AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಸಿಡ್ ನಾಗನ ಪತ್ತೆಗೆ ಸಹಕರಿಸಿದ್ದ ಭಿತ್ತಿ ಚಿತ್ರ: ಹೇಗಿತ್ತು ನಾಗನ ಎಸ್ಕೇಪ್ ಪ್ಲಾನ್?

ಯುವತಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ ನಾಗೇಶ್​ನನ್ನು ಬಂಧಿಸಲು ಪೊಲೀಸರಿಗೆ ಸಹಕರಿಸಿದ್ದೇ ಭಿತ್ತಿ ಚಿತ್ರ. ಈತ ಎಸ್ಕೇಪ್ ಆಗಲು ಹಾಗೂ ತನ್ನ ಸುಳಿವು ಸಿಗದಂತೆ ನೋಡಿಕೊಳ್ಳಲು ಎಲ್ಲಾ ಪ್ಲಾನ್​ಗಳನ್ನು ನಡೆಸಿ ತಮಿಳುನಾಡಿಗೆ ಎಸ್ಕೇಪ್ ಆಗಿದ್ದ.

ಆ್ಯಸಿಡ್ ನಾಗನ ಪತ್ತೆಗೆ ಸಹಕರಿಸಿದ್ದ ಭಿತ್ತಿ ಚಿತ್ರ: ಹೇಗಿತ್ತು ನಾಗನ ಎಸ್ಕೇಪ್ ಪ್ಲಾನ್?
ಆರೋಪಿ ನಾಗೇಶ್
TV9 Web
| Edited By: |

Updated on: May 14, 2022 | 4:17 PM

Share

ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ ಸಂಬಂಧ ಆರೋಪಿ ನಾಗೇಶ್​ನನ್ನು ಪೊಲೀಸರು ಕೊನೆಗೂ ತಮಿಳುನಾಡಿನಲ್ಲಿ (Tamilunadu) ಬಂಧಿಸಿದ್ದು, ಈತನ ಬಂಧನಕ್ಕೆ ಪೊಲೀಸರಿಗೆ ಸಹಕರಿಸಿದ್ದು ಭಿತ್ತಿ ಚಿತ್ರ. ಹೌದು, ಯುವತಿ ಮೇಲೆ ಕೃತ್ಯವೆಸಗಿದ ನಂತರ ನಾಗೇಶ್ ತಮಿಳುನಾಡಿಗೆ ಎಂಟ್ರಿ ಕೊಟ್ಟಿದ್ದಾನೆ. ಇದಕ್ಕೂ ಮೊದಲೇ ಕರ್ನಾಟಕದ ಪೊಲೀಸರು(Karnataka police) ಆರೋಪಿ ಬೇರೆ ರಾಜ್ಯಗಳಿಗೆ ತಲೆಮರೆಸಿಕೊಳ್ಳುವ ಸಾಧ್ಯತೆ ಹಿನ್ನೆಲೆ ತಮಿಳುನಾಡು ಸೇರಿದಂತೆ ಇನ್ನಿತರ ರಾಜ್ಯಗಳಿಗೆ ಮಾಹಿತಿ ರವಾನಿಸಿ ಗೋಡೆಗಳ ಮೇಲೆ ಭಿತ್ತಿ ಚಿತ್ರ (Poster Image) ಅಂಟಿಸುವಂತೆ ಸೂಚಿಸಿದ್ದಾರೆ. ಅದರಂತೆ ತಮಿಳುನಾಡಿನ ಪೊಲೀಸರು ತಮಿಳು ಭಾಷೆಯಲ್ಲೇ ಭಿತ್ತಿಚಿತ್ರಗಳನ್ನು ಗೋಡೆಗಳ ಮೇಲೆ ಅಂಟಿಸಿದ್ದಾರೆ. ಇತ್ತ ಭಿತ್ತಿಚಿತ್ರಗಳನ್ನು ಗಮನಿಸಿದ ಸ್ಥಳೀಯರು, ನಾಗೇಶ್(Nagesh) ತಿರುವಣ್ಣಮಲೈಗೆ ಎಂಟ್ರಿಕೊಡುತ್ತಲೇ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗೆ ಕರ್ನಾಟಕ ಪೊಲೀಸರು ಆರೋಪಿ ಇದ್ದ ಸ್ಥಳಕ್ಕೆ ದಾಳಿ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿತ್ತು.

ಹೇಗಿತ್ತು ಆ್ಯಸಿಡ್ ನಾಗನ ಎಸ್ಕೇಪ್ ಪ್ಲಾನ್?

ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ನಾಗೇಶ್, ಎಸ್ಕೇಪ್ ಆಗಲು ಎಲ್ಲಿಲ್ಲದ ಪ್ಲಾನ್ ನಡೆಸಿದ್ದ. .28ರ ಬೆಳಗ್ಗೆ ಆರೋಪಿ ಯುವತಿ ಮೇಲೆ ಆ್ಯಸಿಡ್ ಎರಚಿ ಸ್ಥಳದಿಂದ ಕಾಲ್ಕಿತ್ತಿದ್ದನು. ನಂತರ ಪೊಲೀಸರಿಗೆ ತನ್ನ ಸುಳಿವು ಸಿಗದಂತೆ ಮಾಡಲು ಟೆಕ್ನಿಕಲ್ ಎವಿಡೆನ್ಸ್ ಏನೂ ಸಿಗದಂತೆ ಮಾಡಿದ್ದಾನೆ. ಮೊಬೈಲ್ ಅನ್ನ ರಿಸ್ಟೋರ್ ಮಾಡಿದ್ದಲ್ಲದೆ, ಎರಡೆರಡು ಬಾರಿ ಮೊಬೈಲ್ ಫ್ಲ್ಯಾಶ್ ಮಾಡಿ ಹೊಸಪೇಟೆಯಲ್ಲಿ ಮೊಬೈಲ್ ಎಸೆದು ಪರಾರಿಯಾಗಿದ್ದನು.

ಆರೋಪಿಯ ಬಂಧನಕ್ಕೆ ತನಿಖೆಗೆ ಇಳಿದ ಪೊಲೀಸರಿಗೆ ಯಾವುದೇ ಟೆಕ್ನಿಕಲ್ ಎವಿಡೆನ್ಸ್ ಸಿಕ್ಕಿರಲಿಲ್ಲ. ಅಷ್ಟಕ್ಕೂ ಸುಮ್ಮನಾಗದ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಇಲ್ಲೂ ಪೊಲೀಸರಿಗೆ ಯಾವುದೇ ಸುಳಿವು ಸಿಗದೆ ನಿರಾಸೆಯಾಗಿದ್ದರು. ನಂತರ ಪೊಲೀಸರು ತನಿಖೆಗಾಗಿ ಬಳಸಿದ್ದೇ ವಾಂಟೆಡ್ ಭಿತ್ತಿ ಚಿತ್ರ. ಕರ್ನಾಟಕ, ಆಂಧ್ರ, ತಮಿಳುನಾಡು, ಕೇರಳ ಸೇರಿದಂತೆ ದಕ್ಷಿಣ ಭಾರತದಾದ್ಯಂತ ಭಿತ್ತಿಪತ್ರಗಳ ಹಂಚಿದ್ದ ಪೊಲೀಸರು ಆಯಾ ರಾಜ್ಯಗಳಲ್ಲಿ ಆಯಾ ಪ್ರಾದೇಶಿಕ ಭಾಷೆಗಳಲ್ಲಿಯೇ ಮಠ, ಮಂದಿರ, ಧಾರ್ಮಿಕ ಕೇಂದ್ರ ಸೇರಿದಂತೆ ಅನೇಕ ಕಡೆಗಳಲ್ಲಿ ಅಂಟಿಸಿದ್ದರು.

ತಮಿಳುನಾಡಿನ ಸಿಟಿಗಳಲ್ಲಿ ಭಾವಚಿತ್ರ ಸಹಿತ ಭಿತ್ತಿಚಿತ್ರಗಳನ್ನು ಹೆಚ್ಚು ಹೈಲೈಟ್ ಮಾಡಲಾಗಿದ್ದರಿಂದ ಸ್ಥಳೀಯರು ಮಾರುವೇಷದಲ್ಲಿರುವ ನಾಗೇಶ್​ನ ಸುಳಿವು ಪೊಲೀಸರಿಗೆ ನೀಡಿದ್ದಾರೆ. ಕೂಡಲೆ ಎಚ್ಚೆತ್ತ ಪೊಲೀಸರ ತಂಡ, ಭಕ್ತರ ವೇಷದಲ್ಲಿ ಆಶ್ರಮಕ್ಕೆ ಹೋಗಿ ಆ್ಯಸಿಡ್ ನಾಗನನ್ನ ಅರೆಸ್ಟ್ ಮಾಡಿದ್ದಾರೆ.

ಆ್ಯಸಿಡ್ ನಾಗ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್

ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ ಸಂಬಂಧ ಆರೋಪಿ ನಾಗೇಶ್​ನನ್ನು ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು. ಅದರಂತೆ ಆರೋಪಿಯ ಚಿಕಿತ್ಸೆಗಾಗಿ ಪೊಲೀಸರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ನಾಗೇಶ್​ನನ್ನು ಬಿಜಿಎಸ್ ಖಾಸಗಿ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ