AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ನಿಷೇಧದ ಮಧ್ಯೆ ಬೆಂಗಳೂರಿನಲ್ಲಿ ಎಗ್ಗಿಲ್ಲದೆ ಸಾಗಿದೆ ಹುಕ್ಕಾ ಬಾರ್ ವ್ಯಾಪಾರ

ಶಿಶಾ ಕೆಫೆಗಳು ಮತ್ತು ರೆಸ್ಟೋರೆಂಟ್‌ಗಳ ಸಂಘದ ಅಧ್ಯಕ್ಷ ಮೊಹಮ್ಮದ್ ಡ್ಯಾನಿಶ್​ ಪ್ರತಿಕ್ರಿಯಿಸಿದ್ದು, ‘ಮೈಸೂರು ರಸ್ತೆ ಮತ್ತು ಬಿಎಚ್‌ಇಎಲ್ ರಸ್ತೆಯಲ್ಲಿರುವ ಅನೇಕ ಕೆಫೆಗಳು ಮತ್ತು ರೆಸ್ಟೋರೆಂಟ್‌ಗಳು ಹುಕ್ಕಾ ಮಾರಾಟ ಮತ್ತು ಸೇವನೆಯ ಮೇಲಿನ ನಿಷೇಧವನ್ನು ಉಲ್ಲಂಘಿಸುತ್ತಿವೆ. ಈ ವರ್ಷ ಫೆಬ್ರವರಿ 7 ರಂದು ಕರ್ನಾಟಕದಾದ್ಯಂತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಂಬಳಿ ನಿಷೇಧವನ್ನು ವಿಧಿಸಿದೆ’.

ರಾಜ್ಯದಲ್ಲಿ ನಿಷೇಧದ ಮಧ್ಯೆ ಬೆಂಗಳೂರಿನಲ್ಲಿ ಎಗ್ಗಿಲ್ಲದೆ ಸಾಗಿದೆ ಹುಕ್ಕಾ ಬಾರ್ ವ್ಯಾಪಾರ
ರಾಜ್ಯದಲ್ಲಿ ನಿಷೇಧದ ಮಧ್ಯೆ ಬೆಂಗಳೂರಿನಲ್ಲಿ ಎಗ್ಗಿಲ್ಲದೆ ಸಾಗಿದೆ ಹುಕ್ಕಾ ಬಾರ್ ವ್ಯಾಪಾರ
ಗಂಗಾಧರ​ ಬ. ಸಾಬೋಜಿ
|

Updated on: May 13, 2024 | 7:35 PM

Share

ಬೆಂಗಳೂರು, ಮೇ 13: ರಾಜ್ಯ ಸರ್ಕಾರವು ರಾಜ್ಯಾದ್ಯಂತ ನಿಷೇಧಿಸಿದ ನಂತರವೂ ಬೆಂಗಳೂರಿನಲ್ಲಿ ಹುಕ್ಕಾ (hookah) ಬಾರ್‌ಗಳ ವ್ಯಾಪಾರ ಎಗ್ಗಿಲ್ಲದೆ ಸಾಗಿದೆ. ನಗರದ ಕೇಂದ್ರ ಮತ್ತು ಹೊರವಲಯದಲ್ಲಿ ಹುಕ್ಕಾ ಬಾರ್​ಗಳು ಮುಂದುವರೆಸುತ್ತಿವೆ ಎಂದು ಶಿಶಾ ಕೆಫೆಗಳು ಮತ್ತು ರೆಸ್ಟೋರೆಂಟ್‌ಗಳ ಸಂಘವು ಹೇಳಿಕೊಂಡಿದೆ. ಕಮ್ಮನಹಳ್ಳಿ, ಇಂದಿರಾನಗರ ಮತ್ತು ಮಧ್ಯ ಬೆಂಗಳೂರಿನ ಗಾಂಧಿನಗರ, ಇಲೆಕ್ಟ್ರಾನಿಕ್ಸ್ ಸಿಟಿ, ರಾಮನಗರ ಮತ್ತು ನಂದಿ ಹಿಲ್ಸ್​ ಸೇರಿದಂತೆ ಹೊರವಲದಲ್ಲಿ ಹುಕ್ಕಾ ವ್ಯಾಪಾರವನ್ನು ನಡೆಸುತ್ತಿವೆ. ಈ ಪ್ರದೇಶಗಳಲ್ಲಿ ರೆಸ್ಟೋರೆಂಟ್‌ಗಳು ಮತ್ತು ಕೆಫೆಗಳು ಹುಕ್ಕಾ ನಿಷೇಧವನ್ನು ಬಹಿರಂಗವಾಗಿ ಉಲ್ಲಂಘಿಸುತ್ತಿವೆ ಎಂದು ವರದಿಯಾಗಿದೆ.

ಶಿಶಾ ಕೆಫೆಗಳು ಮತ್ತು ರೆಸ್ಟೋರೆಂಟ್‌ಗಳ ಸಂಘದ ಅಧ್ಯಕ್ಷ ಮೊಹಮ್ಮದ್ ಡ್ಯಾನಿಶ್​ ಪ್ರತಿಕ್ರಿಯಿಸಿದ್ದು, ‘ಮೈಸೂರು ರಸ್ತೆ ಮತ್ತು ಬಿಎಚ್‌ಇಎಲ್ ರಸ್ತೆಯಲ್ಲಿರುವ ಅನೇಕ ಕೆಫೆಗಳು ಮತ್ತು ರೆಸ್ಟೋರೆಂಟ್‌ಗಳು ಹುಕ್ಕಾ ಮಾರಾಟ ಮತ್ತು ಸೇವನೆಯ ಮೇಲಿನ ನಿಷೇಧವನ್ನು ಉಲ್ಲಂಘಿಸುತ್ತಿವೆ. ಈ ವರ್ಷ ಫೆಬ್ರವರಿ 7 ರಂದು ಕರ್ನಾಟಕದಾದ್ಯಂತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಂಬಳಿ ನಿಷೇಧವನ್ನು ವಿಧಿಸಿದೆ’.

ಇದನ್ನೂ ಓದಿ: ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ: ಅಧಿಕೃತ ಆದೇಶ ಹೊರಡಿಸಿದ ಆರೋಗ್ಯ ಇಲಾಖೆ

‘ಬೆಂಗಳೂರಿನಾದ್ಯಂತ ಸುಮಾರು 10,000 ಉದ್ಯೋಗಿಗಳು ಹುಕ್ಕಾ ಬಾರ್ ಮತ್ತು ಕೆಫೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ನಾವು ಬಹಳ ಹಿಂದಿನಿಂದಲೂ ಸಾಂಪ್ರದಾಯಿಕವಾಗಿ ಹುಕ್ಕಾ ವ್ಯಾಪಾರ ಮಾಡುತ್ತಿದ್ದೇವೆ. ಆಲ್ಕೋಹಾಲ್ ಅಥವಾ ಸಿಗರೇಟ್ ಸೇವನೆಯ ಮೇಲೆ ಯಾವುದೇ ನಿಷೇಧವಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧದ ಹೊರತಾಗಿಯೂ, ಸೇವನೆ ಮುಂದುವರಿಯುತ್ತಿದೆ. ಹಾಗಾದರೆ ಹುಕ್ಕಾವನ್ನು ಮಾತ್ರ ಏಕೆ ನಿಷೇಧಿಸಬೇಕು? ನಮ್ಮ ಜೀವನೋಪಾಯದ ಬಗ್ಗೆ ಯಾರು ಕಾಳಜಿ ವಹಿಸುತ್ತಾರೆ? ನಿಷೇಧಾಜ್ಞೆ ತೆರವಾಗುವವರೆಗೂ ಸಂಘ ಹೋರಾಟ ನಡೆಸಲಿದೆ’ ಎಂದು ಹೇಳಿದ್ದಾರೆ.

‘ಬಸವನಗುಡಿಯಲ್ಲಿ ದಾಳಿ ನಡೆದರೂ ರಾಮನಗರ ಸಮೀಪದ ಕೆಂಚನಕುಪ್ಪೆಯಲ್ಲಿ ಕೆಫೆಯೊಂದು ಹುಕ್ಕಾ ಮಾರಾಟ ಮಾಡುತ್ತಿದೆ ಎಂದು ಡ್ಯಾನಿಶ್ ಹೇಳಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಆದಾಗ್ಯೂ, ಕೋರಮಂಗಲ ಮತ್ತು ಚರ್ಚ್ ಸ್ಟ್ರೀಟ್‌ನಲ್ಲಿರುವ ಕೆಫೆಗಳು ನಿಷೇಧವನ್ನು ಅನುಸರಿಸುತ್ತಿವೆ’ ಎಂದಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ಹುಕ್ಕಾ ಬಾರ್ & ತಂಬಾಕಿನ ಉತ್ಪನ್ನ ಮಾರಾಟ ಮಳಿಗೆ ಮೇಲೆ ದಾಳಿ; 5 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ವಶಕ್ಕೆ

ಕೆಫೆ ಮತ್ತು ರೆಸ್ಟೋರೆಂಟ್‌ಗಳು ನಿಯಮಗಳನ್ನು ಗಾಳಿಗೆ ತೂರಿರುವ ಬಗ್ಗೆ ಪ್ರತಿಕ್ರಿಯಿಸಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಪೊಲೀಸರ ತಂಡವು ನಗರದಾದ್ಯಂತ ಕಟ್ಟುನಿಟ್ಟಾದ ಕಣ್ಗಾವಲು ಮತ್ತು ದಾಳಿಗಳನ್ನು ನಡೆಸುತ್ತಿದೆ ಎಂದು ಹೇಳಿದ್ದಾರೆ.

ಹುಕ್ಕಾ ಮಾರಾಟ ಅಥವಾ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ತಂಡವು ನಾಗರಿಕರ ದೂರುಗಳನ್ನು ಗಮನದಲ್ಲಿಟ್ಟುಕೊಂಡು ನಿಯಮಾವಳಿಗಳನ್ನು ಉಲ್ಲಂಘಿಸುವವರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ