AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಹಾಕಿಸಿಕೊಳ್ಳದಿದ್ದರೂ ಲಸಿಕೆ ಪಡೆದಿರುವ ಸಂದೇಶ; ಆರೋಗ್ಯ ಇಲಾಖೆಯ ವಿರುದ್ಧ ಸಾರ್ವಜನಿಕರ ಅಸಮಾಧಾನ

ಲಸಿಕೆ ಪಡೆಯದಿದ್ದರೂ ಲಸಿಕೆ ಪಡೆದಿರುವಂತೆ ದೇವನಕಳ್ಳ ನಿವಾಸಿ ವೇಣುಗೋಪಾಲ್​ ಅವರಿಗೆ ಆರೋಗ್ಯ ಇಲಾಖೆಯಿಂದ ಸಂದೇಶ ಬಂದಿದೆ. ಲಸಿಕೆ ಸ್ಟಾಕ್ ಇಲ್ಲದೇ ಇದ್ದರೂ ಲಸಿಕೆ ಹಾಕಿದ್ದೇವೆ ಎಂದು ಸರ್ಕಾರಕ್ಕೆ ಲೆಕ್ಕ ಕೊಡಲು ಈ ರೀತಿ ಮಾಡಲಾಗುತ್ತಿದೆಯಾ? ಎಂದು ಇಲಾಖೆಯ ವಿರುದ್ಧ ಸಾರ್ವಜನಿಕರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಲಸಿಕೆ ಹಾಕಿಸಿಕೊಳ್ಳದಿದ್ದರೂ ಲಸಿಕೆ ಪಡೆದಿರುವ ಸಂದೇಶ; ಆರೋಗ್ಯ ಇಲಾಖೆಯ ವಿರುದ್ಧ ಸಾರ್ವಜನಿಕರ ಅಸಮಾಧಾನ
ಪ್ರಾತಿನಿಧಿಕ ಚಿತ್ರ
shruti hegde
|

Updated on: May 07, 2021 | 11:34 AM

Share

ದೇವನಹಳ್ಳಿ: ಲಸಿಕೆ ಹಾಕಿಸಿಕೊಳ್ಳದಿದ್ದರೂ, ಲಸಿಕೆ ಪಡೆದಿದ್ದೀರಿ ಎಂದು ಆರೋಗ್ಯ ಇಲಾಖೆ ಸಂದೇಶ ರವಾನೆ ಮಾಡಿದೆ ಎಂಬ ಆರೋಪ ಇದೀಗ ಕೇಳಿ ಬಂದಿದೆ. ಲಸಿಕೆ ಪಡೆಯಲು ಆನ್​ಲೈನ್​ ರಿಜಿಸ್ಟರ್​ ಮಾಡಿದ್ದರು. ಆ ದಿನ ಲಸಿಕೆ ಖಾಲಿ ಆಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿತ್ತು. ಹಾಗಾಗಿ ಮರುದಿನ ಲಸಿಕೆ ಪಡೆಯಬೇಕು ಅನ್ನುವಷ್ಟರಲ್ಲಿ, ವ್ಯಕ್ತಿಯ ಮೊಬೈಲ್​ಗೆ ಆರೋಗ್ಯ ಇಲಾಖೆಯಿಂದ ಸಂದೇಶವೊಂದು ಬಂದಿದೆ. ಲಸಿಕೆ ಮಡೆಯುವುದಕ್ಕೂ ಮುನ್ನವೇ ಲಸಿಕೆ ಪಡೆದಿರುವ ಸಂದೇಶ ನೋಡಿದ ವ್ಯಕ್ತಿ ವಂಚನೆ ಆರೋಪ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ನಿವಾಸಿ ವೇಣುಗೋಪಾಲ್ (44) ಎಂಬುವವರು ಲಸಿಕೆ ಪಡೆಯಲು ರಿಜಿಸ್ಟರ್ ಮಾಡಿಸಿಕೊಂಡಿದ್ದರು. ಹೀಗಾಗಿ ನಿನ್ನೆ ಬಿದಲೂರು ಆಸ್ಪತ್ರೆಯಲ್ಲಿ ಲಸಿಕೆ ತೆಗೆದುಕೊಳ್ಳಬೇಕಿತ್ತು. ಆಸ್ಪತ್ರೆ ಸಿಬ್ಬಂದಿಗೆ ಪೋನ್ ಮಾಡಿದಾಗ ಲಸಿಕೆ ಸ್ಟಾಕ್ ಇಲ್ಲ ಎನ್ನುವ ಮಾಹಿತಿ ತಿಳಿದು ಬಂದಿತ್ತು. ಹೀಗಾಗಿ ಇಂದು ಲಸಿಕೆ ತೆಗೆದುಕೊಳ್ಳೋಣ ಎಂದು ವೇಣುಗೋಪಾಲ್ ನಿರ್ಧರಿಸಿದ್ದರು. ಆದರೆ ನಿನ್ನೆ ಸಂಜೆಯೇ ನೀವು ಯಶಸ್ವಿಯಾಗಿ ಲಸಿಕೆ ಹಾಕಿಸಿಕೊಂಡಿದ್ದೀರಿ ಎಂದು ಆರೋಗ್ಯ ಇಲಾಖೆಯಿಂದ ಸಂದೇಶ ಬಂದಿದೆ.

ಈಗಾಗಲೇ ಮೇ ತಿಂಗಳಿನಿಂದ 18 ರಿಂದ 45 ವರ್ಷದವರೆಗೆ ಕೊರೊನಾ ಲಸಿಕೆ ಪ್ರಾರಂಭ ಮಾಡಲಾಗಿದೆ. ರಿಜಿಸ್ಟರ್ ಮಾಡಿಕೊಂಡಿದ್ದ ವ್ಯಕ್ತಿಗಳಿಗೆ ಲಸಿಕೆ ಪಡೆದುಕೊಳ್ಳದೇ ಇದ್ದರು ಲಸಿಕೆ ಪಡೆದುಕೊಂಡಿರೋ ಸಂದೇಶವನ್ನು ಆರೋಗ್ಯ ಇಲಾಖೆ ಕಳುಹಿಸುತ್ತಿದೆ. ಲಸಿಕೆ ಸ್ಟಾಕ್ ಇಲ್ಲದೇ ಇದ್ದರೂ ಲಸಿಕೆ ಹಾಕಿದ್ದೇವೆ ಎಂದು ಸರ್ಕಾರಕ್ಕೆ ಲೆಕ್ಕ ಕೊಡಲು ಈ ರೀತಿ ಮಾಡಲಾಗುತ್ತಿದೆಯಾ? ಎಂದು ಇಲಾಖೆಯ ವಿರುದ್ಧ ಸಾರ್ವಜನಿಕರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Explainer: ಲಸಿಕೆಗೆ ಬೇಡಿಕೆ ಹೆಚ್ಚು, ಪೂರೈಕೆಗೆ ಹಲವು ಸಮಸ್ಯೆ; ಉತ್ಪಾದನೆ ಹೆಚ್ಚಿಸಲು ಸರ್ಕಾರದ ಮುಂದಿರುವ ಆಯ್ಕೆಗಳೇನು?

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ