AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ಆರಂಭದ ಬಗ್ಗೆ ಗೊಂದಲವಿದೆ.. ಶೀಘ್ರದಲ್ಲೇ ಅಂತಿಮ ನಿರ್ಧಾರ ತಿಳಿಸ್ತೇವೆ: ಆರ್.ಅಶೋಕ್​

ಬೆಂಗಳೂರು: ಜನವರಿ 1ರಿಂದ ಶಾಲಾ-ಕಾಲೇಜು ಆರಂಭ ಮಾಡುವ ಬಗ್ಗೆ ಇನ್ನೂ ಗೊಂದಲ ಇರುವುದು ನಿಜ. ಈ ಬಗ್ಗೆ ಶಿಕ್ಷಣ ಸಚಿವರು, ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರ ಜತೆ ಚರ್ಚಿಸುತ್ತಾರೆ ಎಂದು ಕಂದಾಯ ಸಚಿವ ಆರ್​. ಅಶೋಕ್ ಹೇಳಿದರು. ರಾಜ್ಯದಲ್ಲಿ ಜ.1ರಿಂದ ಶಾಲಾ-ಕಾಲೇಜು ಪ್ರಾರಂಭ ಎಂದು ಹೇಳಲಾಗಿದ್ದರೂ, ಇದೀಗ ರೂಪಾಂತರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಮತ್ತೆ ಗೊಂದಲ ಸೃಷ್ಟಿಯಾಗಿದೆ. ಪಾಲಕರಲ್ಲಿ ಹಲವರು ಶಾಲೆಗಳ ಆರಂಭಕ್ಕೆ ಒತ್ತಾಯಿಸಿದ್ದರೆ, ಮತ್ತೂ ಅನೇಕರು ಈಗ ಬೇಡ ಎಂದಿದ್ದಾರೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ […]

ಶಾಲೆ ಆರಂಭದ ಬಗ್ಗೆ ಗೊಂದಲವಿದೆ.. ಶೀಘ್ರದಲ್ಲೇ ಅಂತಿಮ ನಿರ್ಧಾರ ತಿಳಿಸ್ತೇವೆ: ಆರ್.ಅಶೋಕ್​
ಆರ್. ಅಶೋಕ್
Lakshmi Hegde
|

Updated on:Dec 30, 2020 | 1:21 PM

Share

ಬೆಂಗಳೂರು: ಜನವರಿ 1ರಿಂದ ಶಾಲಾ-ಕಾಲೇಜು ಆರಂಭ ಮಾಡುವ ಬಗ್ಗೆ ಇನ್ನೂ ಗೊಂದಲ ಇರುವುದು ನಿಜ. ಈ ಬಗ್ಗೆ ಶಿಕ್ಷಣ ಸಚಿವರು, ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರ ಜತೆ ಚರ್ಚಿಸುತ್ತಾರೆ ಎಂದು ಕಂದಾಯ ಸಚಿವ ಆರ್​. ಅಶೋಕ್ ಹೇಳಿದರು.

ರಾಜ್ಯದಲ್ಲಿ ಜ.1ರಿಂದ ಶಾಲಾ-ಕಾಲೇಜು ಪ್ರಾರಂಭ ಎಂದು ಹೇಳಲಾಗಿದ್ದರೂ, ಇದೀಗ ರೂಪಾಂತರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಮತ್ತೆ ಗೊಂದಲ ಸೃಷ್ಟಿಯಾಗಿದೆ. ಪಾಲಕರಲ್ಲಿ ಹಲವರು ಶಾಲೆಗಳ ಆರಂಭಕ್ಕೆ ಒತ್ತಾಯಿಸಿದ್ದರೆ, ಮತ್ತೂ ಅನೇಕರು ಈಗ ಬೇಡ ಎಂದಿದ್ದಾರೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್​ ಮುಖ್ಯಮಂತ್ರಿಯವರ ಜತೆ ಚರ್ಚಿಸುತ್ತಾರೆ. ಅದಾದ ನಂತರ ಸಿಎಂ ಒಂದು ಅಂತಿಮ ನಿರ್ಧಾರ ತಿಳಿಸುತ್ತಾರೆ ಎಂದರು.

ಬೇರೆ ಕೆಲವು ರಾಜ್ಯಗಳಲ್ಲಿ ಈಗಾಗಲೇ ಶಾಲೆಗಳ ಆರಂಭ ಆಗಿದೆ. ಆದರೆ ನಮ್ಮಲ್ಲಿ ಬ್ರಿಟನ್ ವೈರಸ್​ ಪ್ರಸರಣದ ಪ್ರಮಾಣ ನೋಡಿ ಮುಂದಿನ ಹೆಜ್ಜೆ ಇಡಲಾಗುವುದು. ಸದ್ಯಕ್ಕೆ ಲಾಕ್ಡೌನ್ ಪ್ರಸ್ತಾಪವಂತೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಅಗತ್ಯವಿದೆ. ನಿಯಮಗಳನ್ನೂ ಬಿಗಿಗೊಳಿಸಬೇಕಾಗಿದೆ. ಇಡೀ ರಾಜ್ಯದಲ್ಲಿ ಲಾಕ್​ಡೌನ್​ ಮಾಡುವುದಿಲ್ಲ. ಬದಲಿಗೆ ರೂಪಾಂತರಿ ವೈರಸ್​ ಹೆಚ್ಚುತ್ತಿರುವ ಜಿಲ್ಲೆಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಅಶೋಕ್​ ತಿಳಿಸಿದ್ದಾರೆ.

ಕೊರೊನಾ ಹೊಸ ಪ್ರಭೇದದ ಬಗ್ಗೆ ಕಟ್ಟೆಚ್ಚರವಹಿಸಿ : ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ

Published On - 1:17 pm, Wed, 30 December 20

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ