AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

400 ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಒಂದೇ ಕಡೆ ಸಿಗುವ ಕರ್ನಾಟಕದ ಮೊದಲ ಥೀಮ್‌ ಪಾರ್ಕ್‌!

400 ಕ್ಕೂ ಹೆಚ್ಚು ಚಟುವಟಿಕೆಗಳನ್ನು ಹೊಂದಿರುವ ಈ ಪಾರ್ಕ್‌ನಲ್ಲಿ ವಿಆರ್‌ ಗೇಮ್‌ಗಳು, ರಂಗ ಹಾಗೂ ಜಾನಪದ ಚಟುವಟಿಕೆಗಳನ್ನು ಕಾಣಬಹುದಾಗಿದೆ.

400 ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಒಂದೇ ಕಡೆ ಸಿಗುವ ಕರ್ನಾಟಕದ ಮೊದಲ ಥೀಮ್‌ ಪಾರ್ಕ್‌!
ವಿನಯ್​ ಗುರೂಜಿ
ರಾಜೇಶ್ ದುಗ್ಗುಮನೆ
| Edited By: |

Updated on: Feb 07, 2021 | 8:44 PM

Share

ಬೆಂಗಳೂರು: ಎಲ್ಲಾ ವಯೋಮಾನದವರಿಗೂ ಬಳಕೆಗೆ ಸಾಧ್ಯವಾಗುವ 400ಕ್ಕೂ ಹೆಚ್ಚು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ಅವಕಾಶ ನೀಡುವ ರಾಯಲ್‌ ಎನ್‌ಸ್ಪೋ ವರ್ಲ್ಡ್‌ ಥೀಮ್‌ ಪಾರ್ಕ್​​ನ ಲೋಗೋವನ್ನು ಗೌರಿಗದ್ದೆಯ ಅವಧೂತರಾದ ವಿನಯ್‌ ಗುರೂಜಿ ಲೋಕಾರ್ಪಣೆಗೊಳಿಸಿದರು.

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಗೋ ಲೋಕಾರ್ಪಣೆಗೊಳಿಸಿ ಮಾತನಾಡಿದ ವಿನಯ್‌ ಗುರೂಜಿ, ಬೆಂಗಳೂರಿನ ಕೆಲವೇ ಕೆಲವು ಕಿಲೋಮೀಟರ್​ಗಳ ಹೊರವಲಯದಲ್ಲಿ ನೂರಕ್ಕೂ ಹೆಚ್ಚು ಗ್ರಾಮೀಣ ಕ್ರೀಡೆಗಳು, 20 ಕ್ಕೂ ಹೆಚ್ಚು ಸಾಹಸಾತ್ಮಕ ಕ್ರೀಡೆಗಳು ಹಾಗೂ ಭಾರತೀಯ ಮತ್ತು ವಿದೇಶಿ ಸಾಂಸ್ಕೃತಿಕ ಚಟುವಟಿಕೆಗಳನ್ನು ಹೊಂದುವ ಪಾರ್ಕನ್ನು ಶೇಖರ್‌ ಗ್ಲೋಬಲ್‌ ರಿಟ್ರೀಟ್ಸ್‌ ಸಂಸ್ಥೆಯ ನಿರ್ಮಿಸುತ್ತಿರುವುದು ಬಹಳ ಸಂತಸದ ವಿಷಯ. ಕ್ರೀಡೆಗಳು ಮಾನವನ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ನಮ್ಮ ಬಾಲ್ಯವನ್ನು ನೆನೆಪಿಸುವಂತಹ ಗ್ರಾಮೀಣ ಕ್ರೀಡೆಗಳ ಜೊತೆಯಲ್ಲಿಯೇ ಕ್ರೀಡಾಂಗಣದ ಆಟಗಳು ಮತ್ತು ಸಾಂಪ್ರದಾಯಿಕ ಸಾಂಸ್ಕೃತಿಕ ಚಟುವಟಿಕೆಗಳು ಒಂದೇ ಸ್ಥಳದಲ್ಲಿ ದೊರಕುವಂತಹ ವ್ಯವಸ್ಥೆ ಬಹಳ ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಈ ಥೀಮ್‌ ಪಾರ್ಕನ್ನು ಎಲ್ಲಾ ವರ್ಗದ ಜನರು ಕೂಡಾ ಉಪಯೋಗಿಸಿ ಇಷ್ಟಪಡುವಂತಾಗಬೇಕು ಎನ್ನುವುದು ನಮ್ಮ ಪ್ರಮುಖ ಗುರಿಯಾಗಿದೆ. 400 ಕ್ಕೂ ಹೆಚ್ಚು ಚಟುವಟಿಕೆಗಳನ್ನು ಹೊಂದಿರುವ ಈ ಪಾರ್ಕ್‌ನಲ್ಲಿ ವಿಆರ್‌ ಗೇಮ್‌ಗಳು, ರಂಗ ಹಾಗೂ ಜಾನಪದ ಚಟುವಟಿಕೆಗಳನ್ನು ಕಾಣಬಹುದಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಶೇಖರ್‌ ತಿಳಿಸಿದರು. ಇನ್ನು ಕೆಲವೇ ದಿನಗಳಲ್ಲಿ ಈ ಪಾರ್ಕ್‌ ಸಾರ್ವಜನಿಕರ ಉಪಯೋಗಕ್ಕೆ ಲೋಕಾರ್ಪಣೆ ಗೊಳ್ಳಲಿದೆ.

National Flag ರಾಷ್ಟ್ರಧ್ವಜ ತಯಾರಕರಿಗೆ ನೆರವು ನೀಡುವಂತೆ ವಿನಯ್ ಗುರೂಜಿ ಮನವಿ!

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ