AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ-ಸಿದ್ದು ಮಧ್ಯೆ ಶತ್ರುತ್ವ ಇಲ್ಲ, ಅಭಿಪ್ರಾಯಗಳ ಭೇದವಷ್ಟೇ: ಪರಮೇಶ್ವರ್​

ಬೆಂಗಳೂರು: ಸಿದ್ದರಾಮಯ್ಯ, ನನ್ನ ಮಧ್ಯೆ ಶತ್ರುತ್ವ ಇದೆ ಎಂದು ಬಿಂಬಿಸೋದು ಸರಿಯಲ್ಲ. ಯಾರೋ ಬೇಕಂತಲೇ ಇದನ್ನು ಮಾಡ್ತಿದ್ದಾರೆ. ರಾಜ್ಯದಲ್ಲಿ ನಾನು, ಸಿದ್ದರಾಮಯ್ಯ ಚೆನ್ನಾಗಿದ್ರೆ ಕಾಂಗ್ರೆಸ್ ಬಲಿಷ್ಠವಾಗುತ್ತೆ. ನನ್ನ, ಅವರ ಅಭಿಪ್ರಾಯಗಳು ಬೇರೆ ಬೇರೆ ಇರಬಹುದು, ಅದನ್ನ ಸಿದ್ದರಾಮಯ್ಯ ಜತೆಗಿನ ಶತ್ರುತ್ವ ಎನ್ನಲು ಆಗಲ್ಲ ಎಂದು ಮಾಜಿ ಡಿಸಿಎಂ ಜಿ.ಪರಮೇಶ್ವರ್​ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪರಮೇಶ್ವರ್​, ರಾಜ್ಯ ರಾಜಕಾರಣದ ಬಗ್ಗೆ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಬಳಿ ಚರ್ಚೆ ಮಾಡಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್‌ಗೆ ನೆಲೆ ಇದೆ, […]

ನನ್ನ-ಸಿದ್ದು ಮಧ್ಯೆ ಶತ್ರುತ್ವ ಇಲ್ಲ, ಅಭಿಪ್ರಾಯಗಳ ಭೇದವಷ್ಟೇ: ಪರಮೇಶ್ವರ್​
ಸಾಧು ಶ್ರೀನಾಥ್​
|

Updated on:Sep 19, 2019 | 4:00 PM

Share

ಬೆಂಗಳೂರು: ಸಿದ್ದರಾಮಯ್ಯ, ನನ್ನ ಮಧ್ಯೆ ಶತ್ರುತ್ವ ಇದೆ ಎಂದು ಬಿಂಬಿಸೋದು ಸರಿಯಲ್ಲ. ಯಾರೋ ಬೇಕಂತಲೇ ಇದನ್ನು ಮಾಡ್ತಿದ್ದಾರೆ. ರಾಜ್ಯದಲ್ಲಿ ನಾನು, ಸಿದ್ದರಾಮಯ್ಯ ಚೆನ್ನಾಗಿದ್ರೆ ಕಾಂಗ್ರೆಸ್ ಬಲಿಷ್ಠವಾಗುತ್ತೆ. ನನ್ನ, ಅವರ ಅಭಿಪ್ರಾಯಗಳು ಬೇರೆ ಬೇರೆ ಇರಬಹುದು, ಅದನ್ನ ಸಿದ್ದರಾಮಯ್ಯ ಜತೆಗಿನ ಶತ್ರುತ್ವ ಎನ್ನಲು ಆಗಲ್ಲ ಎಂದು ಮಾಜಿ ಡಿಸಿಎಂ ಜಿ.ಪರಮೇಶ್ವರ್​ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪರಮೇಶ್ವರ್​, ರಾಜ್ಯ ರಾಜಕಾರಣದ ಬಗ್ಗೆ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಬಳಿ ಚರ್ಚೆ ಮಾಡಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್‌ಗೆ ನೆಲೆ ಇದೆ, ಕಾಂಗ್ರೆಸ್ ಪಕ್ಷವನ್ನು ಕಟ್ಟಬೇಕೆಂಬ ಬಗ್ಗೆ ಚರ್ಚೆ ಮಾಡಿದ್ದೇನೆ. ಪ್ರತಿಪಕ್ಷ ಸ್ಥಾನದ ಬಗ್ಗೆಯೂ ನಾವು ಚರ್ಚೆ ಮಾಡಿದ್ದೇವೆ. ಡಿಸೆಂಬರ್​ನಲ್ಲಿ ಚುನಾವಣೆ ಮಾಡ್ತಾರೆ ಎಂಬ ಮಾಹಿತಿ ಇದೆ‌‌ ಈ ಬಗ್ಗೆಯೂ ಸೋನಿಯಾ ಗಾಂಧಿಗೆ ಬಳಿ ಮಾತನಾಡಿದ್ದೇನೆ ಎಂದರು.

ನಾನೇನೂ ಚಾಡಿ ಹೇಳಿಲ್ಲ, ಅದು ನನ್ನ ಜಾಯಮಾನ ಅಲ್ಲ: ಸೋನಿಯಾ ಗಾಂಧಿ ಭೇಟಿಗೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಅಪಾಯಿಂಟ್ಮೆಂಟ್ ಸಿಗಲಿಲ್ಲ ಎನ್ನುವುದು ಸರಿಯಿಲ್ಲ. ನನಗೂ ಅನೇಕ ಬಾರಿ ಅಪಾಯಿಂಟ್ಮೆಂಟ್ ಸಿಕ್ಕಿಲ್ಲ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಕಿಲ್ಲ ಎಂದರು. ಪಕ್ಷದಲ್ಲಿ ಮೂಲ ಮತ್ತು ವಲಸೆ ಕಾಂಗ್ರೆಸ್ಸಿಗರು ಎಂದು ಇಲ್ಲ, ನಮ್ಮ ಸಿದ್ಧಾಂತ ಒಪ್ಪಿ ಅವರು ನಮ್ಮ ಪಕ್ಷಕ್ಕೆ ಬಂದ ಮೇಲೆ ಅವರು ಹೊರಗಿನಿಂದ ಬಂದವರು ಎಂದು ಎನಿಸಿಕೊಳ್ಳಲ್ಲ. ನನಗೆ ಒಬ್ಬರ ಬಗ್ಗೆ ಚಾಡಿ ಹೇಳೋ ಅಭ್ಯಾಸ ಇಲ್ಲ. ಇದು ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ಗೊತ್ತು ಅಂತ ಪರಮೇಶ್ವರ್ ಹೇಳಿದರು.

ಸಿಎಲ್​ಪಿ ಸಭೆ ಇರೋದು ನನಗೆ ಗೊತ್ತಿರಲಿಲ್ಲ: ಕಾಂಗ್ರೆಸ್​ ಶಾಸಕಾಂಗ ಪಕ್ಷದ(ಸಿಎಲ್​ಪಿ) ಸಭೆ ಇರೋದು ನನಗೆ ಗೊತ್ತಿರಲಿಲ್ಲ. ಮೊನ್ನೆ ನನಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕರೆ ಮಾಡಿ ಹೇಳಿದ್ರು. ಅದರೆ ನಾನು ದೆಹಲಿಯಲ್ಲಿದ್ದ ಕಾರಣ ಸಭೆಗೆ ಬರೋಕೆ ಆಗಲ್ಲ ಅಂತ ಹೇಳಿದ್ದೇನೆ. ಒಬ್ಬರನ್ನ ದೂರ ಇಟ್ಟು ಪಕ್ಷ ಕಟ್ತೀನಿ ಅಂದ್ರೆ ಆಗೋದಿಲ್ಲ.‌ ಒಬ್ಬೊಬ್ಬರಿಗೆ ಒಂದೊಂದು ಶಕ್ತಿ ಇರುತ್ತೆ. ಸಾಮೂಹಿಕ ನಾಯಕತ್ವದಲ್ಲಿ ಕೆಲಸ ಮಾಡಬೇಕು ಅಂತ ಪರಮೇಶ್ವರ್​ ಹೇಳಿದರು.

Published On - 3:38 pm, Thu, 19 September 19

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್