AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಕುಡಿಯುವ ನೀರಿಗೂ ರಾಜಕೀಯ ಬಣ್ಣ ಬಳೆಯುತ್ತಿದೆ; ಸಚಿವ ಡಾ. ಅಶ್ವಥ್ ನಾರಾಯಣ್

ಪಾದಯಾತ್ರೆ ಎಲ್ಲಿಗೆ ಬೇಕಾದ್ರೂ ಬರಲಿ. ನಮ್ಮ ಕ್ಷೇತ್ರಕ್ಕೆ ಬರಲು ಯಾವುದೇ ಅಭ್ಯಂತರ ಇಲ್ಲ. ನೀವು ನಮ್ಮ ಕ್ಷೇತ್ರಕ್ಕೆ ಬಂದ್ರೆ ನಮಗೆ ಜನ ಆಶೀರ್ವಾದ ಮಾಡುತ್ತಾರೆ. ಪರಿಜ್ಞಾನ ಇಲ್ಲದೇ ನಾಟಕ ಮಾಡಿಕೊಂಡು ಈ ಪಾದಯಾತ್ರೆ ಮಾಡುತ್ತಿದ್ದಾರೆ.

ಕಾಂಗ್ರೆಸ್ ಕುಡಿಯುವ ನೀರಿಗೂ ರಾಜಕೀಯ ಬಣ್ಣ ಬಳೆಯುತ್ತಿದೆ; ಸಚಿವ ಡಾ. ಅಶ್ವಥ್ ನಾರಾಯಣ್
ಸಚಿವ ಡಾ. ಅಶ್ವಥ್ ನಾರಾಯಣ್
TV9 Web
| Edited By: |

Updated on: Feb 28, 2022 | 3:09 PM

Share

ಬೆಂಗಳೂರು: ಕಾಂಗ್ರೆಸ್ ದೊಂಬರಾಟ ಮಾಡುತ್ತಿದೆ. ನೀರಿಗೆ ಕಾಂಗ್ರೆಸ್ ರಾಜಕೀಯ ಲೇಪ ಹಚ್ಚುತ್ತಿದೆ. ಕುಡಿಯುವ ನೀರಿಗೂ ರಾಜಕೀಯ ಬಣ್ಣ ಹಚ್ಚುತ್ತಿದೆ ಎಂದು ಬೆಂಗಳೂರಿನಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿಕೆ ನೀಡಿದ್ದಾರೆ. ನಾಡಿನ ನೆಲ, ಜಲ, ಭಾಷೆ ಬಂದಾಗ ಎಲ್ಲರೂ ಒಂದಾಗುತ್ತಾರೆ. ಆದರೆ ಕಾಂಗ್ರೆಸ್ ಸುಮ್ಮನೆ ರಾಜಕೀಯ ಮಾಡ್ತಿದೆ. 75 ವರ್ಷಗಳಲ್ಲಿ ಕಾಂಗ್ರೆಸ್ ಮೇಕೆದಾಟಿಗೆ ಏನೂ ಮಾಡಿಲ್ಲ. ಡಿಪಿಆರ್ ಕೂಡಾ ಅವರು ಮಾಡಿಲ್ಲ. ಹೀಗಾಗಿ ಕಾಂಗ್ರೆಸ್ ಪಾದಯಾತ್ರೆಯನ್ನು ನಾನು ಖಂಡಿಸುತ್ತೇನೆ. ಮೇಕೆದಾಟು ಅನುಷ್ಠಾನ ಮಾಡಲು ನಮ್ಮ ರಾಜ್ಯ ಮತ್ತು ಕೇಂದ್ರ ಬದ್ದವಾಗಿದೆ. ಎಂದರು. ಕಾಂಗ್ರೆಸ್​ನಿಂದ ಈ ಜನ್ಮದಲ್ಲಿ ಮೇಕೆದಾಟು ಒಂದಿಂಚು ಕಾರ್ಯರೂಪಕ್ಕೆ ತರಲು ಸಾಧ್ಯವಿಲ್ಲ. ಡಿಎಂಕೆ ಜೊತೆ ಕಾಂಗ್ರೆಸ್ ಕೈ ಜೋಡಿಸಿದೆ. ತಮಿಳುನಾಡಿನಲ್ಲಿ ಅವರದ್ದೇ ಸರ್ಕಾರ ಇದೆ. ಕಾಂಗ್ರೆಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬಂದು ಇದನ್ನು ಮಾಡಲು ಸಾಧ್ಯವೇ ಇಲ್ಲ. ಇವರ ಜನ್ಮದಲ್ಲಿ ಮೇಕೆದಾಟು ಕಾಂಗ್ರೆಸ್ ಜಾರಿ ಮಾಡಲ್ಲ. ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ರಾಮನಗರ ಅಭಿವೃದ್ಧಿ ಮಾಡಿಲ್ಲ. ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ಏನೂ ಕೆಲಸ ಮಾಡಿಲ್ಲ. ರಾಜಕೀಯ ಜನ್ಮ ಪಡೆದು ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.

ಪಾದಯಾತ್ರೆ ಎಲ್ಲಿಗೆ ಬೇಕಾದ್ರೂ ಬರಲಿ. ನಮ್ಮ ಕ್ಷೇತ್ರಕ್ಕೆ ಬರಲು ಯಾವುದೇ ಅಭ್ಯಂತರ ಇಲ್ಲ. ನೀವು ನಮ್ಮ ಕ್ಷೇತ್ರಕ್ಕೆ ಬಂದ್ರೆ ನಮಗೆ ಜನ ಆಶೀರ್ವಾದ ಮಾಡುತ್ತಾರೆ. ಪರಿಜ್ಞಾನ ಇಲ್ಲದೇ ನಾಟಕ ಮಾಡಿಕೊಂಡು ಈ ಪಾದಯಾತ್ರೆ ಮಾಡುತ್ತಿದ್ದಾರೆ. ವ್ಯಾಪಾರ, ಲಾಭ, ನಷ್ಟ ನೋಡೋದು ಡಿ.ಕೆ. ಶಿವಕುಮಾರ್ ಗುಣ. ತಾನು ಹೇಗೆ ಸಿಎಂ ಆಗಬೇಕು ಅಂತ ಡಿ.ಕೆ. ಶಿವಕುಮಾರ್ ಪ್ಲ್ಯಾನ್ ಮಾಡುತ್ತಿದ್ದಾರೆ. ಜನಕ್ಕಾಗಿ ಈ ಪಾದಯಾತ್ರೆ ಮಾಡುತ್ತಿಲ್ಲ. ಬದಲಿಗೆ ಸಿದ್ದರಾಮಯ್ಯಗೆ ಟಕ್ಕರ್ ಕೊಡಲು ಈ ಪಾದಯಾತ್ರೆ ಮಾಡುತ್ತಿದ್ದಾರೆ ಎಂದರು.

ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ವ್ಯಾಸಂಗ ಮಾಡಲು ಅವಕಾಶ ಮಾಡಿಕೊಡುವ ವಿಚಾರವಾಗಿ ಸಿಎಂ ಜೊತೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಕೇಂದ್ರ ಸರ್ಕಾರದ ಜೊತೆ ಮಾತಾಡಬೇಕಾಗುತ್ತದೆ. ಮೆಡಿಕಲ್ ಕೋರ್ಸ್ ಗಳು ಮಾಡೋದು ಕಷ್ಟ, ಬೇರೆ ಕೋರ್ಸ್ ಗೆ ಸಮಸ್ಯೆ ಆಗಲ್ಲ. ಆದ್ರೂ ನಿಯಮಗಳ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದ್ದಾರೆ.

ಇದನ್ನೂ ಓದಿ:

ಪುನೀತ್​ ರಾಜ್​ಕುಮಾರ್​ ಹೆಸರಲ್ಲಿ ಉಡಾವಣೆ ಆಗಲಿದೆ ಉಪಗ್ರಹ; ಇದಕ್ಕೆ ತಗಲುತ್ತಿರುವ ವೆಚ್ಚ ಎಷ್ಟು?

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?