AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ ತೃತೀಯಾದ ದಿನ ಚಿನ್ನ ಖರೀದಿ ಮಾಡಬೇಕು ಅಂತಾ ಹಿಂದೂ ಧರ್ಮದಲ್ಲಿ ಉಲ್ಲೇಖ ಇಲ್ಲ -ಡಾ ಶೆಲ್ವ ಪಿಳೈ ಅಯ್ಯಂಗಾರ್

ಅಕ್ಷಯ ತೃತೀಯಾ ಪವಿತ್ರವಾದ ದಿನ. ಹಿಂದೆ ಇದನ್ನು ಯುಗಾದಿಯಾಗಿ ಆಚರಿಸಲಾಗುತ್ತಿತ್ತು. ಹಿಂದೆ ಅಕ್ಷಯ ತೃತೀಯಾದ ದಿನ ಹಲವು ಮಹತ್ವದ ಘಟನೆಗಳು ನಡೆದಿವೆ. ಪರಶುರಾಮರು ಹುಟ್ಟಿದ ದಿನ. ಮಹಾಭಾರತ ಬರೆಯಲು ಆರಂಭಿಸಿದ ದಿನ. -ಧಾರ್ಮಿಕ ಚಿಂತಕ ಡಾ ಶೆಲ್ವ ಪಿಳೈ ಅಯ್ಯಂಗಾರ್

ಅಕ್ಷಯ ತೃತೀಯಾದ ದಿನ ಚಿನ್ನ ಖರೀದಿ ಮಾಡಬೇಕು ಅಂತಾ ಹಿಂದೂ ಧರ್ಮದಲ್ಲಿ ಉಲ್ಲೇಖ ಇಲ್ಲ -ಡಾ ಶೆಲ್ವ ಪಿಳೈ ಅಯ್ಯಂಗಾರ್
ಡಾ ಶೆಲ್ವ ಪಿಳೈ ಅಯ್ಯಂಗಾರ್
TV9 Web
| Updated By: ಆಯೇಷಾ ಬಾನು|

Updated on:Apr 25, 2022 | 8:31 AM

Share

ಮೈಸೂರು: ಅಕ್ಷಯ ತೃತೀಯಾದ ದಿನ ಚಿನ್ನ ಖರೀದಿ ಮಾಡಬೇಕು ಅಂತಾ ಹಿಂದೂ ಧರ್ಮದಲ್ಲಿ ಉಲ್ಲೇಖ ಇಲ್ಲ. ಅಕ್ಷಯ ತೃತೀಯಾದ ದಿನ ಚಿನ್ನ ಖರೀದಿ ಮಾಡುವುದರಿಂದ ಯಾವುದೇ ವಿಶೇಷ ಫಲ ಸಿಗುವುದಿಲ್ಲ. ಇದು ವ್ಯಾಪಾರಿಗಳು ವ್ಯಾಪಾರಕ್ಕಾಗಿ ಹೇಳುವ ಮಾತು ಅಷ್ಟೆ ಎಂದು ಟಿವಿ9ಗೆ ಧಾರ್ಮಿಕ ಚಿಂತಕ ಡಾ ಶೆಲ್ವ ಪಿಳೈ ಅಯ್ಯಂಗಾರ್ ತಿಳಿಸಿದ್ದಾರೆ.

ಅಕ್ಷಯ ತೃತೀಯಾ ಪವಿತ್ರವಾದ ದಿನ. ಹಿಂದೆ ಇದನ್ನು ಯುಗಾದಿಯಾಗಿ ಆಚರಿಸಲಾಗುತ್ತಿತ್ತು. ಹಿಂದೆ ಅಕ್ಷಯ ತೃತೀಯಾದ ದಿನ ಹಲವು ಮಹತ್ವದ ಘಟನೆಗಳು ನಡೆದಿವೆ. ಪರಶುರಾಮರು ಹುಟ್ಟಿದ ದಿನ. ಮಹಾಭಾರತ ಬರೆಯಲು ಆರಂಭಿಸಿದ ದಿನ. ಸುಧಾಮ ಕೃಷ್ಣನನ್ನು ಭೇಟಿ ಮಾಡಿ ಅಕ್ಷಯ ಪಡೆದ ದಿನ. ಇದರಂತೆ ಜೈನ ಹಾಗೂ ಬುಡಕಟ್ಟು ಜನರಿಗೂ ಪವಿತ್ರ ದಿನ. ಆದರೆ ಚಿನ್ನವನ್ನು ಖರೀದಿ ಮಾಡಲೇಬೇಕು ಅಂತಾ ಎಲ್ಲೂ ಇಲ್ಲ. ಅಕ್ಷಯ ತೃತೀಯಾ ದಿನ ಚಿನ್ನವನ್ನೇ ಖರೀದಿ ಮಾಡುವಂತಿಲ್ಲ. ಹೀಗಿರುವಾಗ ಯಾವ ಧರ್ಮದ ಅಂಗಡಿ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ಚಿನ್ನ ನಮ್ಮ ದೇಶದಲ್ಲಿ ಸಿಗುವುದೇ ಇಲ್ಲ. ಬೇರೆ ದೇಶದ ಬೇರೆ ಧರ್ಮದವರಿಂದಲೇ ಚಿನ್ನ ನಮ್ಮ ದೇಶಕ್ಕೆ ಬರುವುದು. ನಮ್ಮದು ದಾನ ಮಾಡುವ ಸಂಸ್ಕೃತಿ. ಕೊಂಡುಬಾಕ ಸಂಸ್ಕೃತಿ ನಮ್ಮದಲ್ಲ. ಅಕ್ಷಯ ತೃತೀಯಾ ದಿನ ದಾನ ಧರ್ಮ ಮಾಡಬೇಕು. ಅದು ಪುಣ್ಯವನ್ನು ತಂದು ಕೊಡುತ್ತದೆ ಎಂದು ಡಾ ಶೆಲ್ವ ಪಿಳ್ಳೈ ಅಯ್ಯಂಗಾರ್ ಮಾಹಿತಿ ನೀಡಿದ್ದಾರೆ.

ಮುಸ್ಲಿಂ ಜ್ಯುವೆಲರಿಗಳಲ್ಲಿ ವ್ಯಾಪಾರ ಮಾಡದಂತೆ ಕ್ಯಾಂಪೇನ್! ಅಕ್ಷಯ ತೃತೀಯ ಹಬ್ಬಕ್ಕೂ ಧರ್ಮ ಸಂಘರ್ಷದ ಕಾಡ್ಗಿಚ್ಚು ವ್ಯಾಪಿಸಿದೆ. ರಾಜ್ಯಾದ್ಯಂತ ಮುಸ್ಲಿಮರ ಅಂಗಡಿಗಳಲ್ಲಿ ಬಂಗಾರ ಖರಿದಿಸ್ಬೇಡಿ, ಹಿಂದೂಗಳ ಅಂಗಡಿಗಳಲ್ಲೇ ಚಿನ್ನ ಖರೀದಿಸಿ ಅಂತಾ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅಭಿಯಾನ ಶುರು ಮಾಡಿದ್ದಾರೆ. ಅಷ್ಟೇ ಅಲ್ಲ ಮುಸ್ಲಿಮರ ಅಂಗಡಿಗಳಲ್ಲಿ ಚಿನ್ನ ಖರೀದಿಸಿದ್ರೆ, ಆ ಹಣ ಕೇರಳದ ಮುಸ್ಲಿಂ ಸಂಘಟನೆಗಳಿಗೆ ಹೋಗುತ್ತೆ ಅಂತಾ ಕಿಡಿಕಾರಿದ್ದಾರೆ.

ಇದನ್ನೂ ಓದಿ: ನಮಗೆ ತೊಂದರೆಯಾಗುತ್ತಿದೆ, ಆಕ್ರಮಣವನ್ನು ಯಾವ ಕಾರಣಕ್ಕೂ ಸಹಿಸುವುದಿಲ್ಲ: ಪಾಕಿಸ್ತಾನಕ್ಕೆ ಖಡಕ್​ ಎಚ್ಚರಿಕೆ ನೀಡಿದ ತಾಲಿಬಾನ್​

Best Smartphone: ಭರ್ಜರಿ ಸೇಲ್ ಕಾಣುತ್ತಿದೆ 20,000 ರೂ. ಒಳಗಿನ ಈ ಹೊಸ 4 ಸ್ಮಾರ್ಟ್​​ಫೋನ್​ಗಳು

Published On - 8:31 am, Mon, 25 April 22

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ