AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಹಾಕಿಸಿಕೊಳ್ಳದಿದ್ದರೂ ಲಸಿಕೆ ಪಡೆದಿರುವ ಸಂದೇಶ; ಆರೋಗ್ಯ ಇಲಾಖೆಯ ವಿರುದ್ಧ ಸಾರ್ವಜನಿಕರ ಅಸಮಾಧಾನ

ಲಸಿಕೆ ಪಡೆಯದಿದ್ದರೂ ಲಸಿಕೆ ಪಡೆದಿರುವಂತೆ ದೇವನಕಳ್ಳ ನಿವಾಸಿ ವೇಣುಗೋಪಾಲ್​ ಅವರಿಗೆ ಆರೋಗ್ಯ ಇಲಾಖೆಯಿಂದ ಸಂದೇಶ ಬಂದಿದೆ. ಲಸಿಕೆ ಸ್ಟಾಕ್ ಇಲ್ಲದೇ ಇದ್ದರೂ ಲಸಿಕೆ ಹಾಕಿದ್ದೇವೆ ಎಂದು ಸರ್ಕಾರಕ್ಕೆ ಲೆಕ್ಕ ಕೊಡಲು ಈ ರೀತಿ ಮಾಡಲಾಗುತ್ತಿದೆಯಾ? ಎಂದು ಇಲಾಖೆಯ ವಿರುದ್ಧ ಸಾರ್ವಜನಿಕರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಲಸಿಕೆ ಹಾಕಿಸಿಕೊಳ್ಳದಿದ್ದರೂ ಲಸಿಕೆ ಪಡೆದಿರುವ ಸಂದೇಶ; ಆರೋಗ್ಯ ಇಲಾಖೆಯ ವಿರುದ್ಧ ಸಾರ್ವಜನಿಕರ ಅಸಮಾಧಾನ
ಪ್ರಾತಿನಿಧಿಕ ಚಿತ್ರ
shruti hegde
|

Updated on: May 07, 2021 | 11:34 AM

Share

ದೇವನಹಳ್ಳಿ: ಲಸಿಕೆ ಹಾಕಿಸಿಕೊಳ್ಳದಿದ್ದರೂ, ಲಸಿಕೆ ಪಡೆದಿದ್ದೀರಿ ಎಂದು ಆರೋಗ್ಯ ಇಲಾಖೆ ಸಂದೇಶ ರವಾನೆ ಮಾಡಿದೆ ಎಂಬ ಆರೋಪ ಇದೀಗ ಕೇಳಿ ಬಂದಿದೆ. ಲಸಿಕೆ ಪಡೆಯಲು ಆನ್​ಲೈನ್​ ರಿಜಿಸ್ಟರ್​ ಮಾಡಿದ್ದರು. ಆ ದಿನ ಲಸಿಕೆ ಖಾಲಿ ಆಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿತ್ತು. ಹಾಗಾಗಿ ಮರುದಿನ ಲಸಿಕೆ ಪಡೆಯಬೇಕು ಅನ್ನುವಷ್ಟರಲ್ಲಿ, ವ್ಯಕ್ತಿಯ ಮೊಬೈಲ್​ಗೆ ಆರೋಗ್ಯ ಇಲಾಖೆಯಿಂದ ಸಂದೇಶವೊಂದು ಬಂದಿದೆ. ಲಸಿಕೆ ಮಡೆಯುವುದಕ್ಕೂ ಮುನ್ನವೇ ಲಸಿಕೆ ಪಡೆದಿರುವ ಸಂದೇಶ ನೋಡಿದ ವ್ಯಕ್ತಿ ವಂಚನೆ ಆರೋಪ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ನಿವಾಸಿ ವೇಣುಗೋಪಾಲ್ (44) ಎಂಬುವವರು ಲಸಿಕೆ ಪಡೆಯಲು ರಿಜಿಸ್ಟರ್ ಮಾಡಿಸಿಕೊಂಡಿದ್ದರು. ಹೀಗಾಗಿ ನಿನ್ನೆ ಬಿದಲೂರು ಆಸ್ಪತ್ರೆಯಲ್ಲಿ ಲಸಿಕೆ ತೆಗೆದುಕೊಳ್ಳಬೇಕಿತ್ತು. ಆಸ್ಪತ್ರೆ ಸಿಬ್ಬಂದಿಗೆ ಪೋನ್ ಮಾಡಿದಾಗ ಲಸಿಕೆ ಸ್ಟಾಕ್ ಇಲ್ಲ ಎನ್ನುವ ಮಾಹಿತಿ ತಿಳಿದು ಬಂದಿತ್ತು. ಹೀಗಾಗಿ ಇಂದು ಲಸಿಕೆ ತೆಗೆದುಕೊಳ್ಳೋಣ ಎಂದು ವೇಣುಗೋಪಾಲ್ ನಿರ್ಧರಿಸಿದ್ದರು. ಆದರೆ ನಿನ್ನೆ ಸಂಜೆಯೇ ನೀವು ಯಶಸ್ವಿಯಾಗಿ ಲಸಿಕೆ ಹಾಕಿಸಿಕೊಂಡಿದ್ದೀರಿ ಎಂದು ಆರೋಗ್ಯ ಇಲಾಖೆಯಿಂದ ಸಂದೇಶ ಬಂದಿದೆ.

ಈಗಾಗಲೇ ಮೇ ತಿಂಗಳಿನಿಂದ 18 ರಿಂದ 45 ವರ್ಷದವರೆಗೆ ಕೊರೊನಾ ಲಸಿಕೆ ಪ್ರಾರಂಭ ಮಾಡಲಾಗಿದೆ. ರಿಜಿಸ್ಟರ್ ಮಾಡಿಕೊಂಡಿದ್ದ ವ್ಯಕ್ತಿಗಳಿಗೆ ಲಸಿಕೆ ಪಡೆದುಕೊಳ್ಳದೇ ಇದ್ದರು ಲಸಿಕೆ ಪಡೆದುಕೊಂಡಿರೋ ಸಂದೇಶವನ್ನು ಆರೋಗ್ಯ ಇಲಾಖೆ ಕಳುಹಿಸುತ್ತಿದೆ. ಲಸಿಕೆ ಸ್ಟಾಕ್ ಇಲ್ಲದೇ ಇದ್ದರೂ ಲಸಿಕೆ ಹಾಕಿದ್ದೇವೆ ಎಂದು ಸರ್ಕಾರಕ್ಕೆ ಲೆಕ್ಕ ಕೊಡಲು ಈ ರೀತಿ ಮಾಡಲಾಗುತ್ತಿದೆಯಾ? ಎಂದು ಇಲಾಖೆಯ ವಿರುದ್ಧ ಸಾರ್ವಜನಿಕರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Explainer: ಲಸಿಕೆಗೆ ಬೇಡಿಕೆ ಹೆಚ್ಚು, ಪೂರೈಕೆಗೆ ಹಲವು ಸಮಸ್ಯೆ; ಉತ್ಪಾದನೆ ಹೆಚ್ಚಿಸಲು ಸರ್ಕಾರದ ಮುಂದಿರುವ ಆಯ್ಕೆಗಳೇನು?

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್