ಚಿಕ್ಕಜಾಲ ಬಳಿಯ ಡೆಕಾಥ್ಲಾನ್ ಪಾರ್ಕಿಂಗ್​ ಲಾಟ್​ನಲ್ಲಿ ಕಳ್ಳತನ; ಕಾರಿನ‌ ಗ್ಲಾಸ್ ಒಡೆದು ಹಣ, ಬೆಲೆ ಬಾಳುವ ವಸ್ತು ಕದ್ದ ಖದೀಮರು

ಚಿಕ್ಕಜಾಲ ಬಳಿಯ ಡೆಕಾಥ್ಲಾನ್ ಪಾರ್ಕಿಂಗ್​ ಲಾಟ್​ನಲ್ಲಿ ಕಳ್ಳತನ ನಡೆದಿದೆ. ಶಮಿಕ್ ಕುಟುಂಬದೊಂದಿಗೆ ನಿನ್ನೆ ರಾತ್ರಿ ಶಾಪಿಂಗ್​ಗೆ ಬಂದಿದ್ದರು. ಈ ವೇಳೆ‌ ಕಾರು ನಿಲ್ಲಿಸಿ ಹೋಗಿದ್ದಾಗ ಕಾರಿನ ಹಿಂಬದಿ ಗ್ಲಾಸ್ ಒಡೆದು ಕಳ್ಳತನ ಮಾಡಲಾಗಿದೆ. 50 ಸಾವಿರ ನಗದು, 5 ಲಕ್ಷ ಮೌಲ್ಯದ ಆ್ಯಪಲ್ ಲ್ಯಾಪ್ ಟಾಪ್, ಮೊಬೈಲ್ ಮತ್ತು ಹ್ಯಾಂಡ್ ಬ್ಯಾಗ್ ಕಳ್ಳತನವಾಗಿದೆ.

ಚಿಕ್ಕಜಾಲ ಬಳಿಯ ಡೆಕಾಥ್ಲಾನ್ ಪಾರ್ಕಿಂಗ್​ ಲಾಟ್​ನಲ್ಲಿ ಕಳ್ಳತನ; ಕಾರಿನ‌ ಗ್ಲಾಸ್ ಒಡೆದು ಹಣ, ಬೆಲೆ ಬಾಳುವ ವಸ್ತು ಕದ್ದ ಖದೀಮರು
ಡೆಕಾಥ್ಲಾನ್ ಪಾರ್ಕಿಂಗ್​ ಲಾಟ್​ನಲ್ಲಿ ಕಳ್ಳತನ
Edited By: ಆಯೇಷಾ ಬಾನು

Updated on: Oct 09, 2023 | 10:30 AM

ದೇವನಹಳ್ಳಿ, ಅ.09: ಚಿಕ್ಕಜಾಲ ಬಳಿಯ ಡೆಕಾಥ್ಲಾನ್ (Decathlon )ಪಾರ್ಕಿಂಗ್​ ಲಾಟ್​ನಲ್ಲಿ ಕಳ್ಳತನ ನಡೆದಿದೆ. ಕಾರು ನಿಲ್ಲಿಸಿ ಶಾಪಿಂಗ್​ಗೆ ಹೋಗಿದ್ದ ವೇಳೆ ಕಳ್ಳರು ಕೈ ಚಳಕ ತೋರಿಸಿದ್ದಾರೆ. ಕಾರಿನ‌ ಗ್ಲಾಸ್ ಒಡೆದು ಹಣ ಹಾಗೂ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ (Theft) ಮಾಡಿದ್ದಾರ. ಶಮಿಕ್ ಎಂಬುವವರಿಗೆ ಸೇರಿದ ಕಾರಿನಲ್ಲಿದ್ದ ವಸ್ತುಗಳು ಕಳ್ಳತನವಾಗಿದೆ. ಶಮಿಕ್ ಕುಟುಂಬದೊಂದಿಗೆ ನಿನ್ನೆ ರಾತ್ರಿ ಶಾಪಿಂಗ್​ಗೆ ಬಂದಿದ್ದರು. ಈ ವೇಳೆ‌ ಕಾರು ನಿಲ್ಲಿಸಿ ಹೋಗಿದ್ದಾಗ ಕಾರಿನ ಹಿಂಬದಿ ಗ್ಲಾಸ್ ಒಡೆದು ಕಳ್ಳತನ ಮಾಡಲಾಗಿದೆ. 50 ಸಾವಿರ ನಗದು, 5 ಲಕ್ಷ ಮೌಲ್ಯದ ಆ್ಯಪಲ್ ಲ್ಯಾಪ್ ಟಾಪ್, ಮೊಬೈಲ್ ಮತ್ತು ಹ್ಯಾಂಡ್ ಬ್ಯಾಗ್ ಕಳ್ಳತನವಾಗಿದೆ. ಚಿಕ್ಕ ಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಮಂಡ್ಯದ ಮದ್ದೂರು ತಾಲೂಕಿನ ಚುಂಚೇಗೌಡನದೊಡ್ಡಿ ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳನ್ನು ಬೆಸಗರಹಳ್ಳಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಹೇಶ್, ಗೋವಿಂದ ಬಂಧಿತ ಆರೋಪಿಗಳು. ಬಂಧಿತರಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ, 2 ಬೈಕ್​ಗಳು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ದೇಹವನ್ನು ಕಾಲುವೆಗೆ ಎಸೆದಿದ್ದ ಮೂವರು ಪೊಲೀಸರ ಅಮಾನತು

ಮನೆಗಳ ಬೀಗ ಮುರಿದು ಚಿನ್ನ, ಬೆಳ್ಳಿ, ನಗದು ದೋಚಿದ ಕಳ್ಳರು

ಹಾಸನ ನಗರದ ಸರ್ಕಾರಿ ಪಶು ವೈದ್ಯಕೀಯ ಕಾಲೇಜಿನ ಸಿಬ್ಬಂದಿಗಳ ವಸತಿ ಸಂಕೀರ್ಣದಲ್ಲಿ ಸರಣಿ ಕಳ್ಳತನ ನಡೆದಿದೆ. ಮೂರು ಮನೆಗಳ ಬೀಗ ಮುರಿದು ಚಿನ್ನ, ಬೆಳ್ಳಿ, ನಗದು ದೋಚಲಾಗಿದೆ. ಸಹಾಯಕ ಪ್ರಾಧ್ಯಾಪಕ ಚೇತನ್, ಗ್ರಂಥಪಾಲಕರಾದ ವಿಜಯಲಕ್ಷ್ಮಿ ಹಾಗೂ ಅಡುಗೆ ಭಟ್ಟರಾದ ಗಣೇಶ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ.

ಮಧ್ಯರಾತ್ರಿ ಸಿನಿಮೀಯ ಸ್ಟೈಲಲ್ಲಿ ಮುಸುಕು ಧರಿಸಿ ಬಂದಿರುವ ಮೂವರು ಖದೀಮರು, ಯಾರೂ ಇಲ್ಲದ ಮನೆಗಳನ್ನು ಗುರುತಿಸಿ ಬೀಗ ಮುರಿದು ಕಳ್ಳತನ ಮಾಡಿದ್ದಾರೆ. ಒಟ್ಟು 60 ಗ್ರಾಂ ಚಿನ್ನ, 340 ಗ್ರಾಂ ಬೆಳ್ಳಿ ಹಾಗೂ 13 ಸಾವಿರ ನಗದು ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಕಳ್ಳತನ ಮಾಡಿದ ನಂತರ ಚಪ್ಪಲಿ ಹಾಗೂ ಬಟ್ಟೆಗಳನ್ನು ಅಲ್ಲಿಯೇ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಕಳ್ಳರ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದು ಮೂರನೇ ಬಾರಿಗೆ ಪಶು ವೈದ್ಯಕೀಯ ಕಾಲೇಜಿನ ಸಿಬ್ಬಂದಿಗಳ ವಸತಿ ಸಂಕೀರ್ಣದಲ್ಲಿ ಕಳ್ಳತನ ನಡೆದಿದೆ. ಇದುವರೆಗೂ ಪೊಲೀಸರಿಗೆ ಕಳ್ಳರು ಸಿಕ್ಕಿಲ್ಲ. ವಸತಿ ಸಂಕೀರ್ಣದ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ಸ್ಥಳಕ್ಕೆ ಪೋಲಿಸರು‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:05 am, Mon, 9 October 23

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us