AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೀಸ್ ಹಣ ನೀಡದ ಕಂಪನಿಗಳಿಂದ ಭೂಮಿ ವಾಪಸ್: ಈಶ್ವರ್ ಖಂಡ್ರೆ

ಕಾಫಿ ಟಿ ರಬ್ಬರ್ ಬೆಳೆಯಲು ಸಾವಿರಾರು ಎಕರೆ ಸರ್ಕಾರಿ ಭೂಮಿಯನ್ನು ಅರಣ್ಯ ಇಲಾಖೆ ಹಲವು ಕಂಪನಿಗಳಿಗೆ ಲೀಸ್​ಗೆ ನೀಡಿತ್ತು. ಆದರೆ, ಕೆಲವೊಂದು ಕಂಪನಿಗಳು ಲೀಸ್ ಹಣ ಪಾವತಿಸಿಲ್ಲ. ಹೀಗಾಗಿ ಲೀಸ್ ಹಣ ನೀಡದ ಕಂಪನಿಗಳಿಂದ ಸರ್ಕಾರಿ ಭೂಮಿಗಳನ್ನು ವಾಪಸ್ ಪಡೆಯಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದಾರೆ.

ಲೀಸ್ ಹಣ ನೀಡದ ಕಂಪನಿಗಳಿಂದ ಭೂಮಿ ವಾಪಸ್: ಈಶ್ವರ್ ಖಂಡ್ರೆ
ಈಶ್ವರ್ ಖಂಡ್ರೆ
Sunil MH
| Edited By: |

Updated on: Jan 09, 2024 | 5:33 PM

Share

ಬೆಂಗಳೂರು, ಜ.9: ಕಾಫಿ ಟಿ ರಬ್ಬರ್ ಬೆಳೆಯಲು ಅರಣ್ಯ ಇಲಾಖೆಯ ಭೂಮಿಯನ್ನು ಲೀಸ್​ಗೆ ಪಡೆದು ಹಣ ಪಾವತಿಸದ ಕಂಪನಿಗಳಿಂದ ಭೂಮಿಯನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ (Eshwar Khandre), ಸ್ವಾತಂತ್ರ್ಯ ಪೂರ್ವದಲ್ಲಿ ಕಾಫಿ, ಚಹಾ, ರಬ್ಬರ್ ಬೆಳೆಯಲು ಸಾವಿರಾರು ಎಕರೆ ಭೂಮಿಯನ್ನು ಲೀಸ್​ಗೆ ನೀಡಲಾಗಿತ್ತು ಎಂದರು.

ಲೀಸ್ ಹಣ ಬರದೇ ಇದ್ದ ಕಂಪನಿಗಳಿಂದ ಭೂಮಿ ವಾಪಸ್ ಪಡೆಯಲು ನಿರ್ಧಾರ ಮಾಡಲಾಗಿದೆ ಎಂದು ಹೇಳಿದ ಈಶ್ವರ್ ಖಂಡ್ರೆ, ಎಕರೆಗೆ ಕೇವಲ ಎರಡು ರೂಪಾಯಿಯಿಂದ ಏಳು ರೂಪಾಯಿ ಅಂತ ನಿಗದಿ ಮಾಡಿಕೊಡಲಾಗಿತ್ತು. 1997 ರಲ್ಲಿ ಎಕ್ಟೇರ್​ಗೆ ಐದು ಸಾವಿರ ಅಂತ ನಿಗದಿ ಮಾಡಲಾಗಿತ್ತು. ಆ ಪ್ರಕಾರ ಲೀಸ್ ಹಣ ಬಾಕಿ ಉಳಿಸಿಕೊಂಡ ಕಂಪನಿಗಳಿಂದ ಭೂಮಿ ವಾಪಸ್ ಪಡೆಯಲಾಗುತ್ತದೆ ಎಂದರು.

ಮರ್ಕೆರಾ ಕಂಪನಿ 1575 ಎಕರೆ ಭೂಮಿಯನ್ನು ಲೀಸ್​ಗೆ ಪಡೆದುಕೊಂಡಿದ್ದು, ಥಾಮ್ಸನ್ ರಬ್ಬರ್ ಲಿ. 625 ಎಕರೆ, ನಿಲಂಬೂರ್ ರಬ್ಬರ್ 713 ಎಕರೆ, ಪೋರ್ಟ ಲ್ಯಾಂಡ್ ರಬ್ಬರ್ ಲಿ. 1288 ಎಕರೆ, ಗ್ಲೆನ್ ಲಾರೆನ್ಸ್ ಪ್ರೈ.ಲಿ. ಮತ್ತು ಟಾಟಾ ಕಂಪನಿ 943 ಎಕರೆ, ಚಾಮರಾಜನಗರದ ಹೊನ್ನಮಟ್ಡಿ ನೀಲಗಿರಿ ಪ್ಲಾಂಟೇಷನ್ ಲಿ. 184 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದಿದೆ. ಒಟ್ಟಾರೆ ಎರಡು ಸಾವಿರ ಕೋಟಿಗೂ ಅಧಿಕ ಲೀಸ್ ಹಣವನ್ನು ಕಂಪನಿಗಳು ಪಾವತಿ ಮಾಡಬೇಕಿದೆ. ಈ ಪೈಕಿ ಕೆಲವರು ಬಾಕಿ ಪಾವತಿಸುವ ಬದಲಿಗೆ ಕೋರ್ಟ್​ ಮೊರೆ ಹೋಗಿದ್ದರು ಎಂದರು.

ಇದನ್ನೂ ಓದಿ: ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ ವಶಕ್ಕೆ; ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತೆ-ಈಶ್ವರ ಖಂಡ್ರೆ

ಮರಗಳನ್ನು ಕಡಿದ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹರನ್ನು ಬಂಧಿಸಲಾಗಿತ್ತು. ಆದರೆ, ಅವರ ಹೆಸರು ಎಫ್​ಐಆರ್​ನಲ್ಲಿ ಇಲ್ಲದಿರುವುದು ಮೈಸೂರು ಜಿಲ್ಲೆಯಲ್ಲಿ ರಾಜಕೀಯ ಕೆಸರೆರಚಾಟ ನಡೆಯುತ್ತಿದೆ. ಪ್ರಕರಣದ ಬಗ್ಗೆ ಮಾತನಾಡಿದ ಈಶ್ವರ್ ಖಂಡ್ರೆ, ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ, ನನ್ನ ಪ್ರಭಾವ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

FIR ಅನ್ನೋದು ಮೊದಲ ವರದಿ. ಆಮೇಲೆ ಆರೋಪಿ ಬದಲಾವಣೆ ಆಗಬಾರದು ಅಂತ ಇಲ್ಲ. ತನಿಖಾಧಿಕಾರಿ ಅದನ್ನ ತೀರ್ಮಾನ ಮಾಡುತ್ತಾರೆ. ಸುಪ್ರೀಂಕೋರ್ಟ್ ನಿಯಮದ ಪ್ರಕಾರ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಾರೆ. ಪ್ರಭಾವಿಗಳು ಇದ್ದರೆ, ಸಾಕ್ಷಿ ನಾಶ ಪಡೆಸುವ ಮಾಹಿತಿ ಇದ್ದರೆ ಅವರನ್ನ ಬಂಧನ ಮಾಡುವ ಅಧಿಕಾರ ಅಧಿಕಾರಿಗಳಿಗೆ ಇರುತ್ತದೆ. ಸುಮ್ಮನೆ ಆರೋಪಿಗಳನ್ನ ರಕ್ಷಣೆ ಮಾಡಲಾಗಿದೆ ಎಂದು ಕುಮಾರಸ್ವಾಮಿ ಆರೋಪ ಮಾಡುವುದು ಸರಿಯಲ್ಲ. ಮಂಡ್ಯ ಕೇಸ್​ನಲ್ಲಿ ವರದಿ ಕೊಡಲು ಹೇಳಿದ್ದೆ. ವರದಿ ಕೊಟ್ಟಿದ್ದಾರೆ. ಅದರಲ್ಲಿ MLC ಪಾತ್ರ ಇಲ್ಲ ಅಂತ ವರದಿ ಬಂದಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?