AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿ ಮತ್ತು ನನ್ನ ನಡುವಿನ ಸಂಬಂಧ ವಿಭಿನ್ನವಾದದ್ದು: HD ಕುಮಾರಸ್ವಾಮಿ

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಬಿಜೆಪಿ ಸೇರುವಂತೆ ತಮಗೆ ಕರೆಯನ್ನಿತ್ತ ಮಾಜಿ ಸಚಿವ ಹಾಗೂ ಬಿಎಸ್ವೈ ಸಂಪುಟ ಸೇರಲು ಹಾತೊರೆಯುತ್ತಿರುವ ಸಿಪಿ ಯೋಗೇಶ್ವರ್ ವಿರುದ್ಧ ಸರಣಿ ಟ್ವೀಟ್ಗಳ ಮೂಲಕ ಹರಿಹಾಯ್ದಿದ್ದಾರೆ. ತಾನ್ಯಾವತ್ತೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ ಎಂದಿರುವ ಹೆಚ್ಡಿಕೆ, ತಮ್ಮ ಮತ್ತು ಶಿವಕುಮಾರ್ ನಡುವಿನ ಸಂಬಂಧ ವಿಭಿನ್ನವಾದ್ದು ಎಂದಿದ್ದಾರೆ. “ನಾನು ಅಡ್ಜಸ್ಟ್ಮೆಂಟ್ ರಾಜಕಾರಣವನ್ನು ಹಿಂದೆಯೂ ಮಾಡಿಲ್ಲ. ಮುಂದೆಯೂ ಮಾಡಲ್ಲ. ಡಿ.ಕೆ. ಶಿವಕುಮಾರ್ ಮತ್ತು ನನ್ನ ನಡುವಣ ರಾಜಕಾರಣವೇ ಬೇರೆ. ವೈಯಕ್ತಿಕ ವಿಶ್ವಾಸವೇ ಬೇರೆ. ಹಿಂಬಾಗಿಲ ರಾಜಕಾರಣದ […]

ಡಿಕೆಶಿ ಮತ್ತು ನನ್ನ ನಡುವಿನ ಸಂಬಂಧ ವಿಭಿನ್ನವಾದದ್ದು: HD ಕುಮಾರಸ್ವಾಮಿ
ಸಾಧು ಶ್ರೀನಾಥ್​
|

Updated on:Jul 31, 2020 | 4:11 PM

Share

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಬಿಜೆಪಿ ಸೇರುವಂತೆ ತಮಗೆ ಕರೆಯನ್ನಿತ್ತ ಮಾಜಿ ಸಚಿವ ಹಾಗೂ ಬಿಎಸ್ವೈ ಸಂಪುಟ ಸೇರಲು ಹಾತೊರೆಯುತ್ತಿರುವ ಸಿಪಿ ಯೋಗೇಶ್ವರ್ ವಿರುದ್ಧ ಸರಣಿ ಟ್ವೀಟ್ಗಳ ಮೂಲಕ ಹರಿಹಾಯ್ದಿದ್ದಾರೆ. ತಾನ್ಯಾವತ್ತೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ ಎಂದಿರುವ ಹೆಚ್ಡಿಕೆ, ತಮ್ಮ ಮತ್ತು ಶಿವಕುಮಾರ್ ನಡುವಿನ ಸಂಬಂಧ ವಿಭಿನ್ನವಾದ್ದು ಎಂದಿದ್ದಾರೆ.

“ನಾನು ಅಡ್ಜಸ್ಟ್ಮೆಂಟ್ ರಾಜಕಾರಣವನ್ನು ಹಿಂದೆಯೂ ಮಾಡಿಲ್ಲ. ಮುಂದೆಯೂ ಮಾಡಲ್ಲ. ಡಿ.ಕೆ. ಶಿವಕುಮಾರ್ ಮತ್ತು ನನ್ನ ನಡುವಣ ರಾಜಕಾರಣವೇ ಬೇರೆ. ವೈಯಕ್ತಿಕ ವಿಶ್ವಾಸವೇ ಬೇರೆ. ಹಿಂಬಾಗಿಲ ರಾಜಕಾರಣದ ಮೂಲಕ ನೆಲೆ ಕಂಡುಕೊಂಡವರಿಂದ ಯಾವುದೇ ಡ್ಯಾಮೇಜ್ ಮಾಡಲು ಸಾಧ್ಯವಿಲ್ಲ,” -ಹೆಚ್ ಡಿ ಕುಮಾರಸ್ವಾಮಿ

ತನ್ನ ಮತ್ತು ಶಿವಕುಮಾರ್ ನಡುವೆ ಹುಳಿ ಹಿಂಡುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ, ಆದರೆ ಅಂಥವರ ಪ್ರಯತ್ನ ಯಶಕಾಣದು ಎಂದು ಹೆಚ್ಡಿಕೆ ಹೇಳುತ್ತಾರೆ.

“ಶಿವಕುಮಾರ್ ಮತ್ತು ನಮ್ಮ ನಡುವಣ ಹಿಂದಿನ ಹಾಗೂ ಇಂದಿನ ರಾಜಕಾರಣ ಬೇರೆ. ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ಎಲ್ಲರೂ ಒಂದು ಗುರಿ ಇಟ್ಟು ಕೊಂಡೇ ದುಡಿಮೆ ಮಾಡುತ್ತಾರೆ. ಈ ಮಧ್ಯೆ ಹುಳಿ ಹಿಂಡುವವರ ನಾಟಕ ಫಲಿಸದು” -ಹೆಚ್ ಡಿ ಕುಮಾರಸ್ವಾಮಿ

ಯೋಗೇಶ್ವರ್ ಅವರ ಹೆಸರು ಉಲ್ಲೇಖಿಸದೆ, ಅವರು ಕುತಂತ್ರ ರಾಜಕಾರಣ ಮಾಡುತ್ತಿದ್ದಾರೆ, ಆದರೆ ಅವರ ಮಸಲತ್ತುಗಳಿಗೆ ಜನ ಮರುಳಾಗರು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ತನ್ನ ಬೇಳೆ ಬೇಯಿಸಿಕೊಳ್ಳಲು ಮಸಾಲೆ ಅರೆಯುತ್ತಿರುವ ವ್ಯಕ್ತಿಯ ಕುತಂತ್ರ ರಾಜಕಾರಣಕ್ಕೆ ರಾಮನಗರ ಜಿಲ್ಲೆಯ ಜನತೆ ಸೊಪ್ಪು ಹಾಕುವುದಿಲ್ಲ” -ಹೆಚ್ ಡಿ ಕುಮಾರಸ್ವಾಮಿ

ಕೊರೊನಾ ಸೃಷ್ಟಿಸಿರುವ ಭಯಾನಕ ಸ್ಥಿತಿಯ ಹಿನ್ನೆಲೆಯಲ್ಲಿ ಸರ್ಕಾರದ ಪರ ಮಾತಾಡಿರುವುದನ್ನೇ ತಾನು ಬಿಜೆಪಿ ಕಡೆ ವಾಲಿದ್ದ್ದೇನೆನ್ನುವುದು ಕೀಳು ಅಭಿರುಚಿಯ ಪ್ರತೀಕ ಅಂತ ಕುಮಾರಸ್ವಾಮಿ ಹೇಳಿದ್ದಾರೆ.

“ನೆರೆಹಾವಳಿ, ಕೊರೋನಾ ಸಂಕಷ್ಟ ಸಮಯದಲ್ಲಿ ರಾಜಕಾರಣ ಬಿಟ್ಟು ರಾಜ್ಯದ ಜನತೆಯ ಹಿತಕಾಯುವ ದೃಷ್ಟಿಯಿಂದ ಸರ್ಕಾರಕ್ಕೆ ಬೆಂಬಲ ಇದೆ ಎಂದಾಕ್ಷಣ ಅದನ್ನು ತಮ್ಮ ಮೂಗಿನ ನೇರಕ್ಕೆ ವ್ಯಾಖ್ಯಾನಿಸುವ ಕೀಳು ಅಭಿರುಚಿಯ ಹೇಳಿಕೆ ನೀಡುವುದು ಯಾರಿಗೂ ಶೋಭೆ ತರುವುದಿಲ್ಲ” -ಹೆಚ್ ಡಿ ಕುಮಾರಸ್ವಾಮಿ

ಅಂತಿಮವಾಗಿ, ಮಾಜಿ ಮುಖ್ಯಮಂತ್ರಿಗಳು ಶರಣರ ವಚನಗಳೊಂದಿಗೆ ಅತ್ಯಂತ ಮಾರ್ಮಿಕವಾಗಿ ತಮ್ಮ ಟ್ವೀಟ್ ಸರಣಿಯನ್ನು ಮುಗಿಸುತ್ತಾರೆ.

“ತನಗೆ ಮುನಿದವರಿಗೆ ತಾ ಮುನಿಯಲೇಕಯ್ಯಾ? ತನಗಾದ ಆಗೇನು? ಅವರಿಗಾದ ಚೇಗೆಯೇನು? ತನುವಿನ ಕೋಪ ತನ್ನ ಹಿರಿಯತನದ ಕೇಡು. ಮನದ ಕೋಪ ತನ್ನ ಅರಿವಿನ ಕೇಡು. ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ ನೆರೆಮನೆಯಸುಡದು, ಕೂಡಲಸಂಗಮದೇವಾ” -ಹೆಚ್ ಡಿ ಕುಮಾರಸ್ವಾಮಿ

ಕುಮಾರಸ್ವಾಮಿಯವರ ಆಕ್ರಮಣಕ್ಕೆ ಯೋಗೇಶ್ವರ್ ಹೇಗೆ ಪ್ರತಿಕ್ರಿಯಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕು.

Published On - 1:52 pm, Fri, 31 July 20

ಕಲಶಕ್ಕೆ ಐದು ಎಲೆ ಇಡುವುದರ ಹಿಂದಿನ ರಹಸ್ಯ ಹಾಗೂ ವಿಶೇಷ ತಿಳಿಯಿರಿ
ಕಲಶಕ್ಕೆ ಐದು ಎಲೆ ಇಡುವುದರ ಹಿಂದಿನ ರಹಸ್ಯ ಹಾಗೂ ವಿಶೇಷ ತಿಳಿಯಿರಿ
ಮೂಲಾ ನಕ್ಷತ್ರದಲ್ಲಿ ಚಂದ್ರ ಸಂಚಾರ: ಯಾವ ರಾಶಿಗೆ ಏನು ಕಾದಿದೆ ತಿಳಿಯಿರಿ
ಮೂಲಾ ನಕ್ಷತ್ರದಲ್ಲಿ ಚಂದ್ರ ಸಂಚಾರ: ಯಾವ ರಾಶಿಗೆ ಏನು ಕಾದಿದೆ ತಿಳಿಯಿರಿ
ನಿಜವಾದ ಟಾಮ್ ಆ್ಯಂಡ್ ಜೆರಿ; ಒಟ್ಟಿಗೇ ಊಟ ಮಾಡುವ ಬೆಕ್ಕು-ಇಲಿ ವಿಡಿಯೋ ವೈರಲ್
ನಿಜವಾದ ಟಾಮ್ ಆ್ಯಂಡ್ ಜೆರಿ; ಒಟ್ಟಿಗೇ ಊಟ ಮಾಡುವ ಬೆಕ್ಕು-ಇಲಿ ವಿಡಿಯೋ ವೈರಲ್
ಕೆಳಗಿಂದ ಮೇಲೆ ಹರಿವ ನೀರಿನಲ್ಲಿ ದೋಣಿ ಬಿಟ್ಟ ಸಚಿವ ಶಿವರಾಜ್ ಸಿಂಗ್ ಚೌಹಾಣ್
ಕೆಳಗಿಂದ ಮೇಲೆ ಹರಿವ ನೀರಿನಲ್ಲಿ ದೋಣಿ ಬಿಟ್ಟ ಸಚಿವ ಶಿವರಾಜ್ ಸಿಂಗ್ ಚೌಹಾಣ್
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ