AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೆ ಕೆಲವು ಕೇಸ್​ಗಳನ್ನು ಹಿಂಪಡೆಯುವ ಅಧಿಕಾರ ಇದೆ ಎಂದ ಸಿದ್ದರಾಮಯ್ಯ

ದಸರಾ ಹಿನ್ನೆಲೆ ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ನಗರದ ಮಂಡಕಳ್ಳಿ ಏರ್​ಪೋರ್ಟ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಬಿಜೆಪಿ ಸುಳ್ಳು ವಿಚಾರಕ್ಕೆ ಯಾವಾಗಲೂ ಹೋರಾಟ ಮಾಡುವುದು. ಕೋರ್ಟ್ ಮತ್ತು ಸರ್ಕಾರಕ್ಕೆ ಕೆಲ ಮೊಕದ್ದಮೆ ವಾಪಸ್ ಪಡೆಯುವ ಅಧಿಕಾರ ಇದೇ. ಈ ಬಗ್ಗೆ ಪರಿಶೀಲನೆ ಮಾಡುತ್ತೇನೆ ಎಂದಿದ್ದಾರೆ.

ಸರ್ಕಾರಕ್ಕೆ ಕೆಲವು ಕೇಸ್​ಗಳನ್ನು ಹಿಂಪಡೆಯುವ ಅಧಿಕಾರ ಇದೆ ಎಂದ ಸಿದ್ದರಾಮಯ್ಯ
ಸರ್ಕಾರಕ್ಕೆ ಕೆಲವು ಕೇಸ್​ಗಳನ್ನು ಹಿಂಪಡೆಯುವ ಅಧಿಕಾರ ಇದೆ ಎಂದ ಸಿದ್ದರಾಮಯ್ಯ
ದಿಲೀಪ್​, ಚೌಡಹಳ್ಳಿ
| Edited By: |

Updated on: Oct 11, 2024 | 3:28 PM

Share

ಮೈಸೂರು, ಅಕ್ಟೋಬರ್​ 11: ನಿನ್ನೆ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್​ ಸಭೆಯಲ್ಲಿ ಬರೋಬ್ಬರಿ 43 ಕೇಸ್​ಗಳನ್ನ ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಕ್ಯಾಬಿನೆಟ್​ ಸಭೆಯ ಈ ನಿರ್ಧಾರ ಸದ್ಯ ರಾಜ್ಯ ರಾಜಕೀಯದಲ್ಲಿ ಗುದ್ದಾಟಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಸರ್ಕಾರಕ್ಕೆ ಕೆಲವು ಕೇಸ್​ಗಳನ್ನು ಹಿಂಪಡೆಯುವ ಅಧಿಕಾರ ಇದೆ. ಈ ಬಗ್ಗೆ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ದಸರಾ ಹಿನ್ನೆಲೆ ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ನಗರದ ಮಂಡಕಳ್ಳಿ ಏರ್​ಪೋರ್ಟ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಬಿಜೆಪಿ ಸುಳ್ಳು ವಿಚಾರಕ್ಕೆ ಯಾವಾಗಲೂ ಹೋರಾಟ ಮಾಡುವುದು. ಈ ಬಗ್ಗೆ ಪರಿಶೀಲನೆ ಮಾಡಿದ ನಂತರ ಮಾತನಾಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 43 ಪ್ರಕರಣ ವಾಪಸ್: ಸಚಿವ ಸಂಪುಟ ನಿರ್ಧಾರ

ರಾಜ್ಯ ಸರ್ಕಾರದ ಜಾಹೀರಾತಿಗೆ ಬಿಜೆಪಿ ನಾಯಕರ ಕಿಡಿ ವಿಚಾರವಾಗಿ ಮಾತನಾಡಿದ ಸಿಎಂ, ದಸರಾ ಅಂದರೆ ದುಷ್ಟ ಶಕ್ತಿಗಳ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾ. ವಿಜಯನಗರದ ಅರಸರು ವಿಜಯದ ಸಂಕೇತವಾಗಿ ಆಚರಿಸುತ್ತಿದ್ದರು. ಮೈಸೂರು ಅರಸರು ಅದನ್ನೇ ಮುಂದುವರಿಸಿದರು. ಇವತ್ತು ಅದೇ ಸಂಪ್ರದಾಯ ಮುಂದುವರಿದಿದೆ ಎಂದರು.

ಜಾಹೀರಾತನ್ನು ಇವತ್ತಿಗೆ ನೀವು ಹೇಗೆ ವ್ಯಾಖ್ಯಾನ ಮಾಡ್ತೀರಾ ಹಾಗೆ. ಜಾಹೀರಾತಿನ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕೆ ವಿಚಾರವಾಗಿ, ಮಾಜಿ ಸಿಎಂ ಯಡಿಯೂರಪ್ಪ ಪೋಕ್ಸೋ ಕೇಸ್​ನಲ್ಲಿ ಸಿಕ್ಕಿಬಿದ್ದಿದ್ದಾರೆ. ಮೊದಲು ಪಾರ್ಲಿಮೆಂಟ್ ಬೋರ್ಡ್​ನಿಂದ ಕಿತ್ತು ಹಾಕಲು ಹೇಳಿ. ಕೋರ್ಟ್ ಇಲ್ಲದಿದ್ದರೆ ಯಡಿಯೂರಪ್ಪ ಜೈಲಿನಲ್ಲಿ ಇರಬೇಕಿತ್ತು ಎಂದು ಕಿಡಿಕಾರಿದ್ದಾರೆ.

ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ 43 ಪ್ರಕರಣ ವಾಪಸ್!

ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಬರೋಬ್ಬರಿ 43 ಕೇಸ್​ಗಳನ್ನ ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಇದರಲ್ಲಿ ಹುಬ್ಬಳ್ಳಿ ಗಲಭೆ ಪ್ರಕರಣವೂ ಒಂದಾಗಿದೆ. ಇದರಲ್ಲಿ ಕೆಲವು ಪ್ರಮುಖ ರಾಜಕೀಯ ನಾಯಕರ ವಿರುದ್ಧ ದಾಖಲಾಗಿರುವ ಕೇಸ್​ಗಳನ್ನೂ ವಾಪಸ್ ಪಡೆಯಲಾಗಿದೆ. ಪ್ರತಿಭಟನೆ ಹಾಗೂ ಗಲಾಟೆಯಲ್ಲಿ ದಾಖಲಾಗಿದ್ದ ಕೇಸ್​ಗಳನ್ನ ಹಿಂಪಡೆಯಲಾಗಿದೆ. ಸರ್ಕಾರದ ನಡೆಯನ್ನೇ ಖಂಡಿಸಿ ಇದೀಗ ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್