AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ 13 ರಂದು ಅಂಜನಾದ್ರಿಯಲ್ಲಿ ಮೊಳಗಲಿದೆ ಹನುಮ ಜಪ: ನಾನಾಕಡೆಗಳಿಂದ ಮಾಲಾಧಾರಿಗಳ ಆಗಮನ

ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ಡಿಸೆಂಬರ್ 13 ರಂದು ಸಾವಿರಾರು ಭಕ್ತರು ಹನುಮ ಮಾಲೆ ವಿಸರ್ಜಿಸಲು ಆಗಮಿಸಲಿದ್ದಾರೆ. ಜಿಲ್ಲಾಡಳಿತ ಸೂಕ್ತ ವ್ಯವಸ್ಥೆಗಳನ್ನು ಮಾಡಿದೆ. ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಕೂಡ ಹನುಮ ಮಾಲೆ ಧರಿಸಿದ್ದಾರೆ. ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಹಣ ಬಿಡುಗಡೆ ಮಾಡಿದೆ.

ಡಿ 13 ರಂದು ಅಂಜನಾದ್ರಿಯಲ್ಲಿ ಮೊಳಗಲಿದೆ ಹನುಮ ಜಪ: ನಾನಾಕಡೆಗಳಿಂದ ಮಾಲಾಧಾರಿಗಳ ಆಗಮನ
ಡಿ. 13 ರಂದು ಅಂಜನಾದ್ರಿಯಲ್ಲಿ ಮೊಳಗಲಿದೆ ಹನುಮ ಜಪ: ನಾನಾಕಡೆಗಳಿಂದ ಮಾಲಾಧಾರಿಗಳ ಆಗಮನ
Follow us
ಸಂಜಯ್ಯಾ ಚಿಕ್ಕಮಠ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 09, 2024 | 7:50 PM

ಕೊಪ್ಪಳ, ಡಿಸೆಂಬರ್​ 09: ಅದು ರಾಮನ ಭಂಟ ಹನುಮನ ಜನ್ಮಸ್ಥಳ. ಪೌರಾಣಿಕವಾಗಿ, ಐತಿಹಾಸಿಕವಾಗಿ ಮಹತ್ವ ಪಡೆದಿರುವ ಅಂಜನಾದ್ರಿಗೆ (Anjanadri hill) ಡಿಸೆಂಬರ್ 13 ರಂದು ಹನುಮ ಮಾಲೆ ವಿಸರ್ಜಿಸುವುದಕ್ಕೆ ದೇಶದ ವಿವಿಧ ಮೂಲೆಗಳಿಂದ ಸಾವಿರಾರು ಹನುಮ ಭಕ್ತರು ಆಗಮಿಸಲಿದ್ದಾರೆ. ಈ ಹಿನ್ನೆಲೆ ಸಿದ್ದತೆಗಳು ಜೋರಾಗಿ ನಡೆದಿವೆ. ಇದರ ಜೊತೆಗೆ ಸ್ವತಃ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಕೂಡ ಈ ವರ್ಷ ಹನುಮ ಮಾಲೆ ಧರಿಸಿ ವೃತ ಆರಂಭಿಸಿದ್ದಾರೆ.

ಜಿಲ್ಲೆಯ ಅಂಜನಾದ್ರಿ, ರಾಮನ ಭಂಟ ಹನುಮನ ಜನ್ಮಸ್ಥಳ ಅಂತಲೇ ನಂಬಲಾಗಿದೆ. ಅದಕ್ಕೆ ಅನೇಕ ಐತಿಹಾಸಿಕ ಸಾಕ್ಷಿಗಳು ಕೂಡ ಇವೆ. ಇನ್ನು ಸೀತಾ ಮಾತೆಯನ್ನು ಹುಡುಕಿಕೊಂಡು ಹೊರಟಿದ್ದ ಶ್ರೀರಾಮ, ಇದೇ ಅಂಜನಾದ್ರಿ ಮತ್ತು ಸುತ್ತಮುತ್ತಲಿನ ಸ್ಥಳವಾಗಿರುವ ಕಿಷ್ಕಿಂದೆಯಲ್ಲಿ ಅನೇಕ ತಿಂಗಳ ಕಾಲ ವಾಸವಾಗಿದ್ದರು. ಇದು ರಾಮಾಯಣದಲ್ಲಿ ಉಲ್ಲೇಖವಾಗಿದೆ.

ಹನುಮ ಮಾಲೆ ಧರಿಸಿದ ಶಾಸಕ ಜನಾರ್ಧನ ರೆಡ್ಡಿ

ಅಂಜನಾದ್ರಿ ಬೆಟ್ಟದ ಮೇಲಿರುವ ಆಂಜನೇಯ ದೇವಸ್ಥಾನ, ಹನುಮ ಭಕ್ತರ ಆರಾಧ್ಯ ಕೇಂದ್ರವಾಗಿದೆ. ಹೀಗಾಗಿ ಪ್ರತಿದಿನ ಸಾವಿರಾರು ಭಕ್ತರು ಅಂಜನಾದ್ರಿಗೆ ಆಗಮಿಸುತ್ತಾರೆ. 575 ಮೆಟ್ಟಿಲುಗಳನ್ನು ಹತ್ತಿ ಆಂಜನೇಯನ ದರ್ಶನ ಪಡೆದು ಪುನಿತರಾಗುತ್ತಾರೆ. ಇನ್ನು ಪ್ರತಿವರ್ಷ ಹನುಮ ಮಾಲೆ ವಿಸರ್ಜನೆಗೆ ನಾಡಿನ ವಿವಿಧೆಡೆಯಿಂದ ಸಾವಿರಾರು ಹನುಮ ಭಕ್ತರು ಅಂಜನಾದ್ರಿಗೆ ಬರುತ್ತಾರೆ. ಮಾರ್ಗಶಿರ ಶುದ್ದ ತ್ರಯೋದಶಿ ಸಮಯದಲ್ಲಿ ಸಂಕಲ್ಪ ಮಾಡಿ ಮಾಲೆಯನ್ನು ಧರಿಸಿ ವೃತವನ್ನು ಆಚರಿಸಿದರೆ, ಇಷ್ಟಾರ್ಥಗಳು ಈಡೇರುತ್ತವೆ ಅನ್ನೋ ನಂಬಿಕೆ ಆಂಜನೇಯನ ಭಕ್ತರಲ್ಲಿದೆ. ಹೀಗಾಗಿ ಈಗಾಗಲೇ ಸಾವಿರಾರು ಹನುಮ ಭಕ್ತರು ಮಾಲೆ ಧರಿಸಿದ್ದಾರೆ. ಇಂದು ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಕೂಡ ಹನುಮ ಮಾಲೆ ಧರಿಸಿ, ಐದು ದಿನಗಳ ವೃತವನ್ನು ಆರಂಭಿಸಿದ್ದಾರೆ. ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿರುವ ಪಂಪಾ ಸರೋವರದಲ್ಲಿ ಹನುಮ ಮೂರ್ತಿಗೆ ಪೂಜೆ ಸಲ್ಲಿಸಿದ ಜನಾರ್ಧನ ರೆಡ್ಡಿ, ತಮ್ಮ ಬೆಂಬಲಿಗರ ಜೊತೆ ಹನುಮಮಾಲೆ ಧರಿಸಿದ್ದಾರೆ.

ಡಿಸೆಂಬರ್ 13 ರಂದು ಹನುಮ ಮಾಲೆ ವಿಸರ್ಜನೆಗೆ ಬೇಕಾದ ಸಿದ್ದತೆಗಳನ್ನು ಕೂಡ ಈಗಾಗಲೇ ಜಿಲ್ಲಾಡಳಿತ ಆರಂಭಿಸಿದೆ. ಮಲಾಧಾರಿಗಳು ಬಂದಾಗ ಅವರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಬೇಕಾದ ಎಲ್ಲಾ ವ್ಯವಸ್ಥೆ ಆರಂಭಿಸಿದೆ. ಇನ್ನು ಪ್ರತಿವರ್ಷ ಒಂದು ದಿನ ಮಾತ್ರ ಊಟದ ವ್ಯವಸ್ಥೆ ಮಾಡಲಾಗತ್ತಿತ್ತು. ಆದರೆ ಈ ವರ್ಷ ಡಿಸೆಂಬರ್ 11 ರಿಂದ 13 ರವರಗೆ ಅಂಜನಾದ್ರಿಯಲ್ಲಿ ಭಕ್ತರಿಗಾಗಿ ಊಟದ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಜೊತೆಗೆ ಸುತ್ತಮುತ್ತಲಿನ ಪ್ರದೇಶದಲ್ಲಿ ರಾಮ ಜಪ, ಹನುಮ ಜಪ ಕೇಳುವಂತಹ ವ್ಯವಸ್ಥೆ ಮಾಡಲಾಗುತ್ತಿದೆ. ಇನ್ನು ಈ ಬಾರಿ ಕೂಡ ಲೈಟಿಂಗ್ ವ್ಯವಸ್ಥೆ ಮಾಡಲಾಗುತ್ತಿದ್ದು, ರಾತ್ರಿ ಸಮಯದಲ್ಲಿ ಬಂಡೆಗಳ ನಡುವೆ ಅಂಜನಾದ್ರಿಯ ವೈಭವವನ್ನು ನೋಡುವುದು ಕಣ್ಣಿಗೆ ಹಬ್ಬದಂತೆ ಕಾಣಲಿದೆ.

ಇದನ್ನೂ ಓದಿ: ಐತಿಹಾಸಿಕ ಅಂಜನಾದ್ರಿ ಆಂಜನೇಯ ದೇವಸ್ಥಾನದ ಹುಂಡಿ ಎಣಿಕೆ; 22 ದಿನಗಳಲ್ಲಿ ಸಂಗ್ರಹವಾದ ಹಣವೆಷ್ಟು ಗೊತ್ತಾ?

ಒಂದಡೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿರುವ ಅಂಜನಾದ್ರಿಯ ಅಭಿವೃದ್ದಿಗೆ ಸರ್ಕಾರ ಹಣ ಕೂಡ ಬಿಡುಗಡೆ ಮಾಡಿದ್ದು, ಆದಷ್ಟು ಬೇಗನೆ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ ನೀಡಬೇಕಿದೆ. ಇದರ ಜೊತೆಗೆ ಹನುಮ ಮಾಲಾಧಾರಿಗಳಿಗೆ ತೊಂದರೆಯಾಗದಂತೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ