್ಯಾಹ್ನ 12.45ಕ್ಕೆ ಮತ್ತೆ ಮೃತಪಟ್ಟಿದ್ದಾರೆ. ಶಿವರಾಮು ಶವವನ್ನು ಮತ್ತೆ ಹುಚ್ಚಯ್ಯನದೊಡ್ಡಿಗೆ ಸಂಬಂಧಿಕರು ತಂದಿದ್ದು, ಮತ್ತೆ ಜೀವಬರಬಹುದೆಂದು ಮನೆ ಬಳಿ ಶವವಿಟ್ಟು ಸಂಬಂಧಿಕರು ಕಾಯಿದಿದ್ದಾರೆ.

ಮೃತಪಟ್ಟ ವ್ಯಕ್ತಿ ಮತ್ತೆ ಜೀವಂತ! ರಾಮನಗರ ಜಿಲ್ಲೆಯಲ್ಲೊಂದು ಅಚ್ಚರಿ ಘಟನೆ
ಮೃತ ವ್ಯಕ್ತಿ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಗಂಗಾಧರ​ ಬ. ಸಾಬೋಜಿ|

Updated on:Apr 08, 2024 | 4:59 PM

Share

ರಾಮನಗರ, ಏಪ್ರಿಲ್​ 08: ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹುಚ್ಚಯ್ಯನದೊಡ್ಡಿಯಲ್ಲಿ ಬೆಳಗ್ಗೆ 6.30ಕ್ಕೆ ಮೃತಪಟ್ಟಿದ್ದ (dead) ವ್ಯಕ್ತಿಗೆ ಮಧ್ಯಾಹ್ನ 12 ಗಂಟೆಗೆ ಮರುಜೀವ ಬಂದಿದೆ. ಬಳಿಕ ಮಧ್ಯಾಹ್ನ 12.45ಕ್ಕೆ ಮತ್ತೆ ಮೃತಪಟ್ಟಿರುವುದು ವೈದ್ಯಕೀಯ ಲೋಕದಲ್ಲಿ ಅಚ್ಚರಿ ಘಟನೆಯೊಂದು ನಡೆದಿದೆ. ಕೂಲಿ ಕಾರ್ಮಿಕ ಶಿವರಾಮು(55) ಮೃತ ವ್ಯಕ್ತಿ. ಬೆಳಗ್ಗೆ 6.30ಕ್ಕೆ 55 ವರ್ಷದ ಶಿವರಾಮು ಕುಸಿದುಬಿದ್ದು ಮೃತಪಟ್ಟಿದ್ದಾರೆ. ತಕ್ಷಣ ವೈದ್ಯರನ್ನು ಕರೆಸಿ ತಪಾಸಣೆ ನಡೆಸಿದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾನೆಂದು ಹೇಳಿದ್ದಾರೆ. ಆದರೆ ಶವಸಂಸ್ಕಾರಕ್ಕೆ ಕೊಂಡೊಯ್ಯುವಾಗ ಶಿವರಾಮು ಎದ್ದು ಕುಳಿತಿದ್ದಾರೆ.

ಶಿವರಾಮು ಎದ್ದು ಕೂರುತ್ತಿದ್ದಂತೆ ವೈದ್ಯರಿಗೆ ಕುಟುಂಬಸ್ಥರಿಂದ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಬಂದ ವೈದ್ಯರಿಂದ ಶಿವರಾಮು ದೇಹಸ್ಥಿತಿ ಬಗ್ಗೆ ತಪಾಸಣೆ ಮಾಡಲಾಗಿದೆ. ಹಾರ್ಟ್​ಅಟ್ಯಾಕ್ ಆಗುತ್ತಿದೆ, ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚನೆ ನೀಡಿದ್ದಾರೆ. ಜಯದೇವ ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗ ಮಾರ್ಗಮಧ್ಯೆ ಮತ್ತೆ ಕೊನೆಯುಸಿರೆಳೆದ್ದಾರೆ.

ಇದನ್ನೂ ಓದಿ: ಯಾದಗಿರಿ: ಮೃತಪಟ್ಟ 25 ವರ್ಷದ ಬಳಿಕ ಪುನಃ ಆತನ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಮಾರಾಟಕ್ಕೆ ಯತ್ನ

ಶಿವರಾಮು ಶವವನ್ನು ಮತ್ತೆ ಹುಚ್ಚಯ್ಯನದೊಡ್ಡಿಗೆ ಸಂಬಂಧಿಕರು ತಂದಿದ್ದು, ಮತ್ತೆ ಜೀವಬರಬಹುದೆಂದು ಮನೆ ಬಳಿ ಶವವಿಟ್ಟು ಸಂಬಂಧಿಕರು ಕಾಯಿದಿದ್ದಾರೆ. ಮತ್ತೊಂದೆಡೆ ಗ್ರಾಮಸ್ಥರು ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿದ್ದಾರೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಚ್ಚರಿಯ ಪ್ರಕರಣ ಕಂಡುಬಂದಿದೆ.

ದ್ವಿಚಕ್ರ ವಾಹನ ಡಿಕ್ಕಿ: ಜಿಂಕೆ ಸಾವು

ತುಮಕೂರು: ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಅಮರಾಪುರ ರಸ್ತೆ ಬಡಕನಹಳ್ಳಿ ಕ್ರಾಸ್ ಬಳಿ ನಡೆದಿದೆ. ಜಿಂಕೆ ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಜಿಂಕೆಯ ಬೆನ್ನಿಗೆ ಬಲವಾದ ಪೆಟ್ಟು ಬಿದಿದ್ದು, ಸಕಾಲಕ್ಕೆ ಚಿಕಿತ್ಸೆ ಸಿಗದ ಹಿನ್ನೆಲೆ ಜಿಂಕೆ ಮೃತಪಟ್ಟಿದೆ.

ಇದನ್ನೂ ಓದಿ: ಕಾರವಾರ: ಹಜ್ ಯಾತ್ರೆಗೆ ತೆರಳಿದ್ದ ಮುಂಡಗೋಡದ ಒಂದೇ ಕುಟುಂಬದ ಮೂವರು ಸಾವು

ದ್ವಿಚಕ್ರ ವಾಹನ ಸವಾರನ ತಲೆಗೂ ಪೆಟ್ಟಾಗಿದೆ. ಗಾಯಾಳುವಿಗೆ ಶಿರಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:29 pm, Mon, 8 April 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ