AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮತ್ತೆ ಲಾಕ್​ಡೌನ್ ಮಾಡುವ ಪ್ರಸ್ತಾಪ ಇಲ್ಲವೇ ಇಲ್ಲ

[lazy-load-videos-and-sticky-control id=”iXKOaun-T7Y”] ಬೆಂಗಳೂರು: ದೇಶದಲ್ಲಿ ಮಹಾಮಾರಿ ಕೊರೊನಾ ಸ್ಫೋಟ ಕಡಿಮೆಯಾಗಿಲ್ಲ. ದಿನದಿಂದ ದಿನಕ್ಕೆ ಕೊರೊನಾ ತೀವ್ರತೆ ಹೆಚ್ಚಾಗಿದೆ. ಕಳೆದ ಬಾರಿ ಕೈಗೊಂಡಿದ್ದ ಲಾಕ್​ಡೌನ್ ಕ್ರಮದಿಂದಾಗಿ ಸೋಂಕಿನ ಹರಡುವಿಕೆ ಕೊಂಚ ನಿಧಾನವಾಗಿತ್ತು. ಆದರೆ ದೇಶದ ಆರ್ಥಿಕ ಪರಿಸ್ಥಿತಿಯ ಕುಂಠಿತದಿಂದಾಗಿ  ಲಾಕ್​​ಡೌನ್ ಕ್ರಮ ಕೈ ಬಿಡಲಾಗಿತ್ತು. ಮತ್ತೆ ಲಾಕ್ ಡೌನ್ ಸೂತ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದರು. ಆದರೆ ಈಗ ಕರ್ನಾಟಕದಲ್ಲಿ ಮತ್ತೆ ಲಾಕ್​ಡೌನ್ ಮಾಡುವ ಪ್ರಸ್ತಾಪ ಖಡಾಖಂಡಿತವಾಗಿ ಇಲ್ಲ ಎಂದು ಮೂಲಗಳು ತಿಳಿಸಿವೆ. ಕರ್ನಾಟಕದಲ್ಲಿ ಯಾವುದೇ […]

ಕರ್ನಾಟಕದಲ್ಲಿ ಮತ್ತೆ ಲಾಕ್​ಡೌನ್ ಮಾಡುವ ಪ್ರಸ್ತಾಪ ಇಲ್ಲವೇ ಇಲ್ಲ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Sep 24, 2020 | 1:09 PM

Share

[lazy-load-videos-and-sticky-control id=”iXKOaun-T7Y”]

ಬೆಂಗಳೂರು: ದೇಶದಲ್ಲಿ ಮಹಾಮಾರಿ ಕೊರೊನಾ ಸ್ಫೋಟ ಕಡಿಮೆಯಾಗಿಲ್ಲ. ದಿನದಿಂದ ದಿನಕ್ಕೆ ಕೊರೊನಾ ತೀವ್ರತೆ ಹೆಚ್ಚಾಗಿದೆ. ಕಳೆದ ಬಾರಿ ಕೈಗೊಂಡಿದ್ದ ಲಾಕ್​ಡೌನ್ ಕ್ರಮದಿಂದಾಗಿ ಸೋಂಕಿನ ಹರಡುವಿಕೆ ಕೊಂಚ ನಿಧಾನವಾಗಿತ್ತು. ಆದರೆ ದೇಶದ ಆರ್ಥಿಕ ಪರಿಸ್ಥಿತಿಯ ಕುಂಠಿತದಿಂದಾಗಿ  ಲಾಕ್​​ಡೌನ್ ಕ್ರಮ ಕೈ ಬಿಡಲಾಗಿತ್ತು. ಮತ್ತೆ ಲಾಕ್ ಡೌನ್ ಸೂತ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದರು. ಆದರೆ ಈಗ ಕರ್ನಾಟಕದಲ್ಲಿ ಮತ್ತೆ ಲಾಕ್​ಡೌನ್ ಮಾಡುವ ಪ್ರಸ್ತಾಪ ಖಡಾಖಂಡಿತವಾಗಿ ಇಲ್ಲ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದಲ್ಲಿ ಯಾವುದೇ ಲಾಕ್​ಡೌನ್ ಇರುವುದಿಲ್ಲ. ಲಾಕ್​ಡೌನ್​ ಕಡ್ಡಾಯ ಎಂದು ಪ್ರಧಾನಿ ಮೋದಿ ಹೇಳಿಲ್ಲ. ಹೀಗಾಗಿ ಲಾಕ್​ಡೌನ್ ಮಾಡುವ​ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ಮಾಡಿಲ್ಲ. ಆದ್ರೆ ಪ್ರಧಾನಿ-ಸಿಎಂಗಳ ಸಭೆಯಲ್ಲಿ ಲೋಕಲ್​ ಲಾಕ್​​ಡೌನ್ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪಿಸಿದ್ರು. ಪರಿಸ್ಥಿತಿ ನೋಡಿಕೊಂಡು ಲೌಕ್‌ಡೌನ್ ಬಗ್ಗೆ ಚಿಂತನೆ ಮಾಡಿ ಎಂದಿದ್ದರು. ವಾರದಲ್ಲಿ ಒಂದೆರಡು ದಿನ ಲಾಕ್‌ಡೌನ್ ಬಗ್ಗೆ ಯೋಚಿಸಿ. ಅತಿ ಹೆಚ್ಚು ಕೊರೊನಾ ಕೇಸ್ ಇದ್ದರೆ ಲಾಕ್‌ಡೌನ್ ಅಗತ್ಯ.

ಮೈಕ್ರೋ ಕಂಟೇನ್‌ಮೆಂಟ್ ಜೋನ್‌ನಲ್ಲಿ ಅಗತ್ಯಬಿದ್ದರೆ ಮಾತ್ರ ಸೀಲ್‌ಡೌನ್ ಮಾಡುವಂತೆ ಸೂಚನೆ ನೀಡಿದ್ರು. ಆದ್ರೆ ಆರ್ಥಿಕ ಚಟುವಟಿಕೆಗೆ ಹಿನ್ನಡೆಯಾಗದಂತೆ ನೋಡಿಕೊಳ್ಳಿ. ಅಗತ್ಯಕ್ಕೆ ತಕ್ಕಂತೆ ಕ್ರಮಕೈಗೊಳ್ಳುವಂತೆ ಪ್ರಧಾನಿ ತಿಳಿಸಿದ್ರು. ಆದರೆ ಪ್ರಧಾನಿ ಕಡ್ಡಾಯವಾಗಿ ಲಾಕ್‌ಡೌನ್ ಮಾಡುವಂತೆ ಮೋದಿ ಸೂಚಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಲಾಕ್​ಡೌನ್ ಸೂತ್ರವನ್ನು ಕೈಬಿಡುವ ಸಾಧ್ಯತೆ ಇದೆ. ಇನ್ನು ಮುಂದೆ ಲಾಕ್​ಡೌನ್ ಮಾಡದಿರಲು ಚಿಂತಿಸಿದೆ ಎನ್ನಲಾಗುತ್ತಿದೆ. ಹಾಗೂ ಪ್ರಧಾನಿ ಸಲಹೆ ಜಾರಿಗೊಳಿಸೋದು ರಾಜ್ಯ ಸರ್ಕಾರಕ್ಕೆ ಬಿಟ್ಟಿದ್ದು.

ಅಲ್ಲದೆ ಮುಂದಿನ 6 ತಿಂಗಳು ರಾಜ್ಯದ ಪರಿಸ್ಥಿತಿಯನ್ನು ನಿಭಾಯಿಸುವುದು ಸವಾಲಿನಿಂದ ಕೂಡಿದೆ. ಕೊರೊನಾ ಸೋಂಕು ನಿಯಂತ್ರಿಸಲು ರಾಜ್ಯಗಳಿಂದ ಕಠಿಣ ಕ್ರಮ ಕೈಗೊಳ್ಳಬೇಕಿದೆ. ಪರೀಕ್ಷೆ ಪ್ರಮಾಣ 3 ಪಟ್ಟು ಹೆಚ್ಚಿಸಲು ರಾಜ್ಯಗಳಿಗೆ ಪಿಎಂ ಸಲಹೆ ನೀಡಿದ್ದಾರೆ. ಱಪಿಡ್‌ ಟೆಸ್ಟ್‌ ಜೊತೆ RT-PCR ಪರೀಕ್ಷೆ ಹೆಚ್ಚಿಸುವಂತೆ ತಿಳಿಸಿದ್ದಾರೆ. ಸೋಂಕಿತರ ಸಂಖ್ಯೆ, ಸಾವಿನ ಸಂಖ್ಯೆ ನಿಯಂತ್ರಿಸುವಂತೆ ಸೂಚಿಸಿದ್ದಾರೆ.

Published On - 9:34 am, Thu, 24 September 20

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ