AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಮಹಾರಾಜರೇ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿರಲಿಲ್ಲ, ಈಗ ಈಜುಕೊಳ ಬೇಕಿತ್ತಾ?: ಮಾಜಿ ಸಚಿವ ಎ.ಮಂಜು ವಾಗ್ದಾಳಿ

ಇವತ್ತು ದನ ಕಾಯುವವರೂ ಐಎಎಸ್ ಮಾಡುತ್ತಾರೆ. ನಂತರ ಅಧಿಕಾರ ಹೇಗೆ ನಡೆಸುತ್ತೇವೆ ಎನ್ನುವುದು ಮುಖ್ಯ. ದನ ಕಾಯೋರು, ಅಡ್ಜೆಸ್ಟ್​ಮೆಂಟ್ ಮಾಡಿಕೊಳ್ಳುವವರು ಸಹ ಐಎಎಸ್ ಪಾಸ್ ಮಾಡುತ್ತಾರೆ. ಆದರೆ ಜನಸೇವೆ ಹೇಗೆ ಮಾಡುತ್ತೇವೆ ಅನ್ನುವುದು ಮುಖ್ಯ ಎಂದು ಮಾಜಿ ಸಚಿವ ಎ ಮಂಜು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು ಮಹಾರಾಜರೇ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿರಲಿಲ್ಲ, ಈಗ ಈಜುಕೊಳ ಬೇಕಿತ್ತಾ?: ಮಾಜಿ ಸಚಿವ ಎ.ಮಂಜು ವಾಗ್ದಾಳಿ
ರೋಹಿಣಿ ಸಿಂಧೂರಿ ಮತ್ತು ಎ.ಮಂಜು
TV9 Web
| Edited By: |

Updated on: Jun 05, 2021 | 3:05 PM

Share

ಮೈಸೂರು: ಮೈಸೂರು ಮಹಾರಾಜರೇ ಸ್ವಿಮ್ಮಿಂಗ್ ಪೂಲ್​ ಕಟ್ಟಿಸಿರಲಿಲ್ಲ. ಹೀಗಿರುವಾಗ ಈ ಸಮಯದಲ್ಲಿ ಸರ್ಕಾರಿ ಸ್ಥಳದಲ್ಲಿ ಈಜುಕೊಳ ಬೇಕಿತ್ತಾ? ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾಜಿ ಸಚಿವ ಎ.ಮಂಜು ವಾಗ್ದಾಳಿ ನಡೆಸಿದರು.

ಸರ್ಕಾರಿ ಅಧಿಕಾರಿಗಳು ಒಂದೇ ಕಡೆ ಇರುತ್ತಾರಾ? ಬೇರೆಡೆ ವರ್ಗಾವಣೆ ಆಗಿ ಹೋಗ್ತಾರೆ ಇದು ಗುತ್ತಿಗೆದಾರನಿಗಾಗಿ ಮಾಡಿರುವ ಕೆಲಸವಷ್ಟೇ? ಇವತ್ತು ದನ ಕಾಯುವವರೂ ಐಎಎಸ್ ಮಾಡುತ್ತಾರೆ. ನಂತರ ಅಧಿಕಾರ ಹೇಗೆ ನಡೆಸುತ್ತೇವೆ ಎನ್ನುವುದು ಮುಖ್ಯ. ದನ ಕಾಯೋರು, ಅಡ್ಜೆಸ್ಟ್​ಮೆಂಟ್ ಮಾಡಿಕೊಳ್ಳುವವರು ಸಹ ಐಎಎಸ್ ಪಾಸ್ ಮಾಡುತ್ತಾರೆ. ಆದರೆ ಜನಸೇವೆ ಹೇಗೆ ಮಾಡುತ್ತೇವೆ ಅನ್ನುವುದು ಮುಖ್ಯ ಎಂದು ಮಾಜಿ ಸಚಿವ ಎ ಮಂಜು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಮನೆಗೆ ಶಿಕ್ಷಕರು ಬಂದು ಅವರ ಮಕ್ಕಳಿಗೆ ಪಾಠ ಮಾಡುಲಾಗುತ್ತಿದೆ ಎಂದು ಮಾಜಿ ಸಚಿವ ಎ.ಮಂಜು ಆರೋಪ ಮಾಡಿದ್ದಾರೆ.

ಮೈಸೂರು ಡಿಸಿ ರೋಹಿಣಿ ಸಿಂಧೂರಿ ಇಬ್ಬಗೆ ನೀತಿ ಅನುರಸಿಸುತ್ತಿದ್ದಾರೆ. ಡಿಸಿಗೆ ಒಂದು ರೂಲ್ಸ್​, ಜನಸಾಮಾನ್ಯರಿಗೊಂದು ರೂಲ್ಸಾ? ಜನಸಾಮಾನ್ಯರ ಮಕ್ಕಳಿಗೆ ಆನ್​ಲೈನ್​ ಮೂಲಕ ಶಿಕ್ಷಣ ನೀಡಲಾಗುತ್ತಿದೆ. ಡಿಸಿ ಮಕ್ಕಳಿಗೆ ಮನೆಗೆ ಬಂದು ಶಿಕ್ಷಕರಿಂದ ಪಾಠ ಪ್ರವಚನ ನಡೆಸಲಾಗುತ್ತಿದೆ. ಈ ಇಬ್ಬಗೆ ನೀತಿಯನ್ನು ಕೇಳೋರು ಯಾರು ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮೈಸೂರು ಜಿಲ್ಲಾಧಿಕಾರಿ- ಮೇಯರ್ ಜಟಾಪಟಿ: ತಮ್ಮ ವಿರುದ್ಧದ ಆರೋಪಗಳಿಗೆ ಸ್ಪಷ್ಟೀಕರಣ ನೀಡಿದ ಶಿಲ್ಪಾ ನಾಗ್

ಮೈಸೂರಿನಲ್ಲಿ ಐಎಎಸ್​ vs ಐಎಎಸ್​: ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಆರೋಪಕ್ಕೆ ಡಿಸಿ ರೋಹಿಣಿ ಸಿಂಧೂರಿ ಸ್ಪಷ್ಟನೆ

(The Maharaja of Mysore had not built a swimming pool but now swimming pool is necessary questions Former Minister A Manju on DC Rohini Sindhuri)

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ