AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಕುಸಿತ ಕುರಿತ ಅಧ್ಯಯನ ಸಮಿತಿಯ ಅಂತಿಮ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

ಭೂಕುಸಿತದ ಕುರಿತಾದ ಅಂತಿಮ ವರದಿಯನ್ನು ರಾಜ್ಯ ಸರ್ಕಾರಕ್ಕೆ ಇಂದು ಸಲ್ಲಿಸಲಾಯಿತು. ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಹಾಗೂ ಸಮಿತಿಯ ಸದಸ್ಯರ ನೇತೃತ್ವದಲ್ಲಿ ವರದಿ ಸಲ್ಲಿಸಲಾಯಿತು.

ಭೂಕುಸಿತ ಕುರಿತ ಅಧ್ಯಯನ ಸಮಿತಿಯ ಅಂತಿಮ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
ಭೂಕುಸಿತ ಕುರಿತ ಅಧ್ಯಯನದ ಅಂತಿಮ ವರದಿ ಸಲ್ಲಿಕೆ
Follow us
shruti hegde
|

Updated on: Apr 01, 2021 | 3:00 PM

ಬೆಂಗಳೂರು: ಭೂಕುಸಿತ ಕುರಿತ ಉನ್ನತ ಮಟ್ಟದ ಅಧ್ಯಯನ ಸಮಿತಿಯ ಅಂತಿಮ ವರದಿಯನ್ನು ರಾಜ್ಯ ಸರ್ಕಾರಕ್ಕೆ ಇಂದು ಸಲ್ಲಿಸಲಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರಿಗೆ ಅಂತಿಮ ವರದಿ ಸಲ್ಲಿಸಲಾಗಿದೆ. ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತಿಯಲ್ಲಿ ವರದಿ ಸಲ್ಲಿಸಲಾಗಿದೆ.

ವರದಿ ಸಲ್ಲಿಕೆಯ ಬಳಿಕ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಮಾತನಾಡಿ, ‘ವರದಿಯಲ್ಲಿ ಕರಾವಳಿಯ ನೈಸರ್ಗಿಕ ಸಂಪತ್ತು ಜೊತೆಗೆ ಮಲೆನಾಡಿನ ನದಿ-ಕಣಿವೆಗಳ ಉಳಿವಿಗೆ ಪೂರಕವಾದ ಮತ್ತು ಭೂ-ಕುಸಿತವನ್ನು ತಡೆಗಟ್ಟಲು ಹಲವು ವೈಜ್ಞಾನಿಕ ಸಲಹೆಗಳನ್ನು ವರದಿಯಲ್ಲಿ ತಿಳಿಸಲಾಗಿದೆ. ಮಹತ್ವದ ಪರಿಹಾರೋಪಾಯಗಳನ್ನು ಹಾಗೂ ನಿಯಂತ್ರಣ ಕ್ರಮಗಳ ಬಗ್ಗೆ ವರದಿಯಲ್ಲಿ ತಿಳಿಸಲಾಗಿದೆ’ ಎಂದು ಮಾತನಾಡಿದರು.

ಭಾರಿ ಭೂಕುಸಿತ ಪ್ರಕರಣಗಳನ್ನು ನೈಸರ್ಗಿಕ ವಿಪತ್ತು ವ್ಯಾಖ್ಯೆ ಅಡಿ ತರಬೇಕು. ಭೂಕುಸಿತ ನಿಯಂತ್ರಣ ಮಾರ್ಗೋಪಾಯಗಳ ಬಗ್ಗೆ ಕ್ರಿಯಾ ಯೋಜನೆ ರೂಪಿಸಿ ಭೂಕುಸಿತ ಸಾಧ್ಯತೆ ಇರುವ ಪ್ರದೇಶಗಳ ನಕ್ಷೆ ರಚಿಸಬೇಕು. ಈ ಸಲಹೆಗಳ ಜೊತೆಗೆ ಭೂಕುಸಿತದಿಂದ ಉಂಟಾಗಿರುವ ಆಸ್ತಿ ಹಾನಿ ಮತ್ತು ಪ್ರಾಣ ಹಾನಿಗೆ ಪರಿಹಾರ ಮತ್ತು ಪುನರ್ವಸತಿ ಬಗ್ಗೆ ಸೂಕ್ತ ಸಲಹೆಗಳು ಸಹ ವರದಿಯಲ್ಲಿ ಮೂಡಿಬಂದಿವೆ ಎಂದು ತಿಳಿಸಿದರು.

landslide

ಕೇಂದ್ರ ಸರ್ಕಾರದ ಜಿ.ಎಸ್.ಐ ಲ್ಯಾಂಡ್ ಸ್ಲಿಪ್ ಯೋಜನೆಯಡಿ ರಾಜ್ಯವನ್ನು ಸೇರ್ಪಡೆಗೊಳಿಸಲು ಮನವಿಯನ್ನು ಮಾಡಲಾಗುವುದು. ಕೇಂದ್ರ ಸರ್ಕಾರ ನೀಡುವ ಮಿಟಿಗೇಷನ್ ಫಂಡ್ ಮೂಲಕ ಭೂಕುಸಿತ ಪ್ರದೇಶದ ಪುನರ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅನುದಾನವನ್ನೂ ಮೀಸಲಿಡುವ ಬಗ್ಗೆ ಸರ್ಕಾರ ಪರಿಶೀಲನೆ ಮಾಡಲಿದೆ. ವರದಿಯಲ್ಲಿ ಮಾಡಲಾಗಿರುವ ಶಿಫಾರಸುಗಳ ಅನುಷ್ಠಾನಕ್ಕೆ ಸರ್ಕಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಿದೆ ಎಂದು ಮಾತನಾಡಿದರು.

ಇದನ್ನೂ ಓದಿ: ಶಿರಸಿ ತಾಲೂಕಿನ ಮತ್ತಿಘಟ್ಟದ ಬಳಿ ಭೂಕುಸಿತ: 1ಎಕರೆ ಅಡಿಕೆ ತೋಟ ನಾಶ

ಭೂಕುಸಿತದಲ್ಲಿ ಮಾಲೀಕನನ್ನು ಕಳೆದುಕೊಂಡು ಅನಾಥವಾಗಿದ್ದ ಶ್ವಾನಕ್ಕೆ ಆಸರೆಯಾದ ಖಾಕಿ