AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಸಿಡ್ ನಾಗನ ಪತ್ತೆಗೆ ಸಹಕರಿಸಿದ್ದ ಭಿತ್ತಿ ಚಿತ್ರ: ಹೇಗಿತ್ತು ನಾಗನ ಎಸ್ಕೇಪ್ ಪ್ಲಾನ್?

ಯುವತಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ ನಾಗೇಶ್​ನನ್ನು ಬಂಧಿಸಲು ಪೊಲೀಸರಿಗೆ ಸಹಕರಿಸಿದ್ದೇ ಭಿತ್ತಿ ಚಿತ್ರ. ಈತ ಎಸ್ಕೇಪ್ ಆಗಲು ಹಾಗೂ ತನ್ನ ಸುಳಿವು ಸಿಗದಂತೆ ನೋಡಿಕೊಳ್ಳಲು ಎಲ್ಲಾ ಪ್ಲಾನ್​ಗಳನ್ನು ನಡೆಸಿ ತಮಿಳುನಾಡಿಗೆ ಎಸ್ಕೇಪ್ ಆಗಿದ್ದ.

ಆ್ಯಸಿಡ್ ನಾಗನ ಪತ್ತೆಗೆ ಸಹಕರಿಸಿದ್ದ ಭಿತ್ತಿ ಚಿತ್ರ: ಹೇಗಿತ್ತು ನಾಗನ ಎಸ್ಕೇಪ್ ಪ್ಲಾನ್?
ಆರೋಪಿ ನಾಗೇಶ್
TV9 Web
| Edited By: |

Updated on: May 14, 2022 | 4:17 PM

Share

ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ ಸಂಬಂಧ ಆರೋಪಿ ನಾಗೇಶ್​ನನ್ನು ಪೊಲೀಸರು ಕೊನೆಗೂ ತಮಿಳುನಾಡಿನಲ್ಲಿ (Tamilunadu) ಬಂಧಿಸಿದ್ದು, ಈತನ ಬಂಧನಕ್ಕೆ ಪೊಲೀಸರಿಗೆ ಸಹಕರಿಸಿದ್ದು ಭಿತ್ತಿ ಚಿತ್ರ. ಹೌದು, ಯುವತಿ ಮೇಲೆ ಕೃತ್ಯವೆಸಗಿದ ನಂತರ ನಾಗೇಶ್ ತಮಿಳುನಾಡಿಗೆ ಎಂಟ್ರಿ ಕೊಟ್ಟಿದ್ದಾನೆ. ಇದಕ್ಕೂ ಮೊದಲೇ ಕರ್ನಾಟಕದ ಪೊಲೀಸರು(Karnataka police) ಆರೋಪಿ ಬೇರೆ ರಾಜ್ಯಗಳಿಗೆ ತಲೆಮರೆಸಿಕೊಳ್ಳುವ ಸಾಧ್ಯತೆ ಹಿನ್ನೆಲೆ ತಮಿಳುನಾಡು ಸೇರಿದಂತೆ ಇನ್ನಿತರ ರಾಜ್ಯಗಳಿಗೆ ಮಾಹಿತಿ ರವಾನಿಸಿ ಗೋಡೆಗಳ ಮೇಲೆ ಭಿತ್ತಿ ಚಿತ್ರ (Poster Image) ಅಂಟಿಸುವಂತೆ ಸೂಚಿಸಿದ್ದಾರೆ. ಅದರಂತೆ ತಮಿಳುನಾಡಿನ ಪೊಲೀಸರು ತಮಿಳು ಭಾಷೆಯಲ್ಲೇ ಭಿತ್ತಿಚಿತ್ರಗಳನ್ನು ಗೋಡೆಗಳ ಮೇಲೆ ಅಂಟಿಸಿದ್ದಾರೆ. ಇತ್ತ ಭಿತ್ತಿಚಿತ್ರಗಳನ್ನು ಗಮನಿಸಿದ ಸ್ಥಳೀಯರು, ನಾಗೇಶ್(Nagesh) ತಿರುವಣ್ಣಮಲೈಗೆ ಎಂಟ್ರಿಕೊಡುತ್ತಲೇ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗೆ ಕರ್ನಾಟಕ ಪೊಲೀಸರು ಆರೋಪಿ ಇದ್ದ ಸ್ಥಳಕ್ಕೆ ದಾಳಿ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿತ್ತು.

ಹೇಗಿತ್ತು ಆ್ಯಸಿಡ್ ನಾಗನ ಎಸ್ಕೇಪ್ ಪ್ಲಾನ್?

ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ನಾಗೇಶ್, ಎಸ್ಕೇಪ್ ಆಗಲು ಎಲ್ಲಿಲ್ಲದ ಪ್ಲಾನ್ ನಡೆಸಿದ್ದ. .28ರ ಬೆಳಗ್ಗೆ ಆರೋಪಿ ಯುವತಿ ಮೇಲೆ ಆ್ಯಸಿಡ್ ಎರಚಿ ಸ್ಥಳದಿಂದ ಕಾಲ್ಕಿತ್ತಿದ್ದನು. ನಂತರ ಪೊಲೀಸರಿಗೆ ತನ್ನ ಸುಳಿವು ಸಿಗದಂತೆ ಮಾಡಲು ಟೆಕ್ನಿಕಲ್ ಎವಿಡೆನ್ಸ್ ಏನೂ ಸಿಗದಂತೆ ಮಾಡಿದ್ದಾನೆ. ಮೊಬೈಲ್ ಅನ್ನ ರಿಸ್ಟೋರ್ ಮಾಡಿದ್ದಲ್ಲದೆ, ಎರಡೆರಡು ಬಾರಿ ಮೊಬೈಲ್ ಫ್ಲ್ಯಾಶ್ ಮಾಡಿ ಹೊಸಪೇಟೆಯಲ್ಲಿ ಮೊಬೈಲ್ ಎಸೆದು ಪರಾರಿಯಾಗಿದ್ದನು.

ಆರೋಪಿಯ ಬಂಧನಕ್ಕೆ ತನಿಖೆಗೆ ಇಳಿದ ಪೊಲೀಸರಿಗೆ ಯಾವುದೇ ಟೆಕ್ನಿಕಲ್ ಎವಿಡೆನ್ಸ್ ಸಿಕ್ಕಿರಲಿಲ್ಲ. ಅಷ್ಟಕ್ಕೂ ಸುಮ್ಮನಾಗದ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಇಲ್ಲೂ ಪೊಲೀಸರಿಗೆ ಯಾವುದೇ ಸುಳಿವು ಸಿಗದೆ ನಿರಾಸೆಯಾಗಿದ್ದರು. ನಂತರ ಪೊಲೀಸರು ತನಿಖೆಗಾಗಿ ಬಳಸಿದ್ದೇ ವಾಂಟೆಡ್ ಭಿತ್ತಿ ಚಿತ್ರ. ಕರ್ನಾಟಕ, ಆಂಧ್ರ, ತಮಿಳುನಾಡು, ಕೇರಳ ಸೇರಿದಂತೆ ದಕ್ಷಿಣ ಭಾರತದಾದ್ಯಂತ ಭಿತ್ತಿಪತ್ರಗಳ ಹಂಚಿದ್ದ ಪೊಲೀಸರು ಆಯಾ ರಾಜ್ಯಗಳಲ್ಲಿ ಆಯಾ ಪ್ರಾದೇಶಿಕ ಭಾಷೆಗಳಲ್ಲಿಯೇ ಮಠ, ಮಂದಿರ, ಧಾರ್ಮಿಕ ಕೇಂದ್ರ ಸೇರಿದಂತೆ ಅನೇಕ ಕಡೆಗಳಲ್ಲಿ ಅಂಟಿಸಿದ್ದರು.

ತಮಿಳುನಾಡಿನ ಸಿಟಿಗಳಲ್ಲಿ ಭಾವಚಿತ್ರ ಸಹಿತ ಭಿತ್ತಿಚಿತ್ರಗಳನ್ನು ಹೆಚ್ಚು ಹೈಲೈಟ್ ಮಾಡಲಾಗಿದ್ದರಿಂದ ಸ್ಥಳೀಯರು ಮಾರುವೇಷದಲ್ಲಿರುವ ನಾಗೇಶ್​ನ ಸುಳಿವು ಪೊಲೀಸರಿಗೆ ನೀಡಿದ್ದಾರೆ. ಕೂಡಲೆ ಎಚ್ಚೆತ್ತ ಪೊಲೀಸರ ತಂಡ, ಭಕ್ತರ ವೇಷದಲ್ಲಿ ಆಶ್ರಮಕ್ಕೆ ಹೋಗಿ ಆ್ಯಸಿಡ್ ನಾಗನನ್ನ ಅರೆಸ್ಟ್ ಮಾಡಿದ್ದಾರೆ.

ಆ್ಯಸಿಡ್ ನಾಗ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್

ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ ಸಂಬಂಧ ಆರೋಪಿ ನಾಗೇಶ್​ನನ್ನು ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು. ಅದರಂತೆ ಆರೋಪಿಯ ಚಿಕಿತ್ಸೆಗಾಗಿ ಪೊಲೀಸರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ನಾಗೇಶ್​ನನ್ನು ಬಿಜಿಎಸ್ ಖಾಸಗಿ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!