ರಾಜ್ಯಾದ್ಯಂತ ನಾಳೆಯಿಂದಲೇ ಚಿತ್ರಮಂದಿರಗಳು ಓಪನ್, ಜುಲೈ 26ರಿಂದ ಪದವಿ ಕಾಲೇಜು ತೆರೆಯಲು ಅವಕಾಶ

ಮುಖ್ಯಮಂತ್ರಿ ಯಡಿಯೂರಪ್ಪ ಇಂದು (ಜುಲೈ 18) ತಮ್ಮ ನಿವಾಸದಲ್ಲಿ ಸಚಿವರು ಹಾಗು ಅಧಿಕಾರಿಗಳ ಜೊತೆ ಕೊರೊನಾ ಕುರಿತು ಚರ್ಚೆ ನಡೆಸಿದರು. ಈ ಚರ್ಚೆಯಲ್ಲಿ ಶೇ.50ರಷ್ಟು ಚಿತ್ರಮಂದಿರಗಳನ್ನು ತೆರೆಯಲು ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯಾದ್ಯಂತ ನಾಳೆಯಿಂದಲೇ ಚಿತ್ರಮಂದಿರಗಳು ಓಪನ್, ಜುಲೈ 26ರಿಂದ ಪದವಿ ಕಾಲೇಜು ತೆರೆಯಲು ಅವಕಾಶ
ಪ್ರಾತಿನಿಧಿಕ ಚಿತ್ರ
Follow us
| Updated By: sandhya thejappa

Updated on:Jul 18, 2021 | 1:22 PM

ಬೆಂಗಳೂರು: ಸುಮಾರು ಮೂರು ತಿಂಗಳಿನಿಂದ ಬಂದ್ ಆಗಿದ್ದ ಚಿತ್ರಮಂದಿರಗಳನ್ನು(Theatre) ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಶೇಕಡಾ 50ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಿದ್ದು, ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಜೊತೆಗೆ ಜುಲೈ 26ರಿಂದ ಪದವಿ ಕಾಲೇಜು ತೆರೆಯಲು ಅವಕಾಶ ನೀಡಲಾಗಿದ್ದು, ಆಫ್​ಲೈನ್​ ತರಗತಿಗೆ ಹಾಜರಾಗಲು ಲಸಿಕೆ ಪಡೆದಿರಬೇಕು. 1 ಡೋಸ್​ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.

ಮುಖ್ಯಮಂತ್ರಿ ಯಡಿಯೂರಪ್ಪ ಇಂದು (ಜುಲೈ 18) ತಮ್ಮ ನಿವಾಸದಲ್ಲಿ ಸಚಿವರು ಹಾಗು ಅಧಿಕಾರಿಗಳ ಜೊತೆ ಕೊರೊನಾ ಕುರಿತು ಚರ್ಚೆ ನಡೆಸಿದರು. ಈ ಚರ್ಚೆಯಲ್ಲಿ ಶೇ.50ರಷ್ಟು ಚಿತ್ರಮಂದಿರಗಳನ್ನು ತೆರೆಯಲು ನಿರ್ಧಾರ ಕೈಗೊಳ್ಳಲಾಗಿದೆ. ಇನ್ನು ನೈಟ್ ಕರ್ಫ್ಯೂನ ರಾತ್ರಿ 10 ರಿಂದ ಬೆಳಗ್ಗೆ 5 ರ ವರಗೆ ವಿಧಿಸಲು ತೀರ್ಮಾನಿಸಲಾಗಿದೆ. ಇನ್ನು ಈ ಸಭೆಯಲ್ಲಿ ಪಬ್ ಮತ್ತು ಈಜುಕೊಳ ತೆರೆಯಲು ಅನುಮತಿ ನೀಡಿಲ್ಲ.

ಸಿನಿಮಾ ರಿಲೀಸ್ ಸದ್ಯಕ್ಕಿಲ್ಲ ನಾಳೆಯಿಂದ ಥಿಯೇಟರ್ ತೆರೆಯಲು ಅನುಮತಿ ನೀಡಿದ್ದರೂ, ಸ್ಟಾರ್ ನಟರ ಸಿನಿಮಾ ಸದ್ಯಕ್ಕೆ ರಿಲೀಸ್ ಆಗುವಂತೆ ಕಾಣುತ್ತಿಲ್ಲ. ಸದ್ಯ ಶೇ.50 ಆಕ್ಯೂಪೆನ್ಸಿ ಮಾತ್ರ ಅವಕಾಶ ಇದೆ. ಹೀಗಾಗಿ ಸಿನಿಮಾ ರಿಲೀಸ್ ಆಗೋಕೆ ಇನ್ನೂ ಎರಡು ವಾರ ಸಮಯ ಬೇಕಾಗುತ್ತದೆ. ಸಿದ್ದತೆಗೆ ಸಮಯ ಬೇಕಾಗಿದೆ. ಯಾವ ಸಿನಿಮಾಗಳನ್ನ ರಿಲೀಸ್ ಮಾಡೋದು ಅಂತ ಕಾದು ನೋಡಬೇಕಿದೆ ಎಂದು ಪ್ರದರ್ಶಕರ ವಲಯದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್ ತಿಳಿಸಿದರು.

ಇದನ್ನೂ ಓದಿ

SSLC Exam 2021: ನಾಳೆಯಿಂದ ರಾಜ್ಯಾದ್ಯಂತ ಎಸ್ಎಸ್ಎಲ್​ಸಿ ಪರೀಕ್ಷೆ ಆರಂಭ; ಕೆಲ ಮಾಹಿತಿಗಳು ಇಲ್ಲಿದೆ

Karnataka Weather: ಕರ್ನಾಟಕದಲ್ಲಿ ಜುಲೈ 21 ರ ತನಕ ಭಾರೀ ಮಳೆ ಸಾಧ್ಯತೆ; SSLC ಪರೀಕ್ಷೆಗೆ ತೆರಳುವಾಗ ಎಚ್ಚರದಿಂದಿರಿ ಮಕ್ಕಳೇ

(BS Yediyurappa Theatre Theatre Reopen Karnataka Unlock Degree College)

Published On - 12:25 pm, Sun, 18 July 21

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ