AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಛಿದ್ರ ಮಾಡಿದರೆ ಕೆಂಪೇಗೌಡರ ಶಾಪ ತಟ್ಟಲಿದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರನ್ನು ಗ್ರೇಟರ್ ಬೆಂಗಳೂರು ಮಾಡುವ ಸರ್ಕಾರದ ನಿರ್ಧಾರ ಈಗ ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವಿನ ಮತ್ತೊಂದು ಸಮರಕ್ಕೆ ವೇದಿಕೆ ಆಗಿದೆ. ವಿಧೇಯಕವನ್ನು ಮಂಗಳವಾರ ವಿಧಾನಸಭೆಯಲ್ಲಿ ಮಂಡನೆ ಮಾಡಲಾಗಿದ್ದು, ಇದು ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವಣ ತೀವ್ರ ವಾಕ್ಸಮರಕ್ಕೆ ಕಾರಣವಾಯಿತು.

ಬೆಂಗಳೂರು ಛಿದ್ರ ಮಾಡಿದರೆ ಕೆಂಪೇಗೌಡರ ಶಾಪ ತಟ್ಟಲಿದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ
ಡಿಕೆ ಶಿವಕುಮಾರ್ ಹಾಗೂ ಆರ್ ಅಶೋಕ್
ಪ್ರಸನ್ನ ಗಾಂವ್ಕರ್​
| Edited By: |

Updated on: Jul 24, 2024 | 7:01 AM

Share

ಬೆಂಗಳೂರು, ಜುಲೈ 24: ರಾಜ್ಯ ರಾಜಧಾನಿ ಬೆಂಗಳೂರಿಗೆ ಹೊಸ ಆಡಳಿತ ವ್ಯವಸ್ಥೆ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಅದರ ಭಾಗವಾಗಿ ಗ್ರೇಟರ್ ಬೆಂಗಳೂರು ಅಥಾರಿಟಿ ಸ್ಥಾಪನೆಗೆ ಮೊನ್ನೆ ನಡೆದಿದ್ದ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿತ್ತು. ಮಂಗಳವಾರ ವಿಧಾನಸಭೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ವಿಧೇಯಕದ ವಿಧೇಯಕ ಮಂಡನೆ ಮಾಡಿದರು. ಡಿಕೆ ಶಿವಕುಮಾರ್ ಬಿಲ್ ಮಂಡಿಸಲು ಶುರು ಮಾಡ್ತಿದ್ದಂತೆಯೇ ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣ ವಿರೋಧ ವ್ಯಕ್ತಪಡಿಸಿದರು.

ಬೆಂಗಳೂರು ಛಿದ್ರ ಮಾಡಿದ್ರೆ ಕೆಂಪೇಗೌಡರ ಶಾಪ ತಟ್ಟಲಿದೆ: ಅಶೋಕ್

ವಿಪಕ್ಷ ನಾಯಕ ಆರ್​.ಅಶೋಕ್ ಕೂಡ ಗ್ರೇಟರ್ ಬೆಂಗಳೂರು ಅಥಾರಿಟಿಗೆ ತೀವ್ರ ವಿರೋಧ ವ್ಯಕ್ತ ಪಡಿಸಿದರು. ಬೆಂಗಳೂರು ಛಿದ್ರ ಛಿದ್ರ ಮಾಡಿದರೆ ನಿಮಗೆ ಕೆಂಪೇಗೌಡರ ಶಾಪ ತಟ್ಟಲಿದೆ ಎಂದು ಆಕ್ರೋಶ ಹೊರಹಾಕಿದರು.

ಗ್ರೇಟರ್ ಬೆಂಗಳೂರು ಅಥಾರಿಟಿ ಅಸ್ತಿತ್ವಕ್ಕೆ ತರುವ ಬಗ್ಗೆ ಈ ಹಿಂದೆಯೇ ‘ಟಿವಿ9’ ಸುದ್ದಿ ಪ್ರಕಟಿಸಿತ್ತು. ಅದರಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಏನೇನು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂಬ ವಿಸ್ತೃತ ವರದಿ ನೀಡಲಾಗಿತ್ತು.

ಏನಿದು ಗ್ರೇಟರ್ ಬೆಂಗಳೂರು?

ಗ್ರೇಟರ್​ ಬೆಂಗಳೂರು ಅಥಾರಿಟಿ ಸ್ಥಾಪನೆಗೆ ಇದೀಗ ಸರ್ಕಾರ ಮುಂದಾಗಿದೆ. ರಾಮನಗರ, ಕನಕಪುರವನ್ನು ಬೆಂಗಳೂರಿಗೆ ಸೇರಿಸಲು ರೂಪುರೇಷೆ ಸಿದ್ಧ ಮಾಡಿಕೊಳ್ಳಲಾಗಿದೆ. ಸದ್ಯ ಬಿಬಿಎಂಪಿ ಇದ್ದು, ಮುಂದೆ ಬಿಬಿಎಂಪಿ ಬದಲಿಗೆ ಗ್ರೇಟರ್​ ಬೆಂಗಳೂರು ಅಥಾರಿಟಿ ಅಸ್ತಿತ್ವಕ್ಕೆ ಬರಲಿದೆ. ಗ್ರೇಟರ್ ಬೆಂಗಳೂರು ಅಥಾರಿಟಿಗೆ ವ್ಯಾಪ್ತಿಗೆ 400 ವಾರ್ಡ್​ಗಳನ್ನ ಸೇರಿಸುವ​ ಸಾಧ್ಯತೆ ಇದೆ. ಕನಕಪುರ, ರಾಮನಗರ ಗಡಿ ಭಾಗಗಳೂ ಜಿಬಿಎಗೆ ಸೇರ್ಪಡೆಗೆ ಪ್ಲ್ಯಾನ್​ ಮಾಡಲಾಗಿದೆ. ಸಂಪನ್ಮೂಲ ಕ್ರೋಢೀಕರಿಸಿ ಬಿಬಿಎಂಪಿ ವಿಭಜನೆಗೆ ಸರ್ಕಾರ ನಿರ್ಧಾರ ಮಾಡಿದೆ. ಇನ್ನು ಸಿಎಂ ಅಧ್ಯಕ್ಷತೆಯ ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿ 5 ರಿಂದ 10 ಸಿಟಿ ಕಾರ್ಪೊರೇಷನ್​ಗಳು ಬರಲಿವೆ, ಗ್ರೇಟರ್ ಬೆಂಗಳೂರು ಅಥಾರಿಟಿಗೆ ಯೋಜನೆ, ಹಣಕಾಸು ಅಧಿಕಾರ ನಿರ್ವಹಣೆಯ ಅಧಿಕಾರ ಇರಲಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಸಿಎಂ ಅಧ್ಯಕ್ಷರಾಗಿರುತ್ತಾರೆ.

ಇದನ್ನೂ ಓದಿ: ಏನಿದು ಗ್ರೇಟರ್ ಬೆಂಗಳೂರು ಅಥಾರಿಟಿ ವಿಧೇಯಕ? ಇಲ್ಲಿದೆ ಸಂಪೂರ್ಣ ವಿವರ

ರಾಮನಗರ ಜಿಲ್ಲೆಯ 3 ತಾಲೂಕುಗಳನ್ನು ಇದರ ವ್ಯಾಪ್ತಿಗೆ ತರುವ ಬಗ್ಗೆ ರಾಜಕೀಯ ಉದ್ದೇಶವೇ ಹೆಚ್ಚಾಗಿದೆ. ಹೀಗಾಗಿಯೇ ವಿಪಕ್ಷ ಬಿಜೆಪಿ ಕೂಡಾ ಇದನ್ನ ವಿರೋಧಿಸುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ