AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಸಾಮಾನ್ಯವಾಗಿರಲಿದೆ ನೈಋತ್ಯ ಮಾನ್ಸೂನ್; ಹವಾಮಾನ ಇಲಾಖೆ ವರದಿಯಿಂದ ಆರ್ಥಿಕ ತಜ್ಞರು ಫುಲ್​ ಖುಷ್​

ದೀರ್ಘಾವಧಿ ಸರಾಸರಿ ಶೇ.96 ರಿಂದ ಶೇ.104ರವರೆಗೆ ಮಳೆಯಾದರೆ ಅದನ್ನು ಸಾಮಾನ್ಯ ಮಾನ್ಸೂನ್​ ಎಂದೇ ಪರಿಗಣಿಸಲಾಗುತ್ತದೆ. ಜೂನ್​ನಿಂದ ಪ್ರಾರಂಭವಾಗುವ ನೈಋತ್ಯ ಮಾನ್ಸೂನ್​ ಮುನ್ಸೂಚನಾ ವರದಿಯನ್ನು ಮೇ ತಿಂಗಳ ಕೊನೇ ವಾರದಲ್ಲಿ ಹವಾಮಾನ ಇಲಾಖೆ ನೀಡಲಿದೆ.

ಈ ಬಾರಿ ಸಾಮಾನ್ಯವಾಗಿರಲಿದೆ ನೈಋತ್ಯ ಮಾನ್ಸೂನ್; ಹವಾಮಾನ ಇಲಾಖೆ ವರದಿಯಿಂದ ಆರ್ಥಿಕ ತಜ್ಞರು ಫುಲ್​ ಖುಷ್​
ಮಳೆ (ಪ್ರಾತಿನಿಧಿಕ ಚಿತ್ರ)
Lakshmi Hegde
| Edited By: |

Updated on:Apr 17, 2021 | 2:56 PM

Share

ದೆಹಲಿ: ಈ ಬಾರಿ ದೇಶದಲ್ಲಿ ನೈಋತ್ಯ ಮಾನ್ಸೂನ್​ ಸಾಮಾನ್ಯವಾಗಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಜೂನ್​​ನಲ್ಲಿ ಶುರುವಾಗುವ ಈ ನೈಋತ್ಯ ಮಾನ್ಸೂನ್​ ಮಳೆ ಸೆಪ್ಟೆಂಬರ್​ವರೆಗೆ ಬೀಳಲಿದ್ದು, ಕಳೆದ ಮೂರುವರ್ಷಗಳಿಂದ ನೈಋತ್ಯ ಮಾನ್ಸೂನ್​ ಎಫೆಕ್ಟ್​ ಸರಾಸರಿಗಿಂತ ಜಾಸ್ತಿಯೇ ಇರುತ್ತಿತ್ತು. ಈ ಬಾರಿ ನಾಲ್ಕು ತಿಂಗಳ ದೀರ್ಘಾವಧಿ ಸರಾಸರಿ (ಎಲ್​​ಪಿಎ) ಶೇ.98ರಷ್ಟು ಮಳೆಯಾಗುವ ಸಾಧ್ಯತೆಯಿದ್ದು, ಇದು ಸಾಮಾನ್ಯ ಮಾನ್ಸೂನ್​ ಎನ್ನಿಸಿಕೊಳ್ಳಲಿದೆ ಎಂದು ಐಎಂಡಿ ಹೇಳಿದೆ.

ದೀರ್ಘಾವಧಿ ಸರಾಸರಿ ಶೇ.96 ರಿಂದ ಶೇ.104ರವರೆಗೆ ಮಳೆಯಾದರೆ ಅದನ್ನು ಸಾಮಾನ್ಯ ಮಾನ್ಸೂನ್​ ಎಂದೇ ಪರಿಗಣಿಸಲಾಗುತ್ತದೆ. ಜೂನ್​ನಿಂದ ಪ್ರಾರಂಭವಾಗುವ ನೈಋತ್ಯ ಮಾನ್ಸೂನ್​ ಮುನ್ಸೂಚನಾ ವರದಿಯನ್ನು ಮೇ ತಿಂಗಳ ಕೊನೇ ವಾರದಲ್ಲಿ ಹವಾಮಾನ ಇಲಾಖೆ ನೀಡಲಿದೆ. ಹಾಗೇ, ಜೂನ್​ನಿಂದ ಸೆಪ್ಟೆಂಬರ್​ವರೆಗೆ ಪ್ರತಿತಿಂಗಳ ಮುನ್ಸೂಚನೆಯನ್ನೂ ಅಪ್​ಡೇಟ್ ಮಾಡಲಾಗುವುದು ಎಂದು ಭೂ ವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಮಾಧವನ್​ ರಾಜೀವನ್ ತಿಳಿಸಿದ್ದಾರೆ.

ಕೃಷಿಗೆ ತೊಡಕಿಲ್ಲ ಇನ್ನು ಈ ಬಾರಿ ನೈಋತ್ಯ ಮಾನ್ಸೂನ್​ ಸಾಮಾನ್ಯವಾಗಿರಲಿದೆ ಎಂಬ ಹವಾಮಾನ ಇಲಾಖೆ ವರದಿಯ ಬಗ್ಗೆ ಆರ್ಥಿಕ ತಜ್ಞರು ಖುಷಿ ವ್ಯಕ್ತಪಡಿಸಿದ್ದಾರೆ. ಕೃಷಿವಲಯಕ್ಕೆ ನಿಜಕ್ಕೂ ಇದು ಗುಡ್​ನ್ಯೂಸ್ ಎಂದು ಹೇಳಿದ್ದಾರೆ. ಮಾನ್ಸೂನ್​ ಸಾಮಾನ್ಯವಾಗಿರಲಿದೆ ಎಂಬ ಹವಾಮಾನ ಇಲಾಖೆಯ ವರದಿ ನಿಜಕ್ಕೂ ಸಮಾಧಾನ ತಂದಿದೆ ಎಂದು ಐಸಿಆರ್​ಎ ಮುಖ್ಯ ಆರ್ಥಿಕ ತಜ್ಞರಾದ ಅದಿತಿ ನಾಯರ್​ ತಿಳಿಸಿದ್ದಾರೆ.

ಇದನ್ನೂ ಓದಿ:  ನನ್ನ ಸಂಪರ್ಕದಲ್ಲಿದ್ದವರೆಲ್ಲಾ ಕ್ವಾರಂಟೈನ್ ಆಗಿ, ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ: ಬಿ.ಎಸ್.ಯಡಿಯೂರಪ್ಪ ಮನವಿ

ರಾತ್ರೋರಾತ್ರಿ ಮುಂಬೈ ಬಿಟ್ಟು ಬೆಂಗಳೂರಿಗೆ ಬಂದ ದೀಪಿಕಾ-ರಣವೀರ್​ ಸಿಂಗ್​! ಕೊರೊನಾ ಕಾರಣ

Published On - 5:45 pm, Fri, 16 April 21

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ