ಮೃತಪಟ್ಟ ವ್ಯಕ್ತಿ ಮತ್ತೆ ಜೀವಂತ! ರಾಮನಗರ ಜಿಲ್ಲೆಯಲ್ಲೊಂದು ಅಚ್ಚರಿ ಘಟನೆ

ರಾಮನಗರ ಜಿಲ್ಲೆಯಲ್ಲೊಂದು ವೈದ್ಯಕೀಯ ಲೋಕಕ್ಕೂ ಮೀರಿದ ಅಚ್ಚರಿಯ ಘಟನೆಯೊಂದು ನಡೆದಿದೆ. ಬೆಳಗ್ಗೆ 6.30ಕ್ಕೆ ಮೃತಪಟ್ಟಿದ್ದ ವ್ಯಕ್ತಿಗೆ ಮಧ್ಯಾಹ್ನ 12 ಗಂಟೆಗೆ ಮರುಜೀವ ಬಂದಿದೆ. ಬಳಿಕ ಮಧ್ಯಾಹ್ನ 12.45ಕ್ಕೆ ಮತ್ತೆ ಮೃತಪಟ್ಟಿದ್ದಾರೆ. ಶಿವರಾಮು ಶವವನ್ನು ಮತ್ತೆ ಹುಚ್ಚಯ್ಯನದೊಡ್ಡಿಗೆ ಸಂಬಂಧಿಕರು ತಂದಿದ್ದು, ಮತ್ತೆ ಜೀವಬರಬಹುದೆಂದು ಮನೆ ಬಳಿ ಶವವಿಟ್ಟು ಸಂಬಂಧಿಕರು ಕಾಯಿದಿದ್ದಾರೆ.

ಮೃತಪಟ್ಟ ವ್ಯಕ್ತಿ ಮತ್ತೆ ಜೀವಂತ! ರಾಮನಗರ ಜಿಲ್ಲೆಯಲ್ಲೊಂದು ಅಚ್ಚರಿ ಘಟನೆ
ಮೃತ ವ್ಯಕ್ತಿ
Edited By:

Updated on: Apr 08, 2024 | 4:59 PM

ರಾಮನಗರ, ಏಪ್ರಿಲ್​ 08: ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹುಚ್ಚಯ್ಯನದೊಡ್ಡಿಯಲ್ಲಿ ಬೆಳಗ್ಗೆ 6.30ಕ್ಕೆ ಮೃತಪಟ್ಟಿದ್ದ (dead) ವ್ಯಕ್ತಿಗೆ ಮಧ್ಯಾಹ್ನ 12 ಗಂಟೆಗೆ ಮರುಜೀವ ಬಂದಿದೆ. ಬಳಿಕ ಮಧ್ಯಾಹ್ನ 12.45ಕ್ಕೆ ಮತ್ತೆ ಮೃತಪಟ್ಟಿರುವುದು ವೈದ್ಯಕೀಯ ಲೋಕದಲ್ಲಿ ಅಚ್ಚರಿ ಘಟನೆಯೊಂದು ನಡೆದಿದೆ. ಕೂಲಿ ಕಾರ್ಮಿಕ ಶಿವರಾಮು(55) ಮೃತ ವ್ಯಕ್ತಿ. ಬೆಳಗ್ಗೆ 6.30ಕ್ಕೆ 55 ವರ್ಷದ ಶಿವರಾಮು ಕುಸಿದುಬಿದ್ದು ಮೃತಪಟ್ಟಿದ್ದಾರೆ. ತಕ್ಷಣ ವೈದ್ಯರನ್ನು ಕರೆಸಿ ತಪಾಸಣೆ ನಡೆಸಿದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾನೆಂದು ಹೇಳಿದ್ದಾರೆ. ಆದರೆ ಶವಸಂಸ್ಕಾರಕ್ಕೆ ಕೊಂಡೊಯ್ಯುವಾಗ ಶಿವರಾಮು ಎದ್ದು ಕುಳಿತಿದ್ದಾರೆ.

ಶಿವರಾಮು ಎದ್ದು ಕೂರುತ್ತಿದ್ದಂತೆ ವೈದ್ಯರಿಗೆ ಕುಟುಂಬಸ್ಥರಿಂದ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಬಂದ ವೈದ್ಯರಿಂದ ಶಿವರಾಮು ದೇಹಸ್ಥಿತಿ ಬಗ್ಗೆ ತಪಾಸಣೆ ಮಾಡಲಾಗಿದೆ. ಹಾರ್ಟ್​ಅಟ್ಯಾಕ್ ಆಗುತ್ತಿದೆ, ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚನೆ ನೀಡಿದ್ದಾರೆ. ಜಯದೇವ ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗ ಮಾರ್ಗಮಧ್ಯೆ ಮತ್ತೆ ಕೊನೆಯುಸಿರೆಳೆದ್ದಾರೆ.

ಇದನ್ನೂ ಓದಿ: ಯಾದಗಿರಿ: ಮೃತಪಟ್ಟ 25 ವರ್ಷದ ಬಳಿಕ ಪುನಃ ಆತನ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಮಾರಾಟಕ್ಕೆ ಯತ್ನ

ಶಿವರಾಮು ಶವವನ್ನು ಮತ್ತೆ ಹುಚ್ಚಯ್ಯನದೊಡ್ಡಿಗೆ ಸಂಬಂಧಿಕರು ತಂದಿದ್ದು, ಮತ್ತೆ ಜೀವಬರಬಹುದೆಂದು ಮನೆ ಬಳಿ ಶವವಿಟ್ಟು ಸಂಬಂಧಿಕರು ಕಾಯಿದಿದ್ದಾರೆ. ಮತ್ತೊಂದೆಡೆ ಗ್ರಾಮಸ್ಥರು ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿದ್ದಾರೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಚ್ಚರಿಯ ಪ್ರಕರಣ ಕಂಡುಬಂದಿದೆ.

ದ್ವಿಚಕ್ರ ವಾಹನ ಡಿಕ್ಕಿ: ಜಿಂಕೆ ಸಾವು

ತುಮಕೂರು: ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಅಮರಾಪುರ ರಸ್ತೆ ಬಡಕನಹಳ್ಳಿ ಕ್ರಾಸ್ ಬಳಿ ನಡೆದಿದೆ. ಜಿಂಕೆ ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಜಿಂಕೆಯ ಬೆನ್ನಿಗೆ ಬಲವಾದ ಪೆಟ್ಟು ಬಿದಿದ್ದು, ಸಕಾಲಕ್ಕೆ ಚಿಕಿತ್ಸೆ ಸಿಗದ ಹಿನ್ನೆಲೆ ಜಿಂಕೆ ಮೃತಪಟ್ಟಿದೆ.

ಇದನ್ನೂ ಓದಿ: ಕಾರವಾರ: ಹಜ್ ಯಾತ್ರೆಗೆ ತೆರಳಿದ್ದ ಮುಂಡಗೋಡದ ಒಂದೇ ಕುಟುಂಬದ ಮೂವರು ಸಾವು

ದ್ವಿಚಕ್ರ ವಾಹನ ಸವಾರನ ತಲೆಗೂ ಪೆಟ್ಟಾಗಿದೆ. ಗಾಯಾಳುವಿಗೆ ಶಿರಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:29 pm, Mon, 8 April 24

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us