AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ಆರಂಭದ ಬಗ್ಗೆ ಗೊಂದಲವಿದೆ.. ಶೀಘ್ರದಲ್ಲೇ ಅಂತಿಮ ನಿರ್ಧಾರ ತಿಳಿಸ್ತೇವೆ: ಆರ್.ಅಶೋಕ್​

ಬೆಂಗಳೂರು: ಜನವರಿ 1ರಿಂದ ಶಾಲಾ-ಕಾಲೇಜು ಆರಂಭ ಮಾಡುವ ಬಗ್ಗೆ ಇನ್ನೂ ಗೊಂದಲ ಇರುವುದು ನಿಜ. ಈ ಬಗ್ಗೆ ಶಿಕ್ಷಣ ಸಚಿವರು, ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರ ಜತೆ ಚರ್ಚಿಸುತ್ತಾರೆ ಎಂದು ಕಂದಾಯ ಸಚಿವ ಆರ್​. ಅಶೋಕ್ ಹೇಳಿದರು. ರಾಜ್ಯದಲ್ಲಿ ಜ.1ರಿಂದ ಶಾಲಾ-ಕಾಲೇಜು ಪ್ರಾರಂಭ ಎಂದು ಹೇಳಲಾಗಿದ್ದರೂ, ಇದೀಗ ರೂಪಾಂತರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಮತ್ತೆ ಗೊಂದಲ ಸೃಷ್ಟಿಯಾಗಿದೆ. ಪಾಲಕರಲ್ಲಿ ಹಲವರು ಶಾಲೆಗಳ ಆರಂಭಕ್ಕೆ ಒತ್ತಾಯಿಸಿದ್ದರೆ, ಮತ್ತೂ ಅನೇಕರು ಈಗ ಬೇಡ ಎಂದಿದ್ದಾರೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ […]

ಶಾಲೆ ಆರಂಭದ ಬಗ್ಗೆ ಗೊಂದಲವಿದೆ.. ಶೀಘ್ರದಲ್ಲೇ ಅಂತಿಮ ನಿರ್ಧಾರ ತಿಳಿಸ್ತೇವೆ: ಆರ್.ಅಶೋಕ್​
ಆರ್. ಅಶೋಕ್
Lakshmi Hegde
|

Updated on:Dec 30, 2020 | 1:21 PM

Share

ಬೆಂಗಳೂರು: ಜನವರಿ 1ರಿಂದ ಶಾಲಾ-ಕಾಲೇಜು ಆರಂಭ ಮಾಡುವ ಬಗ್ಗೆ ಇನ್ನೂ ಗೊಂದಲ ಇರುವುದು ನಿಜ. ಈ ಬಗ್ಗೆ ಶಿಕ್ಷಣ ಸಚಿವರು, ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರ ಜತೆ ಚರ್ಚಿಸುತ್ತಾರೆ ಎಂದು ಕಂದಾಯ ಸಚಿವ ಆರ್​. ಅಶೋಕ್ ಹೇಳಿದರು.

ರಾಜ್ಯದಲ್ಲಿ ಜ.1ರಿಂದ ಶಾಲಾ-ಕಾಲೇಜು ಪ್ರಾರಂಭ ಎಂದು ಹೇಳಲಾಗಿದ್ದರೂ, ಇದೀಗ ರೂಪಾಂತರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಮತ್ತೆ ಗೊಂದಲ ಸೃಷ್ಟಿಯಾಗಿದೆ. ಪಾಲಕರಲ್ಲಿ ಹಲವರು ಶಾಲೆಗಳ ಆರಂಭಕ್ಕೆ ಒತ್ತಾಯಿಸಿದ್ದರೆ, ಮತ್ತೂ ಅನೇಕರು ಈಗ ಬೇಡ ಎಂದಿದ್ದಾರೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್​ ಮುಖ್ಯಮಂತ್ರಿಯವರ ಜತೆ ಚರ್ಚಿಸುತ್ತಾರೆ. ಅದಾದ ನಂತರ ಸಿಎಂ ಒಂದು ಅಂತಿಮ ನಿರ್ಧಾರ ತಿಳಿಸುತ್ತಾರೆ ಎಂದರು.

ಬೇರೆ ಕೆಲವು ರಾಜ್ಯಗಳಲ್ಲಿ ಈಗಾಗಲೇ ಶಾಲೆಗಳ ಆರಂಭ ಆಗಿದೆ. ಆದರೆ ನಮ್ಮಲ್ಲಿ ಬ್ರಿಟನ್ ವೈರಸ್​ ಪ್ರಸರಣದ ಪ್ರಮಾಣ ನೋಡಿ ಮುಂದಿನ ಹೆಜ್ಜೆ ಇಡಲಾಗುವುದು. ಸದ್ಯಕ್ಕೆ ಲಾಕ್ಡೌನ್ ಪ್ರಸ್ತಾಪವಂತೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಅಗತ್ಯವಿದೆ. ನಿಯಮಗಳನ್ನೂ ಬಿಗಿಗೊಳಿಸಬೇಕಾಗಿದೆ. ಇಡೀ ರಾಜ್ಯದಲ್ಲಿ ಲಾಕ್​ಡೌನ್​ ಮಾಡುವುದಿಲ್ಲ. ಬದಲಿಗೆ ರೂಪಾಂತರಿ ವೈರಸ್​ ಹೆಚ್ಚುತ್ತಿರುವ ಜಿಲ್ಲೆಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಅಶೋಕ್​ ತಿಳಿಸಿದ್ದಾರೆ.

ಕೊರೊನಾ ಹೊಸ ಪ್ರಭೇದದ ಬಗ್ಗೆ ಕಟ್ಟೆಚ್ಚರವಹಿಸಿ : ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ

Published On - 1:17 pm, Wed, 30 December 20

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ