AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಪ್ಯಾರಸಿಟಮಾಲ್ ಮಾತ್ರೆ ಕೊರತೆ ಇಲ್ಲ; ಕೆಎಸ್‌ಎಂಎಸ್‌ಸಿಎಲ್ ಸ್ಪಷ್ಟನೆ

ರಾಜ್ಯದಲ್ಲಿ ಡೆಂಗ್ಯೂ ಆತಂಕದ ನಡುವೆಯೇ ಪ್ಯಾರಸಿಟಮಾಲ್ ಮಾತ್ರೆ ಕೊರತೆ ಇದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಸದ್ಯ ಈ ಬಗ್ಗೆ KSMSCL ಉತ್ತರಿಸಿದ್ದು ಪ್ಯಾರಸಿಟಮಾಲ್ ಕೊರತೆ ಇಲ್ಲ ಎಂದು ಸ್ಪಷ್ಟನೆ ನೀಡಿದೆ. ಪ್ರಸಕ್ತ ವರ್ಷ ರಾಜ್ಯಕ್ಕೆ ಬೇಕಾಗುವಷ್ಟು ಮಾತ್ರ ಇದೆ ಎಂದು ಮಾಹಿತಿ ನೀಡಿದೆ.

ರಾಜ್ಯದಲ್ಲಿ ಪ್ಯಾರಸಿಟಮಾಲ್ ಮಾತ್ರೆ ಕೊರತೆ ಇಲ್ಲ; ಕೆಎಸ್‌ಎಂಎಸ್‌ಸಿಎಲ್ ಸ್ಪಷ್ಟನೆ
ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ
Vinay Kashappanavar
| Edited By: ಆಯೇಷಾ ಬಾನು|

Updated on:Jul 07, 2024 | 7:47 AM

Share

ಬೆಂಗಳೂರು, ಜುಲೈ.07: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಕಾಣುತ್ತಿದೆ. ಇದರ ನಡುವೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ, (ಕೆಎಸ್‌ಎಂಎಸ್‌ಸಿಎಲ್) ರೋಗಿಗಳಿಗೆ ನೀಡಲಾಗುವ ಪ್ಯಾರಸಿಟಮಾಲ್ ಮಾತ್ರೆ (Paracetamol Tablets) ದಾಸ್ತಾನು ಮಾಡಿಕೊಂಡಿಲ್ಲ. ಇದರಿಂದ ಸರಕಾರಿ ಆಸ್ಪತ್ರೆಗಳಲ್ಲಿ ಪ್ಯಾರಸಿಟಮಾಲ್‌ ಕೊರತೆ ಉಂಟಾಗಿದೆ ಎಂಬ ಮಾತು ಕೇಳಿ ಬಂದಿತ್ತು. ಸದ್ಯ ಈಗ ಕೆಎಸ್‌ಎಂಎಸ್‌ಸಿಎಲ್ (KSMSCL )ಪ್ರತಿಕ್ರಿಯೆ ನೀಡಿದ್ದು ರಾಜ್ಯದಲ್ಲಿ ಪ್ಯಾರಸಿಟಮಾಲ್ ಮಾತ್ರೆ ಕೊರತೆ ಇಲ್ಲ ಎಂದು ಸ್ಪಷ್ಟನೆ ನೀಡಿದೆ.

ಡೆಂಗ್ಯೂ ಜ್ವರ ಹೆಚ್ಚಳ ಹಿನ್ನೆಲೆ ಪ್ಯಾರಸಿಟಮಾಲ್ ಮಾತ್ರೆ ಕೊರತೆ ಆರೋಪ ಕೇಳಿ ಬಂದಿತ್ತು. KSMSL ಸಂಸ್ಥೆಯು ಅವಶ್ಯಕ ಔಷಧಿಗಳನ್ನು ದಾಸ್ತಾನು ನೀಡಿದೆ. ವಾರ್ಷಿಕ ಬೇಡಿಕೆಯ ಟೆಂಡರ್ ಮಾಡಿ ಅವಶ್ಯಕ ಔಷಧಿ ದಾಸ್ತಾನು ನೀಡಿದೆ. ಆರೋಗ್ಯ ಉಪಕರಣ ಔಷಧ 27 ಉಗ್ರಾಣು ದಾಸ್ತಾನುಗಳಿಗೆ ತಲುಪಿಸಿದೆ. 2023-24ನೇ ಸಾಲಿನಲ್ಲಿ ರಾಜ್ಯದಲ್ಲಿ ಪ್ಯಾರಸಿಟಮಾಲ್ 650 ಎಂಜಿಗೆ ವಾರ್ಷಿಕ ಬೇಡಿಕೆ ಪ್ರಮಾಣ 8,72,20,40 ಮಾತ್ರೆಗಳಿಗೆ ಬಂದಿದ್ದು, 8.27 ಕೋಟಿ ಮೌಲ್ಯದ ಪ್ಯಾರಸಿಟಮಾಲ್ 650MG ಖರೀದಿಸಲಾಗಿದೆ. ಪ್ರಸ್ತುತ ಈ ಔಷಧವು ಎಲ್ಲಾ ಉಗ್ರಾಣಗಳಿಗೆ ಸರಬರಾಜು ಆಗಿದೆ. 2024 ಜು.4ರ ವೇಳೆಗೆ 3.7 ಕೋಟಿ ಮೌಲ್ಯದ ಮಾತ್ರೆಗಳು ಲಭ್ಯತೆ ಇದೆ. ಸದ್ಯ ಆರೋಗ್ಯ ಸಂಸ್ಥೆಗಳಲ್ಲಿ 3.18 ಕೋಟಿ ಮೌಲ್ಯದ ಮಾತ್ರೆಗಳು ಲಭ್ಯ ಇದೆ. ರಾಜ್ಯದ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಮಾತ್ರೆಗಳು ಲಭ್ಯ ಇದೆ ಎಂದು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ತಿಳಿಸಿದೆ.

ಮಕ್ಕಳಿಗೆ ನೀಡಬಹುದಾದ ಪ್ಯಾರಸಿಟಮಾಲ್ ಮಾತ್ರೆ, ಸಿರಪ್ ಕೂಡಾ ಲಭ್ಯವಿದೆ. ಡೆಂಗ್ಯೂ ಚಿಕಿತ್ಸೆಗೆ ಬಳಸುವ (Analgesics, Anti-inflammatory, Anti-emetic, Gastro intestinal medicines & IV fluids) (Dengue Antigen Kits) ಮಾತ್ರೆಗಳು ಲಭ್ಯ ಇರುವಂತೆ ಕ್ರಮವಹಿಸಲಾಗಿದೆ. ಈ ಮೂಲಕ ಔಷಧಿ ಲಭ್ಯತೆ ಬಗ್ಗೆ ಸಾರ್ವಜನಿಕರಿಗೆ ಇಲಾಖೆ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ:  Dengue Fever: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 175 ಜನರಲ್ಲಿ ಡೆಂಗ್ಯೂ ಜ್ವರ ದೃಢ

ಆರೋಗ್ಯ ಇಲಾಖೆಯ ಅಧೀನಕ್ಕೆ ಬರುವ ಕೆಎಸ್‌ಎಂಎಸ್‌ಸಿಎಲ್ ಇಲಾಖೆಯು ಕಂಪನಿಗಳಿಂದ ಔಷಧಿಯನ್ನು ಖರೀದಿಸಿ ಸಾವಿರಾರು ಸರಕಾರಿ ಆಸ್ಪತ್ರೆಗಳಿಗೆ ಉಚಿತವಾಗಿ ಸರಬರಾಜು ಮಾಡುತ್ತದೆ. ಪ್ರತೀ ವರ್ಷ ಸರಕಾರ ನೀಡುವ ನೂರಾರು ಕೋಟಿ ರೂ. ಅನುದಾನ ಬಳಸಿಕೊಂಡು ಬ್ಯಾಂಡೇಜ್ ಕ್ಲಾತ್, ಕಾಟನ್, ಸರ್ಜಿಕಲ್ ಗ್ಲೌಸ್, ಗ್ಲೂಕೋಸ್ ಬಾಟಲ್, ಆ್ಯಂಟಿಬಯೋಟಿಕ್ ಮಾತ್ರೆ ಮತ್ತು ವೈದ್ಯಕೀಯ ಸಲಕರಣೆ ಸಹಿತ 300ಕ್ಕೂ ಅಧಿಕ ಬಗೆಯ ಔಷಧಿಯನ್ನು ಖರೀದಿಸಿ ದಾಸ್ತಾನು ಮಾಡಿಕೊಳ್ಳುತ್ತದೆ. ಸದ್ಯ ಇತ್ತೀಚೆಗೆ ಪ್ಯಾರಸಿಟಮಾಲ್ ಮಾತ್ರೆ ಕೊರತೆ ಇದೆ ಎಂಬ ಮಾತು ಕೇಳಿ ಬಂದಿದ್ದು ಕೆಎಸ್‌ಎಂಎಸ್‌ಸಿಎಲ್ ಸ್ಪಷ್ಟನೆ ನೀಡುವ ಮೂಲಕ ಗೊಂದಲ ಬಗೆಹರಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:44 am, Sun, 7 July 24

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?