AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nandini Milk Price: ನಂದಿನಿ ಹಾಲಿನ ದರ ಲೀಟರ್​ಗೆ 3 ರೂ. ಹೆಚ್ಚಳ: ಆಗಸ್ಟ್ 1ರಿಂದ ಜಾರಿ

ನಂದಿನಿ ಹಾಲಿನ ದರ ಪ್ರತಿ ಲೀಟರ್​ಗೆ 3 ರೂ. ಹೆಚ್ಚಳ ಮಾಡಿದ್ದು, ಆಗಸ್ಟ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ KMF ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

Nandini Milk Price: ನಂದಿನಿ ಹಾಲಿನ ದರ ಲೀಟರ್​ಗೆ 3 ರೂ. ಹೆಚ್ಚಳ: ಆಗಸ್ಟ್ 1ರಿಂದ ಜಾರಿ
ಪ್ರಾತಿನಿಧಿಕ ಚಿತ್ರ
Shivaraj
| Edited By: |

Updated on:Jul 21, 2023 | 9:42 PM

Share

ಬೆಂಗಳೂರು: ನಂದಿನಿ ಹಾಲಿನ ದರ ಪ್ರತಿ ಲೀಟರ್​ಗೆ 3 ರೂ. ಹೆಚ್ಚಳ ಮಾಡಿದ್ದು, ಆಗಸ್ಟ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ KMF ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತಿ ಲೀಟರ್​ಗೆ ಹಾಲಿಗೆ 5 ರೂ. ಹೆಚ್ಚಳಕ್ಕೆ KMF ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಅಂತಿಮವಾಗಿ 3 ರೂಪಾಯಿ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಸಮ್ಮತಿ ನೀಡಿದ್ದಾರೆ.

ನಂದಿನ ಹಾಲಿನ ದರ ಪರಿಷ್ಕರಣೆ ಸಂಬಂಧ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೆಎಂಎಫ್ ಆಡಳಿತ ಮಂಡಳಿ ಹಾಗೂ ಹಾಲು ಒಕ್ಕೂಟಗಳ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗಿದೆ. ಪಶುಸಂಗೋಪನ ಇಲಾಖೆ ಸಚಿವ ಕೆ.ವೆಂಕಟೇಶ್, ಕೆಎಂಎಫ್​ ಅಧ್ಯಕ್ಷ ಭೀಮಾ ನಾಯ್ಕ್, ಆಡಳಿತ ಮಂಡಳಿ ಸದಸ್ಯರು ಮತ್ತು ಕೆಎಂಎಫ್ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: Nandini Milk: ನಮ್ಮ ಹೆಮ್ಮೆಯ ನಂದಿನಿ ಹಾಲು -ಸರಿಯಾದ ಬಣ್ಣದ ಪ್ಯಾಕೆಟ್ ಆರಿಸಿಕೊಳ್ಳುವುದರ ಹಿಂದಿದೆ ಜಾಣತನ! ಎಲ್ಲದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲ

ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್‌ ಪ್ರತಿಕ್ರಿಯಿಸಿದ್ದು, ನಂದಿನಿ ಹಾಲಿನ ದರ 3 ರೂಪಾಯಿ ಹೆಚ್ಚಳ ಮಾಡಲು ಸಿಎಂ ಸಿದ್ದರಾಮಯ್ಯ ಒಪ್ಪಿದ್ದಾರೆ. ಆಗಸ್ಟ್‌ 1ರಿಂದ ಜಾರಿಗೆ ಬರಲಿದೆ. ಈ ಬಗ್ಗೆ ಕ್ಯಾಬಿನೆಟ್​​ನಲ್ಲಿಟ್ಟು ಒಪ್ಪಿಗೆ ಪಡೆದು ನಿರ್ಧಾರ ಪ್ರಕಟವಾಗಲಿದೆ. ನಾವು 5 ರೂ ಗೆ ಬೇಡಿಕೆ ಇಟ್ಟಿದ್ದೆವು. ಹಾಲಿನ ಉಪ ಉತ್ಪನ್ನಗಳ ದರ ನಂತರ ತೀರ್ಮಾನ ಆಗಲಿದೆ. ಹಾಲಿನ ಪುಡಿ ದರ ಏರಿಕೆಗೂ ಪ್ರಸ್ತಾವನೆ ಇಡಲಾಗಿದೆ ಎಂದು ಹೇಳಿದರು.

KMF ನಿರ್ದೇಶಕ ಹೆಚ್.ಡಿ.ರೇವಣ್ಣ ಮಾತನಾಡಿ, ನಂದಿನಿ ಹಾಲಿನ ದರ ಪ್ರತಿ ಲೀಟರ್​ಗೆ 3 ರೂಪಾಯಿ ಹೆಚ್ಚಳ ಮಾಡಲು ಸಿಎಂ ಸಿದ್ದರಾಮಯ್ಯ ಒಪ್ಪಿದ್ದಾರೆ. ಪ್ರತಿ ಲೀಟರ್​ಗೆ 5 ರೂ. ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿದ್ದೆವು. ಆದರೆ ಅಂತಿಮವಾಗಿ 3 ರೂ. ಹೆಚ್ಚಳಕ್ಕೆ ಸಭೆಯಲ್ಲಿ ಸಿಎಂ ಸಮ್ಮತಿಸಿದ್ದಾರೆ. ಹೆಚ್ಚಳವಾದ 3 ರೂ. ಹಾಲು ಉತ್ಪಾದಕರಿಗೆ ಹೋಗಬೇಕು ಅಂದಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ; ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಸುಳಿವು

ಸಿಎಂ ಜೊತೆ ಸಭೆ ಬಳಿಕ ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿಕೆ ಹೇಳಿಕೆ ನೀಡಿದ್ದು, ಹಾಲು ಉತ್ಪಾದಕರ ಹಿತ ಕಾಯಲು ದರ ಏರಿಕೆ ಅನಿವಾರ್ಯ. ನಮ್ಮ ರಾಜ್ಯ ಅತಿ ಕಡಿಮೆ ದರದಲ್ಲಿ ಹಾಲು ಮಾರಾಟ ಮಾಡುತ್ತಿದ್ದೇವೆ. ಹಾಲು ಉತ್ಪಾದನಾ ದರ ಹೆಚ್ಚಾಗಿರುವುದರಿಂದ ರೈತರಿಗೆ ಹೊರೆ ಆಗುತ್ತಿದೆ. ದರ ಏರಿಕೆ ಅನಿವಾರ್ಯತೆ ಬಗ್ಗೆ ಸಭೆಯಲ್ಲಿ ಸಿಎಂಗೆ ಮನವರಿಕೆ ಮಾಡಿದೆವು. ಹೀಗಾಗಿ ನಂದಿನ ಹಾಲಿನ ದರ ಏರಿಕೆಗೆ ಸಿಎಂ ಸಿದ್ಧರಾಮಯ್ಯ ಒಪ್ಪಿಗೆ ನೀಡಿದ್ದಾರೆ ಎಂದರು.

ಕ್ಷೀರ ಭಾಗ್ಯ ಲಾಂಚ್ ಆಗಿ 10 ವರ್ಷ ಆದ ಹಿನ್ನಲೆ ದಶಮಾನೋತ್ಸವ ಆಚರಿಸಲು ತೀರ್ಮಾನಿಸಲಾಗಿದೆ.  ಮುಂದಿನ ಮಂತ್ರಿಮಂಡಲದಲ್ಲಿ ತೀರ್ಮಾನ ಕೈಗೊಳ್ಳೋದಾಗಿ ಹೇಳಿದ್ದಾರೆ. ನಾವು 39 ರೂ. ಪ್ರತೀ ಲೀಟರ್​ ಹಾಲು ಮಾರಾಟ ಮಾಡುತ್ತಿದ್ದೇವೆ. ಬೇರೆ ರಾಜ್ಯದಲ್ಲಿ ಹಾಲಿನ ದರ ಏರಿಕೆ ಆಗಿದೆ. ಹೀಗಾಗಿ ಉತ್ಪಾದಕರ ಹಿತ ಕಾಯಲು ದರ ಏರಿಕೆ ಅನಿವಾರ್ಯ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:01 pm, Fri, 21 July 23

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?