AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೇಂದ್ರದ ವಿಶೇಷ ಪ್ಯಾಕೇಜ್​ನಿಂದ​ ಸಕ್ಕೆರೆ ಕಾರ್ಖಾನೆಗಳಿಗೆ ಸಿಹಿ ಸುದ್ದಿ, ಕಬ್ಬು ಬೆಳೆಗಾರರಿಗಲ್ಲ’

ಸರ್ಕಾರ ಬಿಡುಗಡೆ ಮಾಡಿರುವ ಪ್ರೋತ್ಸಾಹಧನದಿಂದ ಈ ರೀತಿ ಸಂಕಷ್ಟಕ್ಕೆ ತುತ್ತಾದ ರೈತರಿಗೆ ಯಾವುದೇ ಸಹಕಾರಿಯಾಗದು ಎನ್ನುವ ಅರ್ಥದಲ್ಲಿ ಶಾಂತಕುಮಾರ್​ ಹೇಳಿದ್ದಾರೆ.

'ಕೇಂದ್ರದ ವಿಶೇಷ ಪ್ಯಾಕೇಜ್​ನಿಂದ​ ಸಕ್ಕೆರೆ ಕಾರ್ಖಾನೆಗಳಿಗೆ ಸಿಹಿ ಸುದ್ದಿ, ಕಬ್ಬು ಬೆಳೆಗಾರರಿಗಲ್ಲ'
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 16, 2020 | 9:31 PM

Share

ನವದೆಹಲಿ: ಕಬ್ಬು ಬೆಳೆಗಾರರಿಗೆ ₹ 3,500 ಕೋಟಿ ಸಬ್ಸಿಡಿ ನೀಡುವುದಾಗಿ ಕೇಂದ್ರ ಸರ್ಕಾರ ಇಂದು ಘೋಷಣೆ ಮಾಡಿದೆ. ಆದರೆ, ಈ ವಿಶೇಷ ಪ್ಯಾಕೇಜ್​ನಿಂದ ಸಕ್ಕರೆ ಕಾರ್ಖಾನೆಗಳಿಗೆ ಸಹಾಯವಾಗಲಿದೆಯೇ ಹೊರತು ಕಬ್ಬು ಬೆಳೆಗಾರರಿಗಲ್ಲ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಕುರುಬೂರು ಶಾಂತಕುಮಾರ್, ಸಕ್ಕರೆ ರಫ್ತು ಮಾಡುವ ಸಕ್ಕರೆ ಕಾರ್ಖಾನೆ ಮಾಲೀಕರಿಗೆ ₹3500 ಕೋಟಿ ರೂಪಾಯಿ ಪ್ರೋತ್ಸಾಹ ಧನ ನೀಡಲು ಕೇಂದ್ರ ಸಚಿವ ಸಂಪುಟ ಸಮ್ಮತಿಸಿದೆ. ಇದು ಸಕ್ಕರೆ ಕಾರ್ಖಾನೆಗಳಿಗೆ ಸಿಹಿ ಸುದ್ದಿಯಾಗಿದೆ. ಇದರಿಂದ ಕಾರ್ಖಾನೆ ಮಾಲೀಕರಿಗೆ ರೈತರ ಬಾಕಿ ಹಣ ತೀರಿಸಲು ಮಾತ್ರ  ನೆರವಾಗುತ್ತದೆ, ಎಂದರು.

ಈಗಾಗಲೇ ಸಾಕಷ್ಟು ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಕಾಲಿಕ ಮಳೆಯಿಂದ, ಕಾಡು ಪ್ರಾಣಿಗಳ ದಾಳಿಯಿಂದ ಕಬ್ಬು ಬೆಳೆ ನಾಶವಾದ ಸಾಕಷ್ಟು ಉದಾಹರಣೆಗಳಿವೆ. ಸರ್ಕಾರ ಬಿಡುಗಡೆ ಮಾಡಿರುವ ಪ್ರೋತ್ಸಾಹಧನದಿಂದ ಈ ರೀತಿ ಸಂಕಷ್ಟಕ್ಕೆ ತುತ್ತಾದ ರೈತರಿಗೆ ಯಾವುದೇ ಸಹಕಾರಿಯಾಗದು ಎನ್ನುವ ಅರ್ಥದಲ್ಲಿ ಶಾಂತಕುಮಾರ್​ ಹೇಳಿದ್ದಾರೆ.

ಉತ್ತರ ಪ್ರದೇಶಕ್ಕೆ ಹೆಚ್ಚು ಹಣ? ದೇಶದ ನಾನಾ ರಾಜ್ಯಗಳಲ್ಲಿ ಕಬ್ಬನ್ನು ಬೆಳೆಯುತ್ತಾರೆ. ಕರ್ನಾಟಕದಲ್ಲೂ ಕಬ್ಬು ಬೆಳೆ ಅಧಿಕವಾಗಿದೆ. ಆದರೆ, ಈ ಪ್ರೋತ್ಸಾಹ ಧನದಲ್ಲಿ  ಹೆಚ್ಚುಪಾಲು ಉತ್ತರ ಪ್ರದೇಶಕ್ಕೆ ಬಿಡುಗಡೆ ಆಗಿದೆ ಎಂದು ಕುರುಬೂರು ಶಾಂತಕುಮಾರ್​ರಿಂದ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಡೇಕರ್ ಹೇಳಿದ್ದೇನು? ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಕೇಂದ್ರ ಸಚಿವ ಪ್ರಕಾಶ್​ ಜಾವಡೇಕರ್, ’60 ಲಕ್ಷ ಟನ್ ಸಕ್ಕರೆ ರಫ್ತು ಮಾಡಲಾಗುವುದು. ಕೇಂದ್ರ ಸರ್ಕಾರದ ಈ ನಿರ್ಧಾರದಿಂದ 5 ಕೋಟಿ ಕಬ್ಬು ಬೆಳೆಗಾರರಿಗೆ ಲಾಭವಾಗಲಿದ್ದು, ಈ ಸಬ್ಸಿಡಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಆಗುತ್ತದೆ’ ಎಂದು ಹೇಳಿದ್ದರು.

ಕಬ್ಬು ಬೆಳೆಗಾರರಿಗೆ ₹3,500 ಕೋಟಿ ಸಬ್ಸಿಡಿ: ಕೇಂದ್ರ ಅನುಮೋದನೆ

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ