AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ-ಸಿದ್ದು ಮಧ್ಯೆ ಶತ್ರುತ್ವ ಇಲ್ಲ, ಅಭಿಪ್ರಾಯಗಳ ಭೇದವಷ್ಟೇ: ಪರಮೇಶ್ವರ್​

ಬೆಂಗಳೂರು: ಸಿದ್ದರಾಮಯ್ಯ, ನನ್ನ ಮಧ್ಯೆ ಶತ್ರುತ್ವ ಇದೆ ಎಂದು ಬಿಂಬಿಸೋದು ಸರಿಯಲ್ಲ. ಯಾರೋ ಬೇಕಂತಲೇ ಇದನ್ನು ಮಾಡ್ತಿದ್ದಾರೆ. ರಾಜ್ಯದಲ್ಲಿ ನಾನು, ಸಿದ್ದರಾಮಯ್ಯ ಚೆನ್ನಾಗಿದ್ರೆ ಕಾಂಗ್ರೆಸ್ ಬಲಿಷ್ಠವಾಗುತ್ತೆ. ನನ್ನ, ಅವರ ಅಭಿಪ್ರಾಯಗಳು ಬೇರೆ ಬೇರೆ ಇರಬಹುದು, ಅದನ್ನ ಸಿದ್ದರಾಮಯ್ಯ ಜತೆಗಿನ ಶತ್ರುತ್ವ ಎನ್ನಲು ಆಗಲ್ಲ ಎಂದು ಮಾಜಿ ಡಿಸಿಎಂ ಜಿ.ಪರಮೇಶ್ವರ್​ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪರಮೇಶ್ವರ್​, ರಾಜ್ಯ ರಾಜಕಾರಣದ ಬಗ್ಗೆ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಬಳಿ ಚರ್ಚೆ ಮಾಡಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್‌ಗೆ ನೆಲೆ ಇದೆ, […]

ನನ್ನ-ಸಿದ್ದು ಮಧ್ಯೆ ಶತ್ರುತ್ವ ಇಲ್ಲ, ಅಭಿಪ್ರಾಯಗಳ ಭೇದವಷ್ಟೇ: ಪರಮೇಶ್ವರ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 19, 2019 | 4:00 PM

Share

ಬೆಂಗಳೂರು: ಸಿದ್ದರಾಮಯ್ಯ, ನನ್ನ ಮಧ್ಯೆ ಶತ್ರುತ್ವ ಇದೆ ಎಂದು ಬಿಂಬಿಸೋದು ಸರಿಯಲ್ಲ. ಯಾರೋ ಬೇಕಂತಲೇ ಇದನ್ನು ಮಾಡ್ತಿದ್ದಾರೆ. ರಾಜ್ಯದಲ್ಲಿ ನಾನು, ಸಿದ್ದರಾಮಯ್ಯ ಚೆನ್ನಾಗಿದ್ರೆ ಕಾಂಗ್ರೆಸ್ ಬಲಿಷ್ಠವಾಗುತ್ತೆ. ನನ್ನ, ಅವರ ಅಭಿಪ್ರಾಯಗಳು ಬೇರೆ ಬೇರೆ ಇರಬಹುದು, ಅದನ್ನ ಸಿದ್ದರಾಮಯ್ಯ ಜತೆಗಿನ ಶತ್ರುತ್ವ ಎನ್ನಲು ಆಗಲ್ಲ ಎಂದು ಮಾಜಿ ಡಿಸಿಎಂ ಜಿ.ಪರಮೇಶ್ವರ್​ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪರಮೇಶ್ವರ್​, ರಾಜ್ಯ ರಾಜಕಾರಣದ ಬಗ್ಗೆ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಬಳಿ ಚರ್ಚೆ ಮಾಡಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್‌ಗೆ ನೆಲೆ ಇದೆ, ಕಾಂಗ್ರೆಸ್ ಪಕ್ಷವನ್ನು ಕಟ್ಟಬೇಕೆಂಬ ಬಗ್ಗೆ ಚರ್ಚೆ ಮಾಡಿದ್ದೇನೆ. ಪ್ರತಿಪಕ್ಷ ಸ್ಥಾನದ ಬಗ್ಗೆಯೂ ನಾವು ಚರ್ಚೆ ಮಾಡಿದ್ದೇವೆ. ಡಿಸೆಂಬರ್​ನಲ್ಲಿ ಚುನಾವಣೆ ಮಾಡ್ತಾರೆ ಎಂಬ ಮಾಹಿತಿ ಇದೆ‌‌ ಈ ಬಗ್ಗೆಯೂ ಸೋನಿಯಾ ಗಾಂಧಿಗೆ ಬಳಿ ಮಾತನಾಡಿದ್ದೇನೆ ಎಂದರು.

ನಾನೇನೂ ಚಾಡಿ ಹೇಳಿಲ್ಲ, ಅದು ನನ್ನ ಜಾಯಮಾನ ಅಲ್ಲ: ಸೋನಿಯಾ ಗಾಂಧಿ ಭೇಟಿಗೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಅಪಾಯಿಂಟ್ಮೆಂಟ್ ಸಿಗಲಿಲ್ಲ ಎನ್ನುವುದು ಸರಿಯಿಲ್ಲ. ನನಗೂ ಅನೇಕ ಬಾರಿ ಅಪಾಯಿಂಟ್ಮೆಂಟ್ ಸಿಕ್ಕಿಲ್ಲ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಕಿಲ್ಲ ಎಂದರು. ಪಕ್ಷದಲ್ಲಿ ಮೂಲ ಮತ್ತು ವಲಸೆ ಕಾಂಗ್ರೆಸ್ಸಿಗರು ಎಂದು ಇಲ್ಲ, ನಮ್ಮ ಸಿದ್ಧಾಂತ ಒಪ್ಪಿ ಅವರು ನಮ್ಮ ಪಕ್ಷಕ್ಕೆ ಬಂದ ಮೇಲೆ ಅವರು ಹೊರಗಿನಿಂದ ಬಂದವರು ಎಂದು ಎನಿಸಿಕೊಳ್ಳಲ್ಲ. ನನಗೆ ಒಬ್ಬರ ಬಗ್ಗೆ ಚಾಡಿ ಹೇಳೋ ಅಭ್ಯಾಸ ಇಲ್ಲ. ಇದು ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ಗೊತ್ತು ಅಂತ ಪರಮೇಶ್ವರ್ ಹೇಳಿದರು.

ಸಿಎಲ್​ಪಿ ಸಭೆ ಇರೋದು ನನಗೆ ಗೊತ್ತಿರಲಿಲ್ಲ: ಕಾಂಗ್ರೆಸ್​ ಶಾಸಕಾಂಗ ಪಕ್ಷದ(ಸಿಎಲ್​ಪಿ) ಸಭೆ ಇರೋದು ನನಗೆ ಗೊತ್ತಿರಲಿಲ್ಲ. ಮೊನ್ನೆ ನನಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕರೆ ಮಾಡಿ ಹೇಳಿದ್ರು. ಅದರೆ ನಾನು ದೆಹಲಿಯಲ್ಲಿದ್ದ ಕಾರಣ ಸಭೆಗೆ ಬರೋಕೆ ಆಗಲ್ಲ ಅಂತ ಹೇಳಿದ್ದೇನೆ. ಒಬ್ಬರನ್ನ ದೂರ ಇಟ್ಟು ಪಕ್ಷ ಕಟ್ತೀನಿ ಅಂದ್ರೆ ಆಗೋದಿಲ್ಲ.‌ ಒಬ್ಬೊಬ್ಬರಿಗೆ ಒಂದೊಂದು ಶಕ್ತಿ ಇರುತ್ತೆ. ಸಾಮೂಹಿಕ ನಾಯಕತ್ವದಲ್ಲಿ ಕೆಲಸ ಮಾಡಬೇಕು ಅಂತ ಪರಮೇಶ್ವರ್​ ಹೇಳಿದರು.

Published On - 3:38 pm, Thu, 19 September 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ