AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ಆರಂಭದ ಬಗ್ಗೆ ಗೊಂದಲವಿದೆ.. ಶೀಘ್ರದಲ್ಲೇ ಅಂತಿಮ ನಿರ್ಧಾರ ತಿಳಿಸ್ತೇವೆ: ಆರ್.ಅಶೋಕ್​

ಬೆಂಗಳೂರು: ಜನವರಿ 1ರಿಂದ ಶಾಲಾ-ಕಾಲೇಜು ಆರಂಭ ಮಾಡುವ ಬಗ್ಗೆ ಇನ್ನೂ ಗೊಂದಲ ಇರುವುದು ನಿಜ. ಈ ಬಗ್ಗೆ ಶಿಕ್ಷಣ ಸಚಿವರು, ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರ ಜತೆ ಚರ್ಚಿಸುತ್ತಾರೆ ಎಂದು ಕಂದಾಯ ಸಚಿವ ಆರ್​. ಅಶೋಕ್ ಹೇಳಿದರು. ರಾಜ್ಯದಲ್ಲಿ ಜ.1ರಿಂದ ಶಾಲಾ-ಕಾಲೇಜು ಪ್ರಾರಂಭ ಎಂದು ಹೇಳಲಾಗಿದ್ದರೂ, ಇದೀಗ ರೂಪಾಂತರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಮತ್ತೆ ಗೊಂದಲ ಸೃಷ್ಟಿಯಾಗಿದೆ. ಪಾಲಕರಲ್ಲಿ ಹಲವರು ಶಾಲೆಗಳ ಆರಂಭಕ್ಕೆ ಒತ್ತಾಯಿಸಿದ್ದರೆ, ಮತ್ತೂ ಅನೇಕರು ಈಗ ಬೇಡ ಎಂದಿದ್ದಾರೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ […]

ಶಾಲೆ ಆರಂಭದ ಬಗ್ಗೆ ಗೊಂದಲವಿದೆ.. ಶೀಘ್ರದಲ್ಲೇ ಅಂತಿಮ ನಿರ್ಧಾರ ತಿಳಿಸ್ತೇವೆ: ಆರ್.ಅಶೋಕ್​
ಆರ್. ಅಶೋಕ್
Lakshmi Hegde
|

Updated on:Dec 30, 2020 | 1:21 PM

Share

ಬೆಂಗಳೂರು: ಜನವರಿ 1ರಿಂದ ಶಾಲಾ-ಕಾಲೇಜು ಆರಂಭ ಮಾಡುವ ಬಗ್ಗೆ ಇನ್ನೂ ಗೊಂದಲ ಇರುವುದು ನಿಜ. ಈ ಬಗ್ಗೆ ಶಿಕ್ಷಣ ಸಚಿವರು, ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರ ಜತೆ ಚರ್ಚಿಸುತ್ತಾರೆ ಎಂದು ಕಂದಾಯ ಸಚಿವ ಆರ್​. ಅಶೋಕ್ ಹೇಳಿದರು.

ರಾಜ್ಯದಲ್ಲಿ ಜ.1ರಿಂದ ಶಾಲಾ-ಕಾಲೇಜು ಪ್ರಾರಂಭ ಎಂದು ಹೇಳಲಾಗಿದ್ದರೂ, ಇದೀಗ ರೂಪಾಂತರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಮತ್ತೆ ಗೊಂದಲ ಸೃಷ್ಟಿಯಾಗಿದೆ. ಪಾಲಕರಲ್ಲಿ ಹಲವರು ಶಾಲೆಗಳ ಆರಂಭಕ್ಕೆ ಒತ್ತಾಯಿಸಿದ್ದರೆ, ಮತ್ತೂ ಅನೇಕರು ಈಗ ಬೇಡ ಎಂದಿದ್ದಾರೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್​ ಮುಖ್ಯಮಂತ್ರಿಯವರ ಜತೆ ಚರ್ಚಿಸುತ್ತಾರೆ. ಅದಾದ ನಂತರ ಸಿಎಂ ಒಂದು ಅಂತಿಮ ನಿರ್ಧಾರ ತಿಳಿಸುತ್ತಾರೆ ಎಂದರು.

ಬೇರೆ ಕೆಲವು ರಾಜ್ಯಗಳಲ್ಲಿ ಈಗಾಗಲೇ ಶಾಲೆಗಳ ಆರಂಭ ಆಗಿದೆ. ಆದರೆ ನಮ್ಮಲ್ಲಿ ಬ್ರಿಟನ್ ವೈರಸ್​ ಪ್ರಸರಣದ ಪ್ರಮಾಣ ನೋಡಿ ಮುಂದಿನ ಹೆಜ್ಜೆ ಇಡಲಾಗುವುದು. ಸದ್ಯಕ್ಕೆ ಲಾಕ್ಡೌನ್ ಪ್ರಸ್ತಾಪವಂತೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಅಗತ್ಯವಿದೆ. ನಿಯಮಗಳನ್ನೂ ಬಿಗಿಗೊಳಿಸಬೇಕಾಗಿದೆ. ಇಡೀ ರಾಜ್ಯದಲ್ಲಿ ಲಾಕ್​ಡೌನ್​ ಮಾಡುವುದಿಲ್ಲ. ಬದಲಿಗೆ ರೂಪಾಂತರಿ ವೈರಸ್​ ಹೆಚ್ಚುತ್ತಿರುವ ಜಿಲ್ಲೆಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಅಶೋಕ್​ ತಿಳಿಸಿದ್ದಾರೆ.

ಕೊರೊನಾ ಹೊಸ ಪ್ರಭೇದದ ಬಗ್ಗೆ ಕಟ್ಟೆಚ್ಚರವಹಿಸಿ : ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ

Published On - 1:17 pm, Wed, 30 December 20

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ