ಹಳ್ಳಿಗಳಲ್ಲಿ ರಾತ್ರಿ ವೇಳೆ ಹೆಚ್ಚಾದ ಚಿರತೆ ಹಾವಳಿ: ಜನರೇ ಎಚ್ಚರ!

| Updated By: ಆಯೇಷಾ ಬಾನು

Updated on: Jan 16, 2021 | 8:19 AM

ತುರುವೆಕೆರೆ ತಾಲೂಕಿನ ದಂಡಿನ ಶಿವರ ಹೋಬಳಿಯ ಹತ್ತಿಹಳ್ಳಿಯ ಫಾರ್ಮ್ ಹೌಸ್​ನಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಹಳ್ಳಿಗಳಲ್ಲಿ ರಾತ್ರಿ ವೇಳೆ ಹೆಚ್ಚಾದ ಚಿರತೆ ಹಾವಳಿ: ಜನರೇ ಎಚ್ಚರ!
ತುಮಕೂರು ಫಾರಂ ಹೌಸ್​ನಲ್ಲಿ ಕಾಣಿಸಿಕೊಂಡ ಚಿರತೆ
Follow us on

ತುಮಕೂರು: ತುರುವೆಕೆರೆ ತಾಲೂಕಿನ ದಂಡಿನ ಶಿವರ ಹೋಬಳಿಯ ಹತ್ತಿಹಳ್ಳಿಯ ಫಾರಂ ಹೌಸ್​ನಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರಾತ್ರಿಯಾಗುತ್ತಿದಂತೆ ಕುಮಾರ ಸ್ವಾಮಿ ಎಂಬುವವರ ಫಾರಂ​ ಹೌಸ್​ನಲ್ಲಿ ಚಿರತೆ ಕಾಣಿಸಿಕೊಂಡಿದೆ. ಕಳೆದ ಎರಡು ದಿನಗಳ ಹಿಂದೆ ಮೇಕೆ ಮತ್ತು ನಾಯಿಯನ್ನು ಚಿರತೆ ಹೊತ್ತೊಯ್ದಿತ್ತು. ಈ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಜೀವ ಭಯದಲ್ಲಿ ರಾತ್ರಿ ಕಳೆಯುವಂತಾಗಿದೆ ಎಂದು ಕುಮಾರ ಸ್ವಾಮಿ ಕುಟುಂಬಸ್ಥರು ನೋವು ತೋಡಿಕೊಂಡಿದ್ದಾರೆ. ಈ ಕುರಿತಂತೆ, ಏನಾದರೂ ಅನಾಹುತ ಸಂಭವಿಸುವ ಮುನ್ನ ಕ್ರಮ ಕೈಗೊಳ್ಳಿ ಎಂದು ಅರಣ್ಯ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಮೆಡಿಕಲ್ ಕಾಲೇಜು ಕ್ಯಾಂಪಸ್‌ನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಕಂಗಾಲಾದ ವಿದ್ಯಾರ್ಥಿಗಳು