AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗನವಾಡಿ ಕೇಂದ್ರ ಪುನರಾರಂಭ: ರಾಜ್ಯ ಸರ್ಕಾರದಿಂದ ಆದೇಶ, ಕೊರೊನಾ ಮಾರ್ಗಸೂಚಿ ಅನ್ವಯ

ಸುಪ್ರೀಂ ಕೋರ್ಟ್​ ಆದೇಶದಂತೆ ಕೊವಿಡ್​ನಿಂದಾಗಿ ಬಂದ್​ ಮಾಡಲಾಗಿದ್ದ ಅಂಗನವಾಡಿ ಆರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಅಂಗನವಾಡಿ ಕೇಂದ್ರ ಪುನರಾರಂಭ: ರಾಜ್ಯ ಸರ್ಕಾರದಿಂದ ಆದೇಶ, ಕೊರೊನಾ ಮಾರ್ಗಸೂಚಿ ಅನ್ವಯ
ಅಂಗನವಾಡಿ ಕೇಂದ್ರ
shruti hegde
|

Updated on: Feb 08, 2021 | 10:36 AM

Share

ಬೆಂಗಳೂರು: ಸುಪ್ರೀಂ ಕೋರ್ಟ್​ ಆದೇಶದಂತೆ ಕೊವಿಡ್​ನಿಂದಾಗಿ ಬಂದ್​ ಮಾಡಲಾಗಿದ್ದ ಅಂಗನವಾಡಿ ಮರು ಆರಂಭಕ್ಕೆ ರಾಜ್ಯ ಸರ್ಕಾರ  ನಿರ್ಧರಿಸಿದೆ. ಈ ಕುರಿತಂತೆ ಗ್ರಾಮ ಪಂಚಾಯತಿ ಮೂಲಕ ಅಂಗನವಾಡಿ ಕೇಂದ್ರಗಳನ್ನು ಸ್ಯಾನಿಟೈಸ್​ ಮಾಡುವಂತೆ ಮಾರ್ಗಸೂಚಿ ಹೊರಡಿಸಿದೆ.

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು ಕೊರೊನಾ ಟೆಸ್ಟ್ ಮಾಡಿಸುವುದು, ಅಂಗನವಾಡಿ ಕೇಂದ್ರದ ಆವರಣವನ್ನು, ಶೌಚಾಲಯ ಹಾಗೂ ಪೀಠೋಪಕರಣ ಸ್ವಚ್ಛಗೊಳಿಸುವುದು, 3-6 ವರ್ಷದ ಮಕ್ಕಳಿಗೆ ಮಧ್ಯಾಹ್ನ 12ರವರೆಗೆ ಚಟುವಟಿಕೆ, 3 ವರ್ಷದೊಳಗಿನ ಮಕ್ಕಳು, ಗರ್ಭಿಣಿ, ಬಾಣಂತಿಯರು ಅಂಗನವಾಡಿ ಒಳಗೆ ಭೇಟಿ ನೀಡದಂತೆ ನೋಡಿಕೊಳ್ಳುವುದು, ಕನಿಷ್ಠ 5 ಮಕ್ಕಳು ಹಾಜರಾಗುವಂತೆ ನೋಡಿಕೊಳ್ಳುವುದು, ಮಕ್ಕಳಿಗೆ ಪೋಷಕರ ಅನುಮತಿ ಪತ್ರ ಕಡ್ಡಾಯ, ಹಾಗೂ ಎಲ್ಲ ಮಕ್ಕಳು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.

ಈ ಕುರಿತಂತೆ, ಮಕ್ಕಳು ದೈಹಿಕ ಅಂತರ ಪಾಲಿಸುವಂತೆ ನೋಡಿಕೊಳ್ಳವುದು, ಮಕ್ಕಳಲ್ಲಿ ಕೆಮ್ಮು, ಜ್ವರ, ಗಂಟಲು ನೋವಿನ ಲಕ್ಷಣ ಇದ್ದರೆ ಹತ್ತಿರದ ಸರ್ಕಾರಿ ವೈದ್ಯರಿಗೆ ತೋರಿಸುವುದು, ತಾಂತ್ರಿಕ ಸಲಹಾ ಸಮಿತಿ ಮಾರ್ಗಸೂಚಿ ಪರಿಶೀಲಿಸುವುದು ಈ ರೀತಿಯ ಕೆಲ ನಿಯಮಗಳ ಕುರಿತು ಸರ್ಕಾರ ಆದೇಶ ಹೊರಡಿಸಿದೆ.

ಓದು ಮಗು ಓದು: ಹೀಗಿದೆ ಮಕ್ಕಳ ಪುಸ್ತಕಗಳ ವ್ಯಾಪಾರ ವಹಿವಾಟು…

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!