AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ‌, ಸತೀಶ್ ಜಾರಕಿಹೊಳಿಗೆ ನಿಂದನೆ ಮಾಡಿದ್ದ ವ್ಯಕ್ತಿ ಅರೆಸ್ಟ್: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಕೇಸ್

ಬೆಳಗಾವಿ ಮಾರುಕಟ್ಟೆ ಪೊಲೀಸ್ ಠಾಣೆಯ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅವಾಚ್ಯವಾಗಿ ನಿಂದಿಸಿದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಸತೀಶ್ ಜಾರಕಿಹೊಳಿ ಬೆಂಬಲಿಗರ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಸಿಎಂ‌, ಸತೀಶ್ ಜಾರಕಿಹೊಳಿಗೆ ನಿಂದನೆ ಮಾಡಿದ್ದ ವ್ಯಕ್ತಿ ಅರೆಸ್ಟ್: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಕೇಸ್
ಸಿಎಂ‌, ಸತೀಶ್ ಜಾರಕಿಹೊಳಿಗೆ ನಿಂದನೆ ಮಾಡಿದ್ದ ವ್ಯಕ್ತಿ ಅರೆಸ್ಟ್, ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಕೇಸ್
Follow us
Sahadev Mane
| Updated By: ಗಂಗಾಧರ​ ಬ. ಸಾಬೋಜಿ

Updated on:Dec 04, 2024 | 8:02 PM

ಬೆಳಗಾವಿ, ಡಿಸೆಂಬರ್​ 04: ಸಿಎಂ‌ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅವಾಚ್ಯವಾಗಿ ನಿಂದಿಸಿ ವಿಡಿಯೋ ಹರಿಬಿಟ್ಟಿದ್ದ ವ್ಯಕ್ತಿಯನ್ನು ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ (arrested). ತುಮಕೂರು ಮೂಲದ ಮೋಹಿತ್ ನರಸಿಂಹಮೂರ್ತಿ(38) ಬಂಧಿತ ವ್ಯಕ್ತಿ.

ಸತೀಶ್ ಜಾರಕಿಹೊಳಿ‌ ಬೆಂಬಲಿಗ ವಿಜಯ ತಳವಾರ್ ಎಂಬುವರಿಂದ ಕೇಸ್ ದಾಖಲಾಗಿತ್ತು. ತುಮಕೂರಿನಲ್ಲಿ ಆರೋಪಿಯನ್ನು ಬಂಧಿಸಿ ಬೆಳಗಾವಿಗೆ ಕರೆತಂದ ಪೊಲೀಸರು ಬೆಳಗಾವಿ ಕೋರ್ಟ್​ಗೆ ಹಾಜರು ಪಡಿಸಿದ್ದಾರೆ.

ಬಾಂಗ್ಲಾದ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ: ಹಿಂದೂ ಹಿತರಕ್ಷಣಾ ಸಮಿತಿ ಮೇಲೆ ಬಿತ್ತು ಕೇಸ್ 

ಬಾಂಗ್ಲಾದ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ಮಾಡಲಾಗಿದೆ. ಇದೀಗ ಪ್ರತಿಭಟನೆ ನಡೆಸಿದ ಹಿಂದೂ ಹಿತರಕ್ಷಣಾ ಸಮಿತಿ ಮೇಲೆ ಕೇಸ್ ಹಾಕಲಾಗಿದೆ. ರಸ್ತೆಗೆ ಇಳಿದಿದ್ದ ಹಿಂದೂ ಕಾರ್ಯಕರ್ತರು ವಾಹನ ಸಂಚಾರಕ್ಕೆ ಅಡ್ಡಿ ಮಾಡಿದ್ದರು. ರಸ್ತೆ ತಡೆ ಹಿಡಿದಿದ್ದರಿಂದ ಆಂಬುಲೆನ್ಸ್ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು.

ಇದನ್ನೂ ಓದಿ: ಚಿಕ್ಕಬಳ್ಳಾಪುರ ಸರ್ಕಾರಿ ಬಾಲಕಿಯರ ಮಂದಿರದಲ್ಲಿ ರಾಕ್ಷಸಿಯ ಕೃತ್ಯಗಳು ಬಯಲು

ಬ್ಯಾರಿಕೇಡ್ ದಾಟಿ ಬಂದು ಕಾರ್ಯಕರ್ತರು ರಸ್ತೆ ತಡೆದಿದ್ದರು. ಕರ್ತವ್ಯದಲ್ಲಿದ್ದ ಪೊಲೀಸರ ಜೊತೆಗೂ ಪುಂಡಾಟ ಮೆರೆದಿದ್ದರು. ಸದ್ಯ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರತಿಭಟನಾ ಆಯೋಜಕರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ತುಮಕೂರಿನಲ್ಲಿ ಸ್ವಾಮೀಜಿಗಳಿಂದ ಪ್ರತಿಭಟನೆ

ಇನ್ನು ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಾಳಿ ಖಂಡಿಸಿ ತುಮಕೂರಿನಲ್ಲಿ ಹಿಂದೂ ಸಂಘಟನೆ ಹಾಗೂ ಸ್ವಾಮೀಜಿಗಳು ಪ್ರತಿಭಟನೆ ಮಾಡಿದ್ದಾರೆ. ತುಮಕೂರಿನ ಟೌನ್ ಹಾಲ್ ಸರ್ಕಲ್​ನಿಂದ ಡಿಸಿ ಕಚೇರಿವರೆಗೂ ಮೆರವಣಿಗೆ ಮಾಡಲಾಗಿದೆ.

ಇದನ್ನೂ ಓದಿ: ರಾಜ್ಯದ ಮನವಿಗೆ ಸ್ಪಂದಿಸಿದ ಕೇಂದ್ರ: ಸವದತ್ತಿ ಯಲ್ಲಮ್ಮ ದೇಗುಲ ಅಭಿವೃದ್ಧಿಗೆ 100 ಕೋಟಿ ರೂ. ಮಂಜೂರು

ಮೆರವಣಿಗೆಯಲ್ಲಿ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮಿಜಿ, ಹಿರೇಮಠದ ಶಿವಾನಂದ ಸ್ವಾಮೀಜಿ, ವಿವೇಕಾನಂದ ಆಶ್ರಮದ ವೀರೇಶನಂದ ಶ್ರೀ ಸೇರಿದಂತೆ ಹಲವು ಮಠಾಧೀಶರು ಭಾಗಿಯಾಗಿದ್ದರು. ಡಿಸಿ ಕಚೇರಿ ಎದುರು ಪ್ರತಿಭಟನೆ ಮಾಡಿದ ಜಿಲ್ಲಾಧಿಕಾರಿಗೆ ಖಂಡನೀಯ ಪತ್ರ ಸಲ್ಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:58 pm, Wed, 4 December 24

ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!