AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಎತ್ತಿರುವ ಈ ಪ್ರಶ್ನೆಗಳಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಉತ್ತರವೇನು?

Union Minister Pralhad Joshi: ಯುವನಿಧಿ ಯೋಜನೆಯು 2022-23 ನೇ ಸಾಲಿನ ಪದವೀಧರರಿಗೆ ಮಾತ್ರ ಎಂದು ಹೇಳಿದ್ದಾರೆ. ಹಿಂದೆ ಪದವಿ ಪಡೆದವರೆಲ್ಲ ನಿರುದ್ಯೋಗಿಗಳಿಲ್ಲವೇನು..? ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಎತ್ತಿರುವ ಈ ಪ್ರಶ್ನೆಗಳಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಉತ್ತರವೇನು?
ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಎತ್ತಿರುವ ಈ ಪ್ರಶ್ನೆಗಳು
ಸಾಧು ಶ್ರೀನಾಥ್​
|

Updated on: Jun 04, 2023 | 5:24 AM

Share

ಧಾರವಾಡ: ಚುನಾವಣೆಯಲ್ಲಿ 5 ಗ್ಯಾರಂಟಿಗಳ ಘೋಷಿಸಿ (Guarantee Scheme) ಜನರಿಂದ ಮತ ಪಡೆದಿದ್ದ ಕಾಂಗ್ರೆಸ್, ಈಗ ರಾಜ್ಯದ ಜನರಿಗೆ ಮೋಸ ಮಾಡಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. ಧಾರವಾಡದಲ್ಲಿಂದು (Dharwad) ಮಾತನಾಡಿದ ಅವರು, ಕಾಂಗ್ರೆಸ್ ಹೇಳಿದ್ದೊಂದು, ಈಗ ಮಾಡ್ತಿರುವುದು ಇನ್ನೊಂದು. ಕಾಂಗ್ರೆಸ್ ಈ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲು ಹಾಕುತ್ತಿರುವ ಷರತ್ತುಗಳನ್ನು ನೋಡಿದರೆ ಈ ಐದು ಗ್ಯಾರಂಟಿಗಳಿಗೆ ಯಾವ ವಾರಂಟಿಯೂ ಇಲ್ಲ ಎಂದರು.

ಕಾಂಗ್ರೆಸ್ ನಾಯಕರು ಚುನಾವಣೆ ವೇಳೆ ಹೇಳಿದಂತೆ 200 ಯುನಿಟ್ ವಿದ್ಯುತ್ ಅನ್ನು ಏಕೆ ಫ್ರೀ ಕೊಡ್ತಿಲ್ಲ..? ಎಂದು ಪ್ರಶ್ನಿಸಿದ ಪ್ರಲ್ಹಾದ್ ಜೋಶಿ, ಮುಖ್ಯಮಂತ್ರಿಗಳು ರಾಜ್ಯದ ಜನರಿಗೆ ಈ ಬಗ್ಗೆ ಸ್ಪಷ್ಟ ಉತ್ತರ ಕೊಡಬೇಕು ಎಂದರು.

ಅಧಿಕಾರದ ಮದದಲ್ಲಿ ಕಾಂಗ್ರೆಸ್ ನಾಯಕರು ಅಹಂಕಾರ, ಉಡಾಫೆ ಮಾತುಗಳನ್ನಾಡಿದ್ರೆ ಜನರು ತಕ್ಕ ಪಾಠ ಕಲಿಸ್ತಾರೆ. ದೇಶದಲ್ಲಿ ಇವತ್ತು ಕಾಂಗ್ರೆಸ್ ಪರಿಸ್ಥಿತಿ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಈಗ ಕರ್ನಾಟಕದಲ್ಲಿ ಗ್ಯಾರಂಟಿಗಳ ಆಮಿಷ ಒಡ್ಡಿ ಅಧಿಕಾರಕ್ಕೆ ಬಂದಿರಬಹುದು. ಅಂದಮಾತ್ರಕ್ಕೆ ಬೊಮ್ಮಾಯಿ ಅವರೇ ನಿಮಗೂ ಫ್ರೀ ಕೊಡ್ತೇವೆ ಎಂಬ ಅಹಂಕಾರದ ಮಾತುಗಳನ್ನಾಡಿದ್ದಾರೆ. ಮಹಾರಾಷ್ಟ್ರದಂತಹ ರಾಜ್ಯದಿಂದ ಕಾಂಗ್ರೆಸ್ ಒಂದೇ ಒಂದು ಸಂಸದ ಸ್ಥಾನವನ್ನೂ ಪ್ರತಿನಿಧಿಸಿಲ್ಲ. ಇಂತಹ ಪರಿಸ್ಥಿತಿಯಲ್ಲಿರುವ ಕಾಂಗ್ರೆಸ್ ದುರಹಂಕಾರದ ಮಾತುಗಳನ್ನಾಡೋದನ್ನ ಬಿಡಲಿ, ಜನರಿಗೆ ಹೇಳಿದ್ದನ್ನ ಕೊಡಲಿ ಎಂದು ಆಗ್ರಹಿಸಿದ್ದಾರೆ.

ಅನ್ನಭಾಗ್ಯ ಯೋಜನೆಯಲ್ಲಿ 10 ಕೆ.ಜಿ. ಅಕ್ಕಿ ಕೊಡ್ತೇವೆ ಎಂದು ಹೇಳಿದ್ದರು. ಈಗಾಗಲೇ ಕೇಂದ್ರ ಸರ್ಕಾರ 5 ಕೆ.ಜಿ ಅಕ್ಕಿಯನ್ನ ಬಿಪಿಎಲ್ ಕಾರ್ಡುದಾರರಿಗೆ ಕೊಡುತ್ತಿದೆ. ಕೇಂದ್ರ ಸರ್ಕಾರ ನೀಡುತ್ತಿರುವುದನ್ನ ಹೊರತುಪಡಿಸಿ ರಾಜ್ಯ ಸರ್ಕಾರ 10 ಕೆ.ಜಿ ಅಕ್ಕಿ ನೀಡುತ್ತಾ? ಸಿಎಂ ಇದಕ್ಕೆ ಉತ್ತರ ಕೊಡಬೇಕು. ಅಥವಾ ಕೇಂದ್ರ ಸರ್ಕಾರ ನೀಡುವ 5 ಕೆ.ಜಿ. ಸೇರಿ 10 ಕೆ.ಜಿ ಅಕ್ಕಿ ವಿತರಿಸುವುದಾದರೆ, ಕಾಂಗ್ರೆಸ್ ಸರ್ಕಾರ 10 ಕೆ.ಜಿ ಅಕ್ಕಿ ಕೊಟ್ಟಂತೆ ಹೇಗಾಗುತ್ತೆ ಎಂದು ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ.

Also read:  ಹುಬ್ಬಳ್ಳಿ-ಧಾರವಾಡ ಬೈಪಾಸ್ 6 ಲೈನ್ ರಸ್ತೆ ಮೊದಲ ಹಂತ ಡಿಸೆಂಬರ್ ಒಳಗೆ ಪೂರ್ಣಗೊಳ್ಳಲಿದೆ

ಗೃಹ ಲಕ್ಷ್ಮೀ ಯೋಜನೆಯಲ್ಲಿ 2,000 ರೂಪಾಯಿ ವಿತರಿಸುವುದಕ್ಕೆ ಅರ್ಜಿ ಹಾಕಿ ಅಂತಾ ಕಾಂಗ್ರೆಸ್ ಈಗ ಹೇಳುತ್ತೆ. ಮೊದಲೇ ಏಕೆ ಹೇಳಲಿಲ್ಲ. ಮೊದಲ ಕ್ಯಾಬಿನೆಟ್ ನಲ್ಲೇ ಜಾರಿ ಮಾಡ್ತೇವೆ ಎಂದವರು ಈಗ ಅಗಸ್ಟ್ ನಿಂದ ಅಂತಿದ್ದಾರೆ. ಮೊದಲ ಕ್ಯಾಬಿನೆಟ್ ನಲ್ಲಿ ತಾತ್ವಿಕ ಒಪ್ಪಿಗೆ ಕೊಟ್ಟಿದ್ದೇವೆ ಎಂದು ನೆಪ ಹೇಳಿ ಸಮಯ ತಳ್ಳುವುದು ಕಾಂಗ್ರೆಸ್ ನ ಪ್ಲಾನ್. ಕಾಂಗ್ರೆಸ್ ತನ್ನ ಪ್ರಣಾಳಿಕೆ ವೇಳೆಯೇ ಘೋಷಿಸಿದ್ದು ತಾತ್ವಿಕ ಒಪ್ಪಿಗೆಯಂತೆಯೇ ಸರಿ. ಅಧಿಕಾರಕ್ಕೆ ಬಂದ ಮೇಲೆ ಅದನ್ನ ಜನರಿಗೆ ತಲುಪಿಸುವತ್ತ ಕಾಂಗ್ರೆಸ್ ಕಾರ್ಯನಿರತವಾಗಬೇಕು.

ಯುವನಿಧಿ ಯೋಜನೆಯು 2022-23 ನೇ ಸಾಲಿನ ಪದವೀಧರರಿಗೆ ಮಾತ್ರ ಎಂದು ಹೇಳಿದ್ದಾರೆ. ಹಿಂದೆ ಪದವಿ ಪಡೆದವರೆಲ್ಲ ನಿರುದ್ಯೋಗಿಗಳಿಲ್ಲವೇನು..? ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ. ಅದರಲ್ಲೂ 6 ತಿಂಗಳ ವರೆಗೆ ಯಾವುದೇ ಉದ್ಯೋಗ ಸಿಗದಿದ್ದವರಿಗೆ ಮಾತ್ರ ಯುವನಿಧಿ ಕೊಡಲಾಗುವುದು ಎಂದಿದ್ದಾರೆ. ಅಂದರೆ ಡಿಗ್ರಿ ಮುಗಿಸಿದ ಬಳಿಕ ಯುವಕರು ಯುವನಿಧಿಗಾಗಿ 6 ತಿಂಗಳು ಕಾಯಬೇಕು. ಈ ವರ್ಷ ಈ ಯುವನಿಧಿ ಯೋಜನೆ ಜಾರಿಗೆ ಬರಲ್ಲ ಅನ್ನೋ ರೀತಿಯಲ್ಲಿ ಇವರ ಕಂಡಿಷನ್ ಗಳಿವೆ. ಈ ಎಲ್ಲ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಆಗ್ರಹಿಸಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ