AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತಪಟ್ಟ ವ್ಯಕ್ತಿ ಮತ್ತೆ ಜೀವಂತ! ರಾಮನಗರ ಜಿಲ್ಲೆಯಲ್ಲೊಂದು ಅಚ್ಚರಿ ಘಟನೆ

ರಾಮನಗರ ಜಿಲ್ಲೆಯಲ್ಲೊಂದು ವೈದ್ಯಕೀಯ ಲೋಕಕ್ಕೂ ಮೀರಿದ ಅಚ್ಚರಿಯ ಘಟನೆಯೊಂದು ನಡೆದಿದೆ. ಬೆಳಗ್ಗೆ 6.30ಕ್ಕೆ ಮೃತಪಟ್ಟಿದ್ದ ವ್ಯಕ್ತಿಗೆ ಮಧ್ಯಾಹ್ನ 12 ಗಂಟೆಗೆ ಮರುಜೀವ ಬಂದಿದೆ. ಬಳಿಕ ಮಧ್ಯಾಹ್ನ 12.45ಕ್ಕೆ ಮತ್ತೆ ಮೃತಪಟ್ಟಿದ್ದಾರೆ. ಶಿವರಾಮು ಶವವನ್ನು ಮತ್ತೆ ಹುಚ್ಚಯ್ಯನದೊಡ್ಡಿಗೆ ಸಂಬಂಧಿಕರು ತಂದಿದ್ದು, ಮತ್ತೆ ಜೀವಬರಬಹುದೆಂದು ಮನೆ ಬಳಿ ಶವವಿಟ್ಟು ಸಂಬಂಧಿಕರು ಕಾಯಿದಿದ್ದಾರೆ.

ಮೃತಪಟ್ಟ ವ್ಯಕ್ತಿ ಮತ್ತೆ ಜೀವಂತ! ರಾಮನಗರ ಜಿಲ್ಲೆಯಲ್ಲೊಂದು ಅಚ್ಚರಿ ಘಟನೆ
ಮೃತ ವ್ಯಕ್ತಿ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Apr 08, 2024 | 4:59 PM

Share

ರಾಮನಗರ, ಏಪ್ರಿಲ್​ 08: ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹುಚ್ಚಯ್ಯನದೊಡ್ಡಿಯಲ್ಲಿ ಬೆಳಗ್ಗೆ 6.30ಕ್ಕೆ ಮೃತಪಟ್ಟಿದ್ದ (dead) ವ್ಯಕ್ತಿಗೆ ಮಧ್ಯಾಹ್ನ 12 ಗಂಟೆಗೆ ಮರುಜೀವ ಬಂದಿದೆ. ಬಳಿಕ ಮಧ್ಯಾಹ್ನ 12.45ಕ್ಕೆ ಮತ್ತೆ ಮೃತಪಟ್ಟಿರುವುದು ವೈದ್ಯಕೀಯ ಲೋಕದಲ್ಲಿ ಅಚ್ಚರಿ ಘಟನೆಯೊಂದು ನಡೆದಿದೆ. ಕೂಲಿ ಕಾರ್ಮಿಕ ಶಿವರಾಮು(55) ಮೃತ ವ್ಯಕ್ತಿ. ಬೆಳಗ್ಗೆ 6.30ಕ್ಕೆ 55 ವರ್ಷದ ಶಿವರಾಮು ಕುಸಿದುಬಿದ್ದು ಮೃತಪಟ್ಟಿದ್ದಾರೆ. ತಕ್ಷಣ ವೈದ್ಯರನ್ನು ಕರೆಸಿ ತಪಾಸಣೆ ನಡೆಸಿದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾನೆಂದು ಹೇಳಿದ್ದಾರೆ. ಆದರೆ ಶವಸಂಸ್ಕಾರಕ್ಕೆ ಕೊಂಡೊಯ್ಯುವಾಗ ಶಿವರಾಮು ಎದ್ದು ಕುಳಿತಿದ್ದಾರೆ.

ಶಿವರಾಮು ಎದ್ದು ಕೂರುತ್ತಿದ್ದಂತೆ ವೈದ್ಯರಿಗೆ ಕುಟುಂಬಸ್ಥರಿಂದ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಬಂದ ವೈದ್ಯರಿಂದ ಶಿವರಾಮು ದೇಹಸ್ಥಿತಿ ಬಗ್ಗೆ ತಪಾಸಣೆ ಮಾಡಲಾಗಿದೆ. ಹಾರ್ಟ್​ಅಟ್ಯಾಕ್ ಆಗುತ್ತಿದೆ, ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚನೆ ನೀಡಿದ್ದಾರೆ. ಜಯದೇವ ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗ ಮಾರ್ಗಮಧ್ಯೆ ಮತ್ತೆ ಕೊನೆಯುಸಿರೆಳೆದ್ದಾರೆ.

ಇದನ್ನೂ ಓದಿ: ಯಾದಗಿರಿ: ಮೃತಪಟ್ಟ 25 ವರ್ಷದ ಬಳಿಕ ಪುನಃ ಆತನ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಮಾರಾಟಕ್ಕೆ ಯತ್ನ

ಶಿವರಾಮು ಶವವನ್ನು ಮತ್ತೆ ಹುಚ್ಚಯ್ಯನದೊಡ್ಡಿಗೆ ಸಂಬಂಧಿಕರು ತಂದಿದ್ದು, ಮತ್ತೆ ಜೀವಬರಬಹುದೆಂದು ಮನೆ ಬಳಿ ಶವವಿಟ್ಟು ಸಂಬಂಧಿಕರು ಕಾಯಿದಿದ್ದಾರೆ. ಮತ್ತೊಂದೆಡೆ ಗ್ರಾಮಸ್ಥರು ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿದ್ದಾರೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಚ್ಚರಿಯ ಪ್ರಕರಣ ಕಂಡುಬಂದಿದೆ.

ದ್ವಿಚಕ್ರ ವಾಹನ ಡಿಕ್ಕಿ: ಜಿಂಕೆ ಸಾವು

ತುಮಕೂರು: ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಅಮರಾಪುರ ರಸ್ತೆ ಬಡಕನಹಳ್ಳಿ ಕ್ರಾಸ್ ಬಳಿ ನಡೆದಿದೆ. ಜಿಂಕೆ ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಜಿಂಕೆಯ ಬೆನ್ನಿಗೆ ಬಲವಾದ ಪೆಟ್ಟು ಬಿದಿದ್ದು, ಸಕಾಲಕ್ಕೆ ಚಿಕಿತ್ಸೆ ಸಿಗದ ಹಿನ್ನೆಲೆ ಜಿಂಕೆ ಮೃತಪಟ್ಟಿದೆ.

ಇದನ್ನೂ ಓದಿ: ಕಾರವಾರ: ಹಜ್ ಯಾತ್ರೆಗೆ ತೆರಳಿದ್ದ ಮುಂಡಗೋಡದ ಒಂದೇ ಕುಟುಂಬದ ಮೂವರು ಸಾವು

ದ್ವಿಚಕ್ರ ವಾಹನ ಸವಾರನ ತಲೆಗೂ ಪೆಟ್ಟಾಗಿದೆ. ಗಾಯಾಳುವಿಗೆ ಶಿರಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:29 pm, Mon, 8 April 24

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು