AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

400 ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಒಂದೇ ಕಡೆ ಸಿಗುವ ಕರ್ನಾಟಕದ ಮೊದಲ ಥೀಮ್‌ ಪಾರ್ಕ್‌!

400 ಕ್ಕೂ ಹೆಚ್ಚು ಚಟುವಟಿಕೆಗಳನ್ನು ಹೊಂದಿರುವ ಈ ಪಾರ್ಕ್‌ನಲ್ಲಿ ವಿಆರ್‌ ಗೇಮ್‌ಗಳು, ರಂಗ ಹಾಗೂ ಜಾನಪದ ಚಟುವಟಿಕೆಗಳನ್ನು ಕಾಣಬಹುದಾಗಿದೆ.

400 ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಒಂದೇ ಕಡೆ ಸಿಗುವ ಕರ್ನಾಟಕದ ಮೊದಲ ಥೀಮ್‌ ಪಾರ್ಕ್‌!
ವಿನಯ್​ ಗುರೂಜಿ
ರಾಜೇಶ್ ದುಗ್ಗುಮನೆ
| Edited By: |

Updated on: Feb 07, 2021 | 8:44 PM

Share

ಬೆಂಗಳೂರು: ಎಲ್ಲಾ ವಯೋಮಾನದವರಿಗೂ ಬಳಕೆಗೆ ಸಾಧ್ಯವಾಗುವ 400ಕ್ಕೂ ಹೆಚ್ಚು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ಅವಕಾಶ ನೀಡುವ ರಾಯಲ್‌ ಎನ್‌ಸ್ಪೋ ವರ್ಲ್ಡ್‌ ಥೀಮ್‌ ಪಾರ್ಕ್​​ನ ಲೋಗೋವನ್ನು ಗೌರಿಗದ್ದೆಯ ಅವಧೂತರಾದ ವಿನಯ್‌ ಗುರೂಜಿ ಲೋಕಾರ್ಪಣೆಗೊಳಿಸಿದರು.

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಗೋ ಲೋಕಾರ್ಪಣೆಗೊಳಿಸಿ ಮಾತನಾಡಿದ ವಿನಯ್‌ ಗುರೂಜಿ, ಬೆಂಗಳೂರಿನ ಕೆಲವೇ ಕೆಲವು ಕಿಲೋಮೀಟರ್​ಗಳ ಹೊರವಲಯದಲ್ಲಿ ನೂರಕ್ಕೂ ಹೆಚ್ಚು ಗ್ರಾಮೀಣ ಕ್ರೀಡೆಗಳು, 20 ಕ್ಕೂ ಹೆಚ್ಚು ಸಾಹಸಾತ್ಮಕ ಕ್ರೀಡೆಗಳು ಹಾಗೂ ಭಾರತೀಯ ಮತ್ತು ವಿದೇಶಿ ಸಾಂಸ್ಕೃತಿಕ ಚಟುವಟಿಕೆಗಳನ್ನು ಹೊಂದುವ ಪಾರ್ಕನ್ನು ಶೇಖರ್‌ ಗ್ಲೋಬಲ್‌ ರಿಟ್ರೀಟ್ಸ್‌ ಸಂಸ್ಥೆಯ ನಿರ್ಮಿಸುತ್ತಿರುವುದು ಬಹಳ ಸಂತಸದ ವಿಷಯ. ಕ್ರೀಡೆಗಳು ಮಾನವನ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ನಮ್ಮ ಬಾಲ್ಯವನ್ನು ನೆನೆಪಿಸುವಂತಹ ಗ್ರಾಮೀಣ ಕ್ರೀಡೆಗಳ ಜೊತೆಯಲ್ಲಿಯೇ ಕ್ರೀಡಾಂಗಣದ ಆಟಗಳು ಮತ್ತು ಸಾಂಪ್ರದಾಯಿಕ ಸಾಂಸ್ಕೃತಿಕ ಚಟುವಟಿಕೆಗಳು ಒಂದೇ ಸ್ಥಳದಲ್ಲಿ ದೊರಕುವಂತಹ ವ್ಯವಸ್ಥೆ ಬಹಳ ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಈ ಥೀಮ್‌ ಪಾರ್ಕನ್ನು ಎಲ್ಲಾ ವರ್ಗದ ಜನರು ಕೂಡಾ ಉಪಯೋಗಿಸಿ ಇಷ್ಟಪಡುವಂತಾಗಬೇಕು ಎನ್ನುವುದು ನಮ್ಮ ಪ್ರಮುಖ ಗುರಿಯಾಗಿದೆ. 400 ಕ್ಕೂ ಹೆಚ್ಚು ಚಟುವಟಿಕೆಗಳನ್ನು ಹೊಂದಿರುವ ಈ ಪಾರ್ಕ್‌ನಲ್ಲಿ ವಿಆರ್‌ ಗೇಮ್‌ಗಳು, ರಂಗ ಹಾಗೂ ಜಾನಪದ ಚಟುವಟಿಕೆಗಳನ್ನು ಕಾಣಬಹುದಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಶೇಖರ್‌ ತಿಳಿಸಿದರು. ಇನ್ನು ಕೆಲವೇ ದಿನಗಳಲ್ಲಿ ಈ ಪಾರ್ಕ್‌ ಸಾರ್ವಜನಿಕರ ಉಪಯೋಗಕ್ಕೆ ಲೋಕಾರ್ಪಣೆ ಗೊಳ್ಳಲಿದೆ.

National Flag ರಾಷ್ಟ್ರಧ್ವಜ ತಯಾರಕರಿಗೆ ನೆರವು ನೀಡುವಂತೆ ವಿನಯ್ ಗುರೂಜಿ ಮನವಿ!

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!