AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಮಳೆಯಿಂದಾದ ಅವಾಂತರಗಳೇನು? ಇಲ್ಲಿದೆ ರಿಪೋರ್ಟ್

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಮಳೆಯಿಂದಾದ ಅವಾಂತರಗಳ ಬಗ್ಗೆ ಮಾಹಿತಿ ನೀಡಿದ್ದಾರೆ. 2025 ಜನವರಿಯೊಳಗೆ ರಾಜಕಾಲುವೆ ಮುಗಿಸಲು ಯೋಜಿಸಲಾಗಿದ್ದು, ಬೆಂಗಳೂರಲ್ಲಿ ಮೊದಲನೇ ಮಳೆಯಲ್ಲಿ ಸೊಳ್ಳೆಗಳ ಪ್ರಮಾಣ ಹೆಚ್ಚಾಗಲಿದ್ದು ಡೆಂಘೀ ಕೇಸ್ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಮಳೆಯಿಂದಾದ ಅವಾಂತರಗಳೇನು? ಇಲ್ಲಿದೆ ರಿಪೋರ್ಟ್
ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಮಳೆಯಿಂದಾದ ಅವಾಂತರಗಳೇನು? ಇಲ್ಲಿದೆ ರಿಪೋರ್ಟ್
ಗಂಗಾಧರ​ ಬ. ಸಾಬೋಜಿ
|

Updated on: May 13, 2024 | 4:31 PM

Share

ಬೆಂಗಳೂರು, ಮೇ 13: ಕಳೆದೊಂದು ವಾರದಿಂದ ಸೀಮಿತ ಸ್ಥಳಗಳಲ್ಲಿ ಮಳೆ (Rain) ಆಗುತ್ತಿದೆ. ಬೆಂಗಳೂರಿನ ಎಲ್ಲಾ ಕಡೆ ಮಳೆ ಬರುತ್ತಿಲ್ಲ. ನಾಲ್ಕೈದು ದಿನದಿಂದ ಒಟ್ಟು 196 ಕಡೆ ಪ್ರವಾಹ ಸ್ಥಿತಿ ಆಗಿದೆ. 10 ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಆದರೆ ಸ್ವಲ್ಪ ಸಮಯದ ನಂತರ ನೀರು ಹೋಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar GiriNath) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 171 ದೊಡ್ಡ ಮರಗಳು, 690 ಕೊಂಬೆಗಳು ಬಿದ್ದಿವೆ. 50 ಬಿಟ್ಟು ಉಳಿದ ಕಡೆ ಎಲ್ಲಾ ತೆರವು ಮಾಡಲಾಗಿದೆ ಎಂದು ಹೇಳಿದ್ದಾರೆ.

ದೊಡ್ಡ ಮರಗಳನ್ನ ಇವತ್ತು ಕಟ್ ಮಾಡಲಾಗುತ್ತಿದೆ. ಮೂರು ದಿನದಿಂದ 39 ತಂಡಗಳು ಕೆಲಸ ಮಾಡುತ್ತಿವೆ,. 63 ಕಡೆ ಎಇಇ, ಬಿಬಿಎಂಪಿಯ ನೇತೃತ್ವದಲ್ಲಿ ವಾಟ್ಸಪ್ ಗ್ರೂಪ್ ಮೂಲಕ ಮಾಹಿತಿ ಹೋಗುತ್ತಿದೆ. ಬೇರೆ ಬೇರೆ ಇಲಾಖೆಗಳ ಜೊತೆಗೂ ಸಂವಹನ ಆಗುತ್ತಿದೆ. ವಲಯಮಟ್ಟದಲ್ಲೂ ಕೂಡ ಸಭೆಗಳನ್ನ ನಡೆಸಲಾಗುತ್ತಿದೆ. ಸಮಸ್ಯೆ ಆಗುವ 74 ಕಡೆ ಶಾಶ್ವತ ಪರಿಹಾರ ಆಗಿಲ್ಲ. ತಾತ್ಕಾಲಿಕ ಪರಿಹಾರ ಮಾತ್ರ ಮಾಡಿದ್ದೇವೆ ಎಂದರು.

ಇದನ್ನೂ ಓದಿ: Bengaluru Rain Today: ಬೆಂಗಳೂರಿನಲ್ಲಿ ತಡರಾತ್ರಿ ಭಾರಿ ಮಳೆ; ಇನ್ನೂ 4 ದಿನ ಮಳೆಯ ಮುನ್ಸೂಚನೆ

ಪಂಪ್, ಜೆಸಿಬಿ ಇಟ್ಟು ಕೆಲಸ ಮಾಡುತ್ತಿದೆ. ವಿಶ್ವಬ್ಯಾಂಕ್ ಲೋನ್​​ನಲ್ಲೂ ಕೂಡ ಆ ಕೆಲಸಗಳನ್ನ ಸೇರಿಸಲಾಗಿದೆ. ಎಲ್ಲಿಲ್ಲಿ ಸಮಸ್ಯೆಯಿದೆ ನಮ್ಮ ಅಧಿಕಾರಿಗಳು ಚೆಕ್ ಮಾಡಿ ರಿಪೋರ್ಟ್ ಕೊಟ್ಟಿದ್ದಾರೆ.

30 ಲಕ್ಷ ರೂ. ಮೀಸಲು

ಮಳೆಗೆ ಬೇಕಾದ ಎಲ್ಲಾ ರೀತಿಯ ಸಿದ್ಧತೆಗಳು ಆಗಿವೆ. ಮಳೆ ಸಂಬಂಧ 30 ಲಕ್ಷ ರೂ. ಮೀಸಲು ಇಟ್ಟಿದ್ದೇವೆ. ಬ್ರ್ಯಾಂಡ್‌ ಬೆಂಗಳೂರಿನಡಿ ಕೂಡ 10 ಕೋಟಿ ರೂ. ಹಣ ಮೀಸಲಿಟ್ಟಿದ್ದೇವೆ. ಮಳೆಗಾಲದ ಸಿದ್ಧತೆಗಳಿಗೆ ಪ್ಲಾನ್ ಆಧರಿಸಿ ಫಂಡ್ ಇಟ್ಟಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಳೆಗಾಲದ ವೇಳೆ ಧರೆಗುರುಳುವ ಮರದ ರೆಂಬೆ, ಕೊಂಬೆಗಳನ್ನು ತೆರವುಗೊಳಿಸಲು 39 ತಂಡಳನ್ನು ನಿಯೋಜಿಸಿದ ಬಿಬಿಎಂಪಿ

2023 ರಿಂದಲೇ ರಾಜಕಾಲುವೆ ಕೆಲಸ ಶುರು ಮಾಡಿದ್ದೇವೆ. 2025 ಜನವರಿಯೊಳಗೆ ಮುಗಿಸಲು ಪ್ಲಾನ್ ಆಗಿದೆ. ಬೇರೆ ಬೇರೆ ಇಲಾಖೆಗಳ ಕಾಮಗಾರಿಗಳು ಕೂಡ ನಡೆಯುತ್ತಿದೆ. ಮೇ 15 ರವರೆಗೆ ಡೆಡ್ ಲೈನ್ ಕೊಟ್ಟಿದ್ದೇವೆ. ಈಗ ಮೇ 20ರೊಳಗೆ ಅವರ ಕೆಲಸಗಳನ್ನ ಮುಗಿಸಬೇಕು ಎಂದಿದ್ದಾರೆ.

ಡೆಂಘೀ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ

ಬೆಂಗಳೂರಲ್ಲಿ ಡೆಂಘೀ ಕೇಸ್ ಹೆಚ್ಚಳ ವಿಚಾರವಾಗಿ ಮಾತನಾಡಿದ ಅವರು, ಮೊದಲನೇ ಮಳೆಯಲ್ಲಿ ಸೊಳ್ಳೆಗಳ ಪ್ರಮಾಣ ಹೆಚ್ಚಾಗುತ್ತೆ. ಹೀಗಾಗಿ ಡೆಂಘೀ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದೆ. ಸದ್ಯ ನಾವು ಈಗಾಗಲೇ ಲಾರ್ವ ಕಂಟ್ರೋಲ್​​ಗೆ ಕ್ರಮ ಕೈಗೊಂಡಿದ್ದೇವೆ. ನೀರು ನಿಲ್ಲುವ ಪ್ರದೇಶಗಳಲ್ಲಿ ನಿಗಾ ಇಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!