AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಕುಡಿಯುವ ನೀರಿಗೂ ರಾಜಕೀಯ ಬಣ್ಣ ಬಳೆಯುತ್ತಿದೆ; ಸಚಿವ ಡಾ. ಅಶ್ವಥ್ ನಾರಾಯಣ್

ಪಾದಯಾತ್ರೆ ಎಲ್ಲಿಗೆ ಬೇಕಾದ್ರೂ ಬರಲಿ. ನಮ್ಮ ಕ್ಷೇತ್ರಕ್ಕೆ ಬರಲು ಯಾವುದೇ ಅಭ್ಯಂತರ ಇಲ್ಲ. ನೀವು ನಮ್ಮ ಕ್ಷೇತ್ರಕ್ಕೆ ಬಂದ್ರೆ ನಮಗೆ ಜನ ಆಶೀರ್ವಾದ ಮಾಡುತ್ತಾರೆ. ಪರಿಜ್ಞಾನ ಇಲ್ಲದೇ ನಾಟಕ ಮಾಡಿಕೊಂಡು ಈ ಪಾದಯಾತ್ರೆ ಮಾಡುತ್ತಿದ್ದಾರೆ.

ಕಾಂಗ್ರೆಸ್ ಕುಡಿಯುವ ನೀರಿಗೂ ರಾಜಕೀಯ ಬಣ್ಣ ಬಳೆಯುತ್ತಿದೆ; ಸಚಿವ ಡಾ. ಅಶ್ವಥ್ ನಾರಾಯಣ್
ಸಚಿವ ಡಾ. ಅಶ್ವಥ್ ನಾರಾಯಣ್
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Feb 28, 2022 | 3:09 PM

Share

ಬೆಂಗಳೂರು: ಕಾಂಗ್ರೆಸ್ ದೊಂಬರಾಟ ಮಾಡುತ್ತಿದೆ. ನೀರಿಗೆ ಕಾಂಗ್ರೆಸ್ ರಾಜಕೀಯ ಲೇಪ ಹಚ್ಚುತ್ತಿದೆ. ಕುಡಿಯುವ ನೀರಿಗೂ ರಾಜಕೀಯ ಬಣ್ಣ ಹಚ್ಚುತ್ತಿದೆ ಎಂದು ಬೆಂಗಳೂರಿನಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿಕೆ ನೀಡಿದ್ದಾರೆ. ನಾಡಿನ ನೆಲ, ಜಲ, ಭಾಷೆ ಬಂದಾಗ ಎಲ್ಲರೂ ಒಂದಾಗುತ್ತಾರೆ. ಆದರೆ ಕಾಂಗ್ರೆಸ್ ಸುಮ್ಮನೆ ರಾಜಕೀಯ ಮಾಡ್ತಿದೆ. 75 ವರ್ಷಗಳಲ್ಲಿ ಕಾಂಗ್ರೆಸ್ ಮೇಕೆದಾಟಿಗೆ ಏನೂ ಮಾಡಿಲ್ಲ. ಡಿಪಿಆರ್ ಕೂಡಾ ಅವರು ಮಾಡಿಲ್ಲ. ಹೀಗಾಗಿ ಕಾಂಗ್ರೆಸ್ ಪಾದಯಾತ್ರೆಯನ್ನು ನಾನು ಖಂಡಿಸುತ್ತೇನೆ. ಮೇಕೆದಾಟು ಅನುಷ್ಠಾನ ಮಾಡಲು ನಮ್ಮ ರಾಜ್ಯ ಮತ್ತು ಕೇಂದ್ರ ಬದ್ದವಾಗಿದೆ. ಎಂದರು. ಕಾಂಗ್ರೆಸ್​ನಿಂದ ಈ ಜನ್ಮದಲ್ಲಿ ಮೇಕೆದಾಟು ಒಂದಿಂಚು ಕಾರ್ಯರೂಪಕ್ಕೆ ತರಲು ಸಾಧ್ಯವಿಲ್ಲ. ಡಿಎಂಕೆ ಜೊತೆ ಕಾಂಗ್ರೆಸ್ ಕೈ ಜೋಡಿಸಿದೆ. ತಮಿಳುನಾಡಿನಲ್ಲಿ ಅವರದ್ದೇ ಸರ್ಕಾರ ಇದೆ. ಕಾಂಗ್ರೆಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬಂದು ಇದನ್ನು ಮಾಡಲು ಸಾಧ್ಯವೇ ಇಲ್ಲ. ಇವರ ಜನ್ಮದಲ್ಲಿ ಮೇಕೆದಾಟು ಕಾಂಗ್ರೆಸ್ ಜಾರಿ ಮಾಡಲ್ಲ. ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ರಾಮನಗರ ಅಭಿವೃದ್ಧಿ ಮಾಡಿಲ್ಲ. ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ಏನೂ ಕೆಲಸ ಮಾಡಿಲ್ಲ. ರಾಜಕೀಯ ಜನ್ಮ ಪಡೆದು ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.

ಪಾದಯಾತ್ರೆ ಎಲ್ಲಿಗೆ ಬೇಕಾದ್ರೂ ಬರಲಿ. ನಮ್ಮ ಕ್ಷೇತ್ರಕ್ಕೆ ಬರಲು ಯಾವುದೇ ಅಭ್ಯಂತರ ಇಲ್ಲ. ನೀವು ನಮ್ಮ ಕ್ಷೇತ್ರಕ್ಕೆ ಬಂದ್ರೆ ನಮಗೆ ಜನ ಆಶೀರ್ವಾದ ಮಾಡುತ್ತಾರೆ. ಪರಿಜ್ಞಾನ ಇಲ್ಲದೇ ನಾಟಕ ಮಾಡಿಕೊಂಡು ಈ ಪಾದಯಾತ್ರೆ ಮಾಡುತ್ತಿದ್ದಾರೆ. ವ್ಯಾಪಾರ, ಲಾಭ, ನಷ್ಟ ನೋಡೋದು ಡಿ.ಕೆ. ಶಿವಕುಮಾರ್ ಗುಣ. ತಾನು ಹೇಗೆ ಸಿಎಂ ಆಗಬೇಕು ಅಂತ ಡಿ.ಕೆ. ಶಿವಕುಮಾರ್ ಪ್ಲ್ಯಾನ್ ಮಾಡುತ್ತಿದ್ದಾರೆ. ಜನಕ್ಕಾಗಿ ಈ ಪಾದಯಾತ್ರೆ ಮಾಡುತ್ತಿಲ್ಲ. ಬದಲಿಗೆ ಸಿದ್ದರಾಮಯ್ಯಗೆ ಟಕ್ಕರ್ ಕೊಡಲು ಈ ಪಾದಯಾತ್ರೆ ಮಾಡುತ್ತಿದ್ದಾರೆ ಎಂದರು.

ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ವ್ಯಾಸಂಗ ಮಾಡಲು ಅವಕಾಶ ಮಾಡಿಕೊಡುವ ವಿಚಾರವಾಗಿ ಸಿಎಂ ಜೊತೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಕೇಂದ್ರ ಸರ್ಕಾರದ ಜೊತೆ ಮಾತಾಡಬೇಕಾಗುತ್ತದೆ. ಮೆಡಿಕಲ್ ಕೋರ್ಸ್ ಗಳು ಮಾಡೋದು ಕಷ್ಟ, ಬೇರೆ ಕೋರ್ಸ್ ಗೆ ಸಮಸ್ಯೆ ಆಗಲ್ಲ. ಆದ್ರೂ ನಿಯಮಗಳ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದ್ದಾರೆ.

ಇದನ್ನೂ ಓದಿ:

ಪುನೀತ್​ ರಾಜ್​ಕುಮಾರ್​ ಹೆಸರಲ್ಲಿ ಉಡಾವಣೆ ಆಗಲಿದೆ ಉಪಗ್ರಹ; ಇದಕ್ಕೆ ತಗಲುತ್ತಿರುವ ವೆಚ್ಚ ಎಷ್ಟು?

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ