AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ ತೃತೀಯಾದ ದಿನ ಚಿನ್ನ ಖರೀದಿ ಮಾಡಬೇಕು ಅಂತಾ ಹಿಂದೂ ಧರ್ಮದಲ್ಲಿ ಉಲ್ಲೇಖ ಇಲ್ಲ -ಡಾ ಶೆಲ್ವ ಪಿಳೈ ಅಯ್ಯಂಗಾರ್

ಅಕ್ಷಯ ತೃತೀಯಾ ಪವಿತ್ರವಾದ ದಿನ. ಹಿಂದೆ ಇದನ್ನು ಯುಗಾದಿಯಾಗಿ ಆಚರಿಸಲಾಗುತ್ತಿತ್ತು. ಹಿಂದೆ ಅಕ್ಷಯ ತೃತೀಯಾದ ದಿನ ಹಲವು ಮಹತ್ವದ ಘಟನೆಗಳು ನಡೆದಿವೆ. ಪರಶುರಾಮರು ಹುಟ್ಟಿದ ದಿನ. ಮಹಾಭಾರತ ಬರೆಯಲು ಆರಂಭಿಸಿದ ದಿನ. -ಧಾರ್ಮಿಕ ಚಿಂತಕ ಡಾ ಶೆಲ್ವ ಪಿಳೈ ಅಯ್ಯಂಗಾರ್

ಅಕ್ಷಯ ತೃತೀಯಾದ ದಿನ ಚಿನ್ನ ಖರೀದಿ ಮಾಡಬೇಕು ಅಂತಾ ಹಿಂದೂ ಧರ್ಮದಲ್ಲಿ ಉಲ್ಲೇಖ ಇಲ್ಲ -ಡಾ ಶೆಲ್ವ ಪಿಳೈ ಅಯ್ಯಂಗಾರ್
ಡಾ ಶೆಲ್ವ ಪಿಳೈ ಅಯ್ಯಂಗಾರ್
Follow us
TV9 Web
| Updated By: ಆಯೇಷಾ ಬಾನು

Updated on:Apr 25, 2022 | 8:31 AM

ಮೈಸೂರು: ಅಕ್ಷಯ ತೃತೀಯಾದ ದಿನ ಚಿನ್ನ ಖರೀದಿ ಮಾಡಬೇಕು ಅಂತಾ ಹಿಂದೂ ಧರ್ಮದಲ್ಲಿ ಉಲ್ಲೇಖ ಇಲ್ಲ. ಅಕ್ಷಯ ತೃತೀಯಾದ ದಿನ ಚಿನ್ನ ಖರೀದಿ ಮಾಡುವುದರಿಂದ ಯಾವುದೇ ವಿಶೇಷ ಫಲ ಸಿಗುವುದಿಲ್ಲ. ಇದು ವ್ಯಾಪಾರಿಗಳು ವ್ಯಾಪಾರಕ್ಕಾಗಿ ಹೇಳುವ ಮಾತು ಅಷ್ಟೆ ಎಂದು ಟಿವಿ9ಗೆ ಧಾರ್ಮಿಕ ಚಿಂತಕ ಡಾ ಶೆಲ್ವ ಪಿಳೈ ಅಯ್ಯಂಗಾರ್ ತಿಳಿಸಿದ್ದಾರೆ.

ಅಕ್ಷಯ ತೃತೀಯಾ ಪವಿತ್ರವಾದ ದಿನ. ಹಿಂದೆ ಇದನ್ನು ಯುಗಾದಿಯಾಗಿ ಆಚರಿಸಲಾಗುತ್ತಿತ್ತು. ಹಿಂದೆ ಅಕ್ಷಯ ತೃತೀಯಾದ ದಿನ ಹಲವು ಮಹತ್ವದ ಘಟನೆಗಳು ನಡೆದಿವೆ. ಪರಶುರಾಮರು ಹುಟ್ಟಿದ ದಿನ. ಮಹಾಭಾರತ ಬರೆಯಲು ಆರಂಭಿಸಿದ ದಿನ. ಸುಧಾಮ ಕೃಷ್ಣನನ್ನು ಭೇಟಿ ಮಾಡಿ ಅಕ್ಷಯ ಪಡೆದ ದಿನ. ಇದರಂತೆ ಜೈನ ಹಾಗೂ ಬುಡಕಟ್ಟು ಜನರಿಗೂ ಪವಿತ್ರ ದಿನ. ಆದರೆ ಚಿನ್ನವನ್ನು ಖರೀದಿ ಮಾಡಲೇಬೇಕು ಅಂತಾ ಎಲ್ಲೂ ಇಲ್ಲ. ಅಕ್ಷಯ ತೃತೀಯಾ ದಿನ ಚಿನ್ನವನ್ನೇ ಖರೀದಿ ಮಾಡುವಂತಿಲ್ಲ. ಹೀಗಿರುವಾಗ ಯಾವ ಧರ್ಮದ ಅಂಗಡಿ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ಚಿನ್ನ ನಮ್ಮ ದೇಶದಲ್ಲಿ ಸಿಗುವುದೇ ಇಲ್ಲ. ಬೇರೆ ದೇಶದ ಬೇರೆ ಧರ್ಮದವರಿಂದಲೇ ಚಿನ್ನ ನಮ್ಮ ದೇಶಕ್ಕೆ ಬರುವುದು. ನಮ್ಮದು ದಾನ ಮಾಡುವ ಸಂಸ್ಕೃತಿ. ಕೊಂಡುಬಾಕ ಸಂಸ್ಕೃತಿ ನಮ್ಮದಲ್ಲ. ಅಕ್ಷಯ ತೃತೀಯಾ ದಿನ ದಾನ ಧರ್ಮ ಮಾಡಬೇಕು. ಅದು ಪುಣ್ಯವನ್ನು ತಂದು ಕೊಡುತ್ತದೆ ಎಂದು ಡಾ ಶೆಲ್ವ ಪಿಳ್ಳೈ ಅಯ್ಯಂಗಾರ್ ಮಾಹಿತಿ ನೀಡಿದ್ದಾರೆ.

ಮುಸ್ಲಿಂ ಜ್ಯುವೆಲರಿಗಳಲ್ಲಿ ವ್ಯಾಪಾರ ಮಾಡದಂತೆ ಕ್ಯಾಂಪೇನ್! ಅಕ್ಷಯ ತೃತೀಯ ಹಬ್ಬಕ್ಕೂ ಧರ್ಮ ಸಂಘರ್ಷದ ಕಾಡ್ಗಿಚ್ಚು ವ್ಯಾಪಿಸಿದೆ. ರಾಜ್ಯಾದ್ಯಂತ ಮುಸ್ಲಿಮರ ಅಂಗಡಿಗಳಲ್ಲಿ ಬಂಗಾರ ಖರಿದಿಸ್ಬೇಡಿ, ಹಿಂದೂಗಳ ಅಂಗಡಿಗಳಲ್ಲೇ ಚಿನ್ನ ಖರೀದಿಸಿ ಅಂತಾ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅಭಿಯಾನ ಶುರು ಮಾಡಿದ್ದಾರೆ. ಅಷ್ಟೇ ಅಲ್ಲ ಮುಸ್ಲಿಮರ ಅಂಗಡಿಗಳಲ್ಲಿ ಚಿನ್ನ ಖರೀದಿಸಿದ್ರೆ, ಆ ಹಣ ಕೇರಳದ ಮುಸ್ಲಿಂ ಸಂಘಟನೆಗಳಿಗೆ ಹೋಗುತ್ತೆ ಅಂತಾ ಕಿಡಿಕಾರಿದ್ದಾರೆ.

ಇದನ್ನೂ ಓದಿ: ನಮಗೆ ತೊಂದರೆಯಾಗುತ್ತಿದೆ, ಆಕ್ರಮಣವನ್ನು ಯಾವ ಕಾರಣಕ್ಕೂ ಸಹಿಸುವುದಿಲ್ಲ: ಪಾಕಿಸ್ತಾನಕ್ಕೆ ಖಡಕ್​ ಎಚ್ಚರಿಕೆ ನೀಡಿದ ತಾಲಿಬಾನ್​

Best Smartphone: ಭರ್ಜರಿ ಸೇಲ್ ಕಾಣುತ್ತಿದೆ 20,000 ರೂ. ಒಳಗಿನ ಈ ಹೊಸ 4 ಸ್ಮಾರ್ಟ್​​ಫೋನ್​ಗಳು

Published On - 8:31 am, Mon, 25 April 22

ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ