AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ಸಾವಿರ ಅನಾಥ ಶವಗಳ ಅಸ್ಥಿಯ ಗೌರವಯುತ ವಿಸರ್ಜನೆ ಮಾಡಲಿದೆ ಕರ್ನಾಟಕ ಸರ್ಕಾರ

ಅಂತ್ಯಕ್ರಿಯೆಗೆ ಹೋಗುವ ಆ್ಯಂಬುಲೆನ್ಸ್‌ ಸೇವೆಯನ್ನು ಸಂಪೂರ್ಣ ಉಚಿತವಾಗಿ ಒದಗಿಸುತ್ತೇವೆ. ಮೃತರ ಸಂಬಂಧಿಕರಿಂದ ಹಣ ವಸೂಲಿ ಮಾಡಬಾರದು ಎಂದು ಕಂದಾಯ ಸಚಿವ ಆರ್.ಅಶೋಕ್ ಮಾಧ್ಯಮಗಳಿಗೆ ತಿಳಿಸಿದರು.

1 ಸಾವಿರ ಅನಾಥ ಶವಗಳ ಅಸ್ಥಿಯ ಗೌರವಯುತ ವಿಸರ್ಜನೆ ಮಾಡಲಿದೆ ಕರ್ನಾಟಕ ಸರ್ಕಾರ
ಆರ್. ಅಶೋಕ್
guruganesh bhat
|

Updated on:May 21, 2021 | 3:08 PM

Share

ಬೆಂಗಳೂರು: ಸದ್ಯ ಒಂದು ಸಾವಿರ ಅನಾಥ ಶವಗಳ ಅಸ್ಥಿ ಇದ್ದು, ಮೃತಪಟ್ಟವರ ಸಂಬಂಧಿಕರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಹೀಗಾಗಿ ಸರ್ಕಾರದಿಂದಲೇ ಗೌರವಯುತವಾದ ಅಂತ್ಯ ಸಂಸ್ಕಾರ ಮಾಡಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಹೀಗಾಗಿ ಸರ್ಕಾರವೇ ಬಡವ ಬಲ್ಲಿದ ಎಂದು ಭೇದ ಭಾವ ಮಾಡದೇ ಅಸ್ಥಿಯನ್ನು ಪಂಚಭೂತಗಳಲ್ಲಿ ಲೀನವಾಗುವಂತೆ ನೀರಿನಲ್ಲಿ ಹಿಂದೂ ಸಂಪ್ರದಾಯಬದ್ಧವಾಗಿ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಅಂತ್ಯಕ್ರಿಯೆಗೆ ಹೋಗುವ ಆ್ಯಂಬುಲೆನ್ಸ್‌ ಸೇವೆಯನ್ನು ಸಂಪೂರ್ಣ ಉಚಿತವಾಗಿ ಒದಗಿಸುತ್ತೇವೆ. ಮೃತರ ಸಂಬಂಧಿಕರಿಂದ ಹಣ ವಸೂಲಿ ಮಾಡಬಾರದು. ಒಂದು ಚಿತಾಗಾರದಲ್ಲಿ 15ಕ್ಕಿಂತ ಹೆಚ್ಚು ಶವ ಸುಡುವಂತಿಲ್ಲ. ಶವ ಸಾಗಿಸುವ ಆ್ಯಂಬುಲೆನ್ಸ್ ಹೆಚ್ಚು ಹಣ ವಸೂಲಿ ಮಾಡಿದರೆ ಅವರಿಗೆ ನೀಡಲಾಗಿರುವ ಮೂರು ವರ್ಣ ಪರವಾನಗಿಯನ್ನು ರದ್ದುಗೊಳಿಸುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಮಾಧ್ಯಮಗಳಿಗೆ ತಿಳಿಸಿದರು.

ಶವಾಗಾರಕ್ಕೆ ಹೋಗುವವರು ಕೆಲವರು ಇದೇ ಶವಾಗಾರ ಬೇಕು ಅಂತ ಡಿಮ್ಯಾಂಡ್ ಮಾಡ್ತಿದ್ದಾರೆ. ಒಂದು ಚಿತಾಗಾರದಲ್ಲಿ 15ಕ್ಕಿಂತ ಹೆಚ್ಚು ಶವಗಳನ್ನು ಸುಡುವಂತಿಲ್ಲ. 15ಕ್ಕಿಂತ ಹೆಚ್ಚು ಶವ ಸಂಸ್ಕಾರ ನಡೆದ ಬಳಿಕ ಬೇರೆ ಶವಾಗಾರ, ಚಿತಾಗಾರಕ್ಕೆ ಕಳುಹಿಸಬೇಕು ಎಂದು ಅವರು ತಿಳಿಸಿದರು.

ಸಾವಿನಲ್ಲೂ ರಾಜಕಾರಣ ಒಳ್ಳೇದಲ್ಲ ಸಾವಿನಲ್ಲಿ ರಾಜಕಾರಣ ಮಾಡುವುದು ಒಳ್ಳೆಯದಲ್ಲ. ಸಾವಿನಲ್ಲಿ ರಾಜಕಾರಣ ಮಾಡಿದವರು ಹಿಂದೆಲ್ಲ ಮೂಲೆಗುಂಪಾಗಿದ್ದಾರೆ. ಸಾವನ್ನು ಮುಚ್ಚಿಡುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಸರ್ಕಾರ ಸಾವಿನ ಅಂಕಿ ಸಂಖ್ಯೆ ಮುಚ್ಚಿಡುವ ಅಗತ್ಯವೇ ಇಲ್ಲ. ಪ್ರತಿಯೊಬ್ಬರಿಗೂ ಸಾವಾದ ಮೇಲೆ ಡೆತ್ ಸರ್ಟಿಫಿಕೇಟ್ ಬೇಕೇಬೇಕಾಗುತ್ತದೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಲಿ ಯಾರೇ ಆಗಲಿ ಸಾವಿನಲ್ಲಿ ರಾಜಕಾರಣ ಮಾಡಬೇಡಿ ಎಂದು ಕಂದಾಯ ಸಚಿವ ಆರ್.ಅಶೋಕ್ ಮನವಿ ಮಾಡಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿರುವುದು ನಿಜ. ಆದರೆ, ಅವರೇ ಸಿಎಂ ಆಗಿದ್ದಾಗ ಇಂಥ ಅವಕಾಶವಿಲ್ಲ ಎಂದಿದ್ದರು. ವಿಪಕ್ಷ ನಾಯಕರಿಗೆ ಅವಕಾಶ ಇಲ್ಲ ಎಂದು ಪತ್ರ ಬರೆದಿದ್ದರು. ಅದನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ನೆನಪು ಮಾಡಿಕೊಳ್ಳಲಿ. ಪತ್ರದ ಮೂಲಕ ಮಾಹಿತಿ ಪಡೆದುಕೊಳ್ಳಲು ಅವಕಾಶವಿದೆ. ಆದರೆ ಸಭೆ ನಡೆಸೋದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಇದನ್ನೂ ಓದಿ: ಚಿಪ್ಕೊ ಚಳವಳಿಯ ರೂವಾರಿ ಸುಂದರ್​ಲಾಲ್ ಬಹುಗುಣ ಕೊವಿಡ್​ಗೆ ಬಲಿ

ಕೊವಿಡ್​ 19 ನಿಯಮಗಳನ್ನೆಲ್ಲ ಮುರಿದು ಮದ್ಯ ಪಾರ್ಟಿ ನಡೆಸಿದ ದಾವಣಗೆರೆ ಯೂತ್​ ಕಾಂಗ್ರೆಸ್ ಅಧ್ಯಕ್ಷ; ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನೂ ಭಾಗಿ !

(The Government of Karnataka will make a dignified discharge of 1 thousand orphaned bodies)

Published On - 3:03 pm, Fri, 21 May 21

Follow Us
guruganesh bhat
guruganesh bhat
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ