Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ, ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಒತ್ತು: ಸ್ಪೀಕರ್

Belagavi winter session: ಬೆಳಗಾವಿಯ ಸುವರ್ಣಸೌಧದಲ್ಲಿ ಸ್ಪೀಕರ್​​ ಯು.ಟಿ.ಖಾದರ್ ಮಾತನಾಡಿ, ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಸಚಿವ ಸಂಪುಟದಲ್ಲಿ ಚರ್ಚಿಸಿ ಅಧಿವೇಶನದ ದಿನಾಂಕ ನಿಗದಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ, ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಒತ್ತು: ಸ್ಪೀಕರ್
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ, ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಒತ್ತು: ಸ್ಪೀಕರ್
Follow us
Sahadev Mane
| Updated By: ಗಂಗಾಧರ​ ಬ. ಸಾಬೋಜಿ

Updated on: Oct 18, 2024 | 3:05 PM

ಬೆಳಗಾವಿ, ಅಕ್ಟೋಬರ್​ 18: ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ (winter session) ನಡೆಯಲಿದೆ. ಸಚಿವ ಸಂಪುಟದಲ್ಲಿ ಚರ್ಚಿಸಿ ಅಧಿವೇಶನದ ದಿನಾಂಕ ನಿಗದಿ ಮಾಡುತ್ತೇವೆ ಎಂದು ಸ್ಪೀಕರ್​​ ಯು.ಟಿ.ಖಾದರ್ ಹೇಳಿದ್ದಾರೆ. ನಗರದ ಸುವರ್ಣಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷ ಇನ್ನಷ್ಟು ಚೆನ್ನಾಗಿ ಅಧಿವೇಶನ ಮಾಡಲು ಸಿದ್ಧತೆ ನಡೆದಿದೆ. ಉತ್ತರಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಹೆಚ್ಚಿನ ಒತ್ತು ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಎಲ್ಲರೂ ಸುವರ್ಣ ವಿಧಾನಸೌಧಕ್ಕೆ ಬರಬೇಕು ಎಂದ ಸ್ಪೀಕರ್​​ ಯು.ಟಿ.ಖಾದರ್

ಜನಪ್ರತಿನಿಧಿಗಳಿಗೆ ಮಾತ್ರ ವಿಧಾನಸೌಧ ಅಲ್ಲಾ. ಈ ಭಾಗದ ಜನರಿಗೂ ನಮ್ಮ ವಿಧಾನಸೌಧ ಅನ್ನೋ ಭಾವನೆ ಮೂಡಬೇಕು. ಹೀಗಾಗಿ ಸುವರ್ಣ ವಿಧಾನಸೌಧಕ್ಕೆ ಎಲ್ಲರೂ ಬರಬೇಕು. ಸುಲಭದಲ್ಲಿ ಪಾಸ್ ಸಿಗುವ ವ್ಯವಸ್ಥೆ ಮಾಡುತ್ತೇವೆ. ಶಾಲಾ, ಕಾಲೇಜು ವಿದ್ಯಾರ್ಥಿಗಳನ್ನೂ ಕರೆದುಕೊಂಡು ಬರವ ವ್ಯವಸ್ಥೆ ಕೂಡ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರದಿಂದ ಯಾವುದೇ ರೈತಪರ ಯೋಜನೆ ಇಲ್ಲ: ಸ್ವಪಕ್ಷದ ವಿರುದ್ಧವೇ ಶಾಸಕ ರಾಜು ಕಾಗೆ ವಾಗ್ದಾಳಿ!

ಬೆಳಗಾವಿ ಕಾಂಗ್ರೆಸ್ ಅಧಿವೇಶನದ ನೂರನೇ ವರ್ಷದ ಸಂಭ್ರಮ ಮತ್ತು ಕಿತ್ತೂರು ಚೆನ್ನಮ್ಮ 200 ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮ ಮಾಡುತ್ತೇವೆ. ಇನ್ನೊಂದು ತಿಂಗಳು ಸಮಯಾವಕಾಶವಿದ್ದು, ಎಲ್ಲವನ್ನೂ ಅಳವಡಿಸಿಕೊಳ್ಳುತ್ತೇವೆ. ಡಿಸೆಂಬರ್​​ 1ರ ಒಳಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದಿದ್ದಾರೆ.

ಇನ್ನು ಸುವರ್ಣ ಸೌಧದಲ್ಲಿ ಗಾಂಧಿ ಪ್ರತಿಮೆ ಈ ವರ್ಷ ಸ್ಥಾಪನೆ ಆಗಲಿದೆ. ಜೊತೆಗೆ ಸತ್ಯಮೇವ ಜಯತೆ ಧ್ಯೇಯವಾಕ್ಯ ಬರೆಸುವಂತೆ ಕಾನೂನು ಅನುಸಾರು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಡಿ.9ರಿಂದ ಅಧಿವೇಶನ ನಡೆಯಬಹುದು ಎಂದ ಬಸವರಾಜ ಹೊರಟ್ಟಿ

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಬಹುತೇಕ ಡಿ.9ರಿಂದ 20ರ ವರೆಗೆ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯಬಹುದು. ಇಂದು ಅಧಿಕಾರಿಗಳ ಜೊತೆಗೆ ಸಭೆ ಮಾಡಿದ್ದೇವೆ. ಈ ಹಿಂದೆ ಆದ ಅಸ್ತವ್ಯಸ್ಥ ಸರಿ‌ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಅಧಿವೇಶನಕ್ಕೆ ಏನೂ ತಯಾರಿ ಮಾಡಬೇಕು ಮಾಡಲು ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ