AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೇಂದ್ರದ ವಿಶೇಷ ಪ್ಯಾಕೇಜ್​ನಿಂದ​ ಸಕ್ಕೆರೆ ಕಾರ್ಖಾನೆಗಳಿಗೆ ಸಿಹಿ ಸುದ್ದಿ, ಕಬ್ಬು ಬೆಳೆಗಾರರಿಗಲ್ಲ’

ಸರ್ಕಾರ ಬಿಡುಗಡೆ ಮಾಡಿರುವ ಪ್ರೋತ್ಸಾಹಧನದಿಂದ ಈ ರೀತಿ ಸಂಕಷ್ಟಕ್ಕೆ ತುತ್ತಾದ ರೈತರಿಗೆ ಯಾವುದೇ ಸಹಕಾರಿಯಾಗದು ಎನ್ನುವ ಅರ್ಥದಲ್ಲಿ ಶಾಂತಕುಮಾರ್​ ಹೇಳಿದ್ದಾರೆ.

'ಕೇಂದ್ರದ ವಿಶೇಷ ಪ್ಯಾಕೇಜ್​ನಿಂದ​ ಸಕ್ಕೆರೆ ಕಾರ್ಖಾನೆಗಳಿಗೆ ಸಿಹಿ ಸುದ್ದಿ, ಕಬ್ಬು ಬೆಳೆಗಾರರಿಗಲ್ಲ'
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 16, 2020 | 9:31 PM

Share

ನವದೆಹಲಿ: ಕಬ್ಬು ಬೆಳೆಗಾರರಿಗೆ ₹ 3,500 ಕೋಟಿ ಸಬ್ಸಿಡಿ ನೀಡುವುದಾಗಿ ಕೇಂದ್ರ ಸರ್ಕಾರ ಇಂದು ಘೋಷಣೆ ಮಾಡಿದೆ. ಆದರೆ, ಈ ವಿಶೇಷ ಪ್ಯಾಕೇಜ್​ನಿಂದ ಸಕ್ಕರೆ ಕಾರ್ಖಾನೆಗಳಿಗೆ ಸಹಾಯವಾಗಲಿದೆಯೇ ಹೊರತು ಕಬ್ಬು ಬೆಳೆಗಾರರಿಗಲ್ಲ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಕುರುಬೂರು ಶಾಂತಕುಮಾರ್, ಸಕ್ಕರೆ ರಫ್ತು ಮಾಡುವ ಸಕ್ಕರೆ ಕಾರ್ಖಾನೆ ಮಾಲೀಕರಿಗೆ ₹3500 ಕೋಟಿ ರೂಪಾಯಿ ಪ್ರೋತ್ಸಾಹ ಧನ ನೀಡಲು ಕೇಂದ್ರ ಸಚಿವ ಸಂಪುಟ ಸಮ್ಮತಿಸಿದೆ. ಇದು ಸಕ್ಕರೆ ಕಾರ್ಖಾನೆಗಳಿಗೆ ಸಿಹಿ ಸುದ್ದಿಯಾಗಿದೆ. ಇದರಿಂದ ಕಾರ್ಖಾನೆ ಮಾಲೀಕರಿಗೆ ರೈತರ ಬಾಕಿ ಹಣ ತೀರಿಸಲು ಮಾತ್ರ  ನೆರವಾಗುತ್ತದೆ, ಎಂದರು.

ಈಗಾಗಲೇ ಸಾಕಷ್ಟು ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಕಾಲಿಕ ಮಳೆಯಿಂದ, ಕಾಡು ಪ್ರಾಣಿಗಳ ದಾಳಿಯಿಂದ ಕಬ್ಬು ಬೆಳೆ ನಾಶವಾದ ಸಾಕಷ್ಟು ಉದಾಹರಣೆಗಳಿವೆ. ಸರ್ಕಾರ ಬಿಡುಗಡೆ ಮಾಡಿರುವ ಪ್ರೋತ್ಸಾಹಧನದಿಂದ ಈ ರೀತಿ ಸಂಕಷ್ಟಕ್ಕೆ ತುತ್ತಾದ ರೈತರಿಗೆ ಯಾವುದೇ ಸಹಕಾರಿಯಾಗದು ಎನ್ನುವ ಅರ್ಥದಲ್ಲಿ ಶಾಂತಕುಮಾರ್​ ಹೇಳಿದ್ದಾರೆ.

ಉತ್ತರ ಪ್ರದೇಶಕ್ಕೆ ಹೆಚ್ಚು ಹಣ? ದೇಶದ ನಾನಾ ರಾಜ್ಯಗಳಲ್ಲಿ ಕಬ್ಬನ್ನು ಬೆಳೆಯುತ್ತಾರೆ. ಕರ್ನಾಟಕದಲ್ಲೂ ಕಬ್ಬು ಬೆಳೆ ಅಧಿಕವಾಗಿದೆ. ಆದರೆ, ಈ ಪ್ರೋತ್ಸಾಹ ಧನದಲ್ಲಿ  ಹೆಚ್ಚುಪಾಲು ಉತ್ತರ ಪ್ರದೇಶಕ್ಕೆ ಬಿಡುಗಡೆ ಆಗಿದೆ ಎಂದು ಕುರುಬೂರು ಶಾಂತಕುಮಾರ್​ರಿಂದ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಡೇಕರ್ ಹೇಳಿದ್ದೇನು? ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಕೇಂದ್ರ ಸಚಿವ ಪ್ರಕಾಶ್​ ಜಾವಡೇಕರ್, ’60 ಲಕ್ಷ ಟನ್ ಸಕ್ಕರೆ ರಫ್ತು ಮಾಡಲಾಗುವುದು. ಕೇಂದ್ರ ಸರ್ಕಾರದ ಈ ನಿರ್ಧಾರದಿಂದ 5 ಕೋಟಿ ಕಬ್ಬು ಬೆಳೆಗಾರರಿಗೆ ಲಾಭವಾಗಲಿದ್ದು, ಈ ಸಬ್ಸಿಡಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಆಗುತ್ತದೆ’ ಎಂದು ಹೇಳಿದ್ದರು.

ಕಬ್ಬು ಬೆಳೆಗಾರರಿಗೆ ₹3,500 ಕೋಟಿ ಸಬ್ಸಿಡಿ: ಕೇಂದ್ರ ಅನುಮೋದನೆ

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ